ನೈಸರ್ಗಿಕ ವಿಪತ್ತು ನಿರ್ವಹಣೆಗೆ ಹೆಚ್ಚು ಒತ್ತು ಅಗತ್ಯ ಎಂದು ಪ್ರತಿಪಾದಿಸುತ್ತಲೇ ಬಂದಿರುವ ಭಾರತ ಈ ವಿಷಯದತ್ತ ಜಗತ್ತಿನ ಗಮನ ಸೆಳೆದಿತ್ತು. ಉತ್ತರಾಖಂಡದಲ್ಲಿ ಇತ್ತೀಚೆಗೆ ಸಂಭವಿಸಿದ ಅವಘಡ ಇದಕ್ಕೆ ತಾಜಾ ನಿದರ್ಶನ. ಈ ಕಾರಣಕ್ಕೆ, ವಿಪತ್ತು ಪ್ರತಿರೋಧಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯ ಎಂದರು.