<p><strong>ಸಹಾರನ್ಪುರ (ಉತ್ತರ ಪ್ರದೇಶ):</strong> ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಹಂಚಿಕೊಂಡಿದ್ದಕ್ಕಾಗಿ ಹಾಗೂ ಪಾಕಿಸ್ತಾನದ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಇಲ್ಲಿನ ದೇವಬಂದ್ನ ಮುಸ್ಲಿಂ ಧರ್ಮಗುರುವೊಬ್ಬರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ವಿರೋಧಿ ದಳ (ಎಟಿಎಸ್) ಬಂಧಿಸಿದೆ.</p>.<p>ದೇವಬಂದ್ನ ಮಿಲ್ ವಾಲಾ ಪಾಠಕ್ ಮೇಲೆ ದಾಳಿ ನಡೆಸಿದ ಎಟಿಎಸ್ ಇನ್ಸ್ಪೆಕ್ಟರ್ ಸುಧೀರ್ ಉಜ್ವಲ್ ಅವರು ಆರೋಪಿ ಮುಫ್ತಿ ಜಾಕಿರ್ನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಸಿಎಎ, ಎನ್ಆರ್ಸಿ, ಯುಜಿಸಿ, ಎಸ್ಐಆರ್, ರಾಮಮಂದಿರಕ್ಕೆ ಸಂಬಂಧಿಸಿದ ತೀರ್ಪು ಹಾಗೂ ಐ ಲವ್ ಮೊಹಮ್ಮದ್ ಪ್ರತಿಭಟನೆ ಸಮಯದಲ್ಲಿ ತೆಗೆದುಕೊಂಡ ಕ್ರಮಗಳನ್ನು ವಿರೋಧಿಸುವ ಮೂಲಕ ಜನರನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮದ ಮೂಲಕ ಸಂದೇಶಗಳನ್ನು ಜಾಕೀರ್ ಹಂಚಿಕೊಂಡಿದ್ದರು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.</p>.<p>ಜೈಲಿನಲ್ಲಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ವಿಡಿಯೊಗಳಿಂದ ಸ್ಫೂರ್ತಿ ಪಡೆದಿದ್ದಾರೆ. ಹಿಂದೂ– ಮುಸ್ಲಿಮರ ಒಗ್ಗಟ್ಟು ಪ್ರತಿಪಾದಿಸುವ ಇಸ್ಲಾಮಿಕ್ ವಿದ್ವಾಂಸರು ಹಾಗೂ ರಾಜಕಾರಣಿಗಳ ಬಗ್ಗೆಯೂ ಅವರು ದ್ವೇಷ ಹೊಂದಿದ್ದಾರೆ ಎಂದು ಪೊಲೀಸರು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಪಾಕಿಸ್ತಾನದ ವ್ಯಕ್ತಿಗಳು ಹಾಗೂ ಗುಂಪುಗಳೊಂದಿಗೆ ವಾಟ್ಸ್ಆ್ಯಪ್ ಮೂಲಕ ಜಾಕಿರ್ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಹಾರನ್ಪುರ (ಉತ್ತರ ಪ್ರದೇಶ):</strong> ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಹಂಚಿಕೊಂಡಿದ್ದಕ್ಕಾಗಿ ಹಾಗೂ ಪಾಕಿಸ್ತಾನದ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಇಲ್ಲಿನ ದೇವಬಂದ್ನ ಮುಸ್ಲಿಂ ಧರ್ಮಗುರುವೊಬ್ಬರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ವಿರೋಧಿ ದಳ (ಎಟಿಎಸ್) ಬಂಧಿಸಿದೆ.</p>.<p>ದೇವಬಂದ್ನ ಮಿಲ್ ವಾಲಾ ಪಾಠಕ್ ಮೇಲೆ ದಾಳಿ ನಡೆಸಿದ ಎಟಿಎಸ್ ಇನ್ಸ್ಪೆಕ್ಟರ್ ಸುಧೀರ್ ಉಜ್ವಲ್ ಅವರು ಆರೋಪಿ ಮುಫ್ತಿ ಜಾಕಿರ್ನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಸಿಎಎ, ಎನ್ಆರ್ಸಿ, ಯುಜಿಸಿ, ಎಸ್ಐಆರ್, ರಾಮಮಂದಿರಕ್ಕೆ ಸಂಬಂಧಿಸಿದ ತೀರ್ಪು ಹಾಗೂ ಐ ಲವ್ ಮೊಹಮ್ಮದ್ ಪ್ರತಿಭಟನೆ ಸಮಯದಲ್ಲಿ ತೆಗೆದುಕೊಂಡ ಕ್ರಮಗಳನ್ನು ವಿರೋಧಿಸುವ ಮೂಲಕ ಜನರನ್ನು ಪ್ರಚೋದಿಸಲು ಸಾಮಾಜಿಕ ಮಾಧ್ಯಮದ ಮೂಲಕ ಸಂದೇಶಗಳನ್ನು ಜಾಕೀರ್ ಹಂಚಿಕೊಂಡಿದ್ದರು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.</p>.<p>ಜೈಲಿನಲ್ಲಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ವಿಡಿಯೊಗಳಿಂದ ಸ್ಫೂರ್ತಿ ಪಡೆದಿದ್ದಾರೆ. ಹಿಂದೂ– ಮುಸ್ಲಿಮರ ಒಗ್ಗಟ್ಟು ಪ್ರತಿಪಾದಿಸುವ ಇಸ್ಲಾಮಿಕ್ ವಿದ್ವಾಂಸರು ಹಾಗೂ ರಾಜಕಾರಣಿಗಳ ಬಗ್ಗೆಯೂ ಅವರು ದ್ವೇಷ ಹೊಂದಿದ್ದಾರೆ ಎಂದು ಪೊಲೀಸರು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಪಾಕಿಸ್ತಾನದ ವ್ಯಕ್ತಿಗಳು ಹಾಗೂ ಗುಂಪುಗಳೊಂದಿಗೆ ವಾಟ್ಸ್ಆ್ಯಪ್ ಮೂಲಕ ಜಾಕಿರ್ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>