<p><strong>ಪ್ರಯಾಗರಾಜ್</strong>: ಹವಾಮಾನ ಬದಲಾವಣೆಯಿಂದ ನದಿಗಳು ಬರಿದಾಗುತ್ತಿವೆ. ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯಲ್ಲಿ ಆಗುತ್ತಿರುವ ಭಾರಿ ಪ್ರಮಾಣದ ಏರಿಕೆ ಬಗ್ಗೆ ಟೀಕೆಗಳನ್ನು ಮಾಡುತ್ತಾ ಕೂರುವ ಬದಲು, ಜನರು ತುರ್ತು ಕ್ರಮಕ್ಕೆ ಮುಂದಾಗಬೇಕಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.</p><p>ಮಹಾ ಕುಂಭಮೇಳದಲ್ಲಿ ನಡೆದ 'ಹವಾಮಾನ ಬದಲಾವಣೆ, ಪರಿಸರ ಮತ್ತು ನಂಬಿಕೆ' ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಯೋಗಿ, ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿನ ನದಿಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯ ಮಾಡಿದೆ. ಕುಂಭಮೇಳವು ಭಾರಿ ಸಂಖ್ಯೆಯ ಜನಸ್ತೋಮಕ್ಕೆ ಸಾಕ್ಷಿಯಾಗಿರುವುದು ಅದೇ ಕಾರಣಕ್ಕೆ ಎಂದು ಪ್ರತಿಪಾದಿಸಿದ್ದಾರೆ.</p><p>'ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಹವಾಮಾನ ಬದಲಾವಣೆಗೆ ಕಾರಣವಾಗುತ್ತಿದೆ. ಇದು, ಭೂಮಿ ತಾಯಿಯ ಜೀವನಾಡಿಯಾಗಿರುವ ನದಿಗಳನ್ನು ಒಣಗಿಸುತ್ತಿದೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಭೀಕರತೆ ವಿವರಿಸಿದ ಕೂಲಿಗಳು.Explainer | ದೇಶದಲ್ಲಿ ನಡೆದ ಪ್ರಮುಖ ಕಾಲ್ತುಳಿತ ದುರ್ಘಟನೆಗಳ ಪಟ್ಟಿ ಇಲ್ಲಿದೆ.<p>'ಜನರು ಪರಸ್ಪರ ದೂರುತ್ತಾ ಕೂರುತ್ತಾರೆಯೇ ಹೊರತು, ಹವಾಮಾನ ಬದಲಾವಣೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಣೆ ಹೊತ್ತುಕೊಳ್ಳುವುದಿಲ್ಲ. ಆ ನಿಟ್ಟಿನಲ್ಲಿ, ನಾವೆಲ್ಲರೂ ಸಾಮೂಹಿಕವಾಗಿ ಮತ್ತು ವೈಯಕ್ತಿವಾಗಿ ಕಾರ್ಯ ಪ್ರವೃತ್ತವಾಗಬೇಕಾದ ಸಮಯ ಇದಾಗಿದೆ' ಎಂದು ಕರೆ ನೀಡಿದ್ದಾರೆ.</p><p>10 ವರ್ಷಗಳ ಹಿಂದೆ ಗಂಗಾ ಮತ್ತು ಯಮುನಾ ನದಿಗಳು ಈಗ ಇರುವಷ್ಟು ಸ್ವಚ್ಛವಾಗಿ ಇರಲಿಲ್ಲ. ಆದರೆ, ಯುಪಿ ಸರ್ಕಾರ ಈ ನದಿಗಳನ್ನು ಪುನರುಜ್ಜೀವನಗೊಳಿಸಿದೆ ಎಂದು ಹೇಳಿಕೊಂಡಿದ್ದಾರೆ.</p><p>'ನದಿ ನೀರು ಶುದ್ಧವಾಗಿರುವುದರಿಂದ ಹಾಗೂ ಉತ್ತಮವಾದ ವ್ಯವಸ್ಥೆಗಳನ್ನು ಕಲ್ಪಿಸಿರುವುದರಿಂದಾಗಿ, ಜನರು ಭಾರಿ ಪ್ರಮಾಣದಲ್ಲಿ ಕುಂಭಮೇಳಕ್ಕೆ ಬರುತ್ತಿದ್ದಾರೆ' ಎಂದಿದ್ದಾರೆ.</p><p>ಹವಾಮಾನ ಬದಲಾವಣೆ ತಗ್ಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿತು. ಮನೆಗಳಿಂದ ಹೊಗೆ ಹೊರಬರುವುದನ್ನು ನಿಯಂತ್ರಿಸಲು ಸುಮಾರು 10 ಕೋಟಿ ಎಲ್ಪಿಜಿ ಸಂಪರ್ಕ ಕಲ್ಪಿಸಿದೆ ಎಂದು ಶ್ಲಾಘಿಸಿದ್ದಾರೆ.</p><p>ಉತ್ತರ ಪ್ರದೇಶ ಸರ್ಕಾರವು, ಕಳೆದ 10 ವರ್ಷಗಳಲ್ಲಿ 210 ಕೋಟಿ ಗಿಡಗಳನ್ನು ನೆಟ್ಟಿದೆ. ಈ ಪೈಕಿ ಶೇ 70 ರಿಂದ ಶೇ 80ರಷ್ಟು ಉಳಿದುಕೊಂಡಿವೆ ಎಂದಿದ್ದಾರೆ. ಹಾಗೆಯೇ, ಮಾನವ ಸಂಕುಲವನ್ನು ಕಾಪಾಡುವ ನಿಟ್ಟಿನಲ್ಲಿ ನದಿಗಳನ್ನು ಅತಿಕ್ರಮಿಸದಂತೆ ಹಾಗೂ ವನ್ಯಜೀವಿಗಳನ್ನು ರಕ್ಷಿಸುವಂತೆ ಜನರಿಗೆ ಕರೆ ನೀಡಿದ್ದಾರೆ.</p>.ಮಹಾ ಕುಂಭಮೇಳ: UP – MP ಗಡಿಯಲ್ಲಿ ವಾರಾಂತ್ಯದಲ್ಲಿ ವಿಪರೀತ ವಾಹನ ಸಂಚಾರ.‘ಪ್ರಯಾಗರಾಜ್’ ಹೆಸರಿನ ರೈಲುಗಳ ಗೊಂದಲದಿಂದಲೇ ಕಾಲ್ತುಳಿತ ಸಂಭವಿಸಿದೆ: ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್</strong>: ಹವಾಮಾನ ಬದಲಾವಣೆಯಿಂದ ನದಿಗಳು ಬರಿದಾಗುತ್ತಿವೆ. ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯಲ್ಲಿ ಆಗುತ್ತಿರುವ ಭಾರಿ ಪ್ರಮಾಣದ ಏರಿಕೆ ಬಗ್ಗೆ ಟೀಕೆಗಳನ್ನು ಮಾಡುತ್ತಾ ಕೂರುವ ಬದಲು, ಜನರು ತುರ್ತು ಕ್ರಮಕ್ಕೆ ಮುಂದಾಗಬೇಕಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.</p><p>ಮಹಾ ಕುಂಭಮೇಳದಲ್ಲಿ ನಡೆದ 'ಹವಾಮಾನ ಬದಲಾವಣೆ, ಪರಿಸರ ಮತ್ತು ನಂಬಿಕೆ' ಕುರಿತ ಸಮ್ಮೇಳನದಲ್ಲಿ ಮಾತನಾಡಿದ ಯೋಗಿ, ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿನ ನದಿಗಳನ್ನು ಪುನರುಜ್ಜೀವನಗೊಳಿಸುವ ಕಾರ್ಯ ಮಾಡಿದೆ. ಕುಂಭಮೇಳವು ಭಾರಿ ಸಂಖ್ಯೆಯ ಜನಸ್ತೋಮಕ್ಕೆ ಸಾಕ್ಷಿಯಾಗಿರುವುದು ಅದೇ ಕಾರಣಕ್ಕೆ ಎಂದು ಪ್ರತಿಪಾದಿಸಿದ್ದಾರೆ.</p><p>'ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಹವಾಮಾನ ಬದಲಾವಣೆಗೆ ಕಾರಣವಾಗುತ್ತಿದೆ. ಇದು, ಭೂಮಿ ತಾಯಿಯ ಜೀವನಾಡಿಯಾಗಿರುವ ನದಿಗಳನ್ನು ಒಣಗಿಸುತ್ತಿದೆ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಭೀಕರತೆ ವಿವರಿಸಿದ ಕೂಲಿಗಳು.Explainer | ದೇಶದಲ್ಲಿ ನಡೆದ ಪ್ರಮುಖ ಕಾಲ್ತುಳಿತ ದುರ್ಘಟನೆಗಳ ಪಟ್ಟಿ ಇಲ್ಲಿದೆ.<p>'ಜನರು ಪರಸ್ಪರ ದೂರುತ್ತಾ ಕೂರುತ್ತಾರೆಯೇ ಹೊರತು, ಹವಾಮಾನ ಬದಲಾವಣೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹೊಣೆ ಹೊತ್ತುಕೊಳ್ಳುವುದಿಲ್ಲ. ಆ ನಿಟ್ಟಿನಲ್ಲಿ, ನಾವೆಲ್ಲರೂ ಸಾಮೂಹಿಕವಾಗಿ ಮತ್ತು ವೈಯಕ್ತಿವಾಗಿ ಕಾರ್ಯ ಪ್ರವೃತ್ತವಾಗಬೇಕಾದ ಸಮಯ ಇದಾಗಿದೆ' ಎಂದು ಕರೆ ನೀಡಿದ್ದಾರೆ.</p><p>10 ವರ್ಷಗಳ ಹಿಂದೆ ಗಂಗಾ ಮತ್ತು ಯಮುನಾ ನದಿಗಳು ಈಗ ಇರುವಷ್ಟು ಸ್ವಚ್ಛವಾಗಿ ಇರಲಿಲ್ಲ. ಆದರೆ, ಯುಪಿ ಸರ್ಕಾರ ಈ ನದಿಗಳನ್ನು ಪುನರುಜ್ಜೀವನಗೊಳಿಸಿದೆ ಎಂದು ಹೇಳಿಕೊಂಡಿದ್ದಾರೆ.</p><p>'ನದಿ ನೀರು ಶುದ್ಧವಾಗಿರುವುದರಿಂದ ಹಾಗೂ ಉತ್ತಮವಾದ ವ್ಯವಸ್ಥೆಗಳನ್ನು ಕಲ್ಪಿಸಿರುವುದರಿಂದಾಗಿ, ಜನರು ಭಾರಿ ಪ್ರಮಾಣದಲ್ಲಿ ಕುಂಭಮೇಳಕ್ಕೆ ಬರುತ್ತಿದ್ದಾರೆ' ಎಂದಿದ್ದಾರೆ.</p><p>ಹವಾಮಾನ ಬದಲಾವಣೆ ತಗ್ಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿತು. ಮನೆಗಳಿಂದ ಹೊಗೆ ಹೊರಬರುವುದನ್ನು ನಿಯಂತ್ರಿಸಲು ಸುಮಾರು 10 ಕೋಟಿ ಎಲ್ಪಿಜಿ ಸಂಪರ್ಕ ಕಲ್ಪಿಸಿದೆ ಎಂದು ಶ್ಲಾಘಿಸಿದ್ದಾರೆ.</p><p>ಉತ್ತರ ಪ್ರದೇಶ ಸರ್ಕಾರವು, ಕಳೆದ 10 ವರ್ಷಗಳಲ್ಲಿ 210 ಕೋಟಿ ಗಿಡಗಳನ್ನು ನೆಟ್ಟಿದೆ. ಈ ಪೈಕಿ ಶೇ 70 ರಿಂದ ಶೇ 80ರಷ್ಟು ಉಳಿದುಕೊಂಡಿವೆ ಎಂದಿದ್ದಾರೆ. ಹಾಗೆಯೇ, ಮಾನವ ಸಂಕುಲವನ್ನು ಕಾಪಾಡುವ ನಿಟ್ಟಿನಲ್ಲಿ ನದಿಗಳನ್ನು ಅತಿಕ್ರಮಿಸದಂತೆ ಹಾಗೂ ವನ್ಯಜೀವಿಗಳನ್ನು ರಕ್ಷಿಸುವಂತೆ ಜನರಿಗೆ ಕರೆ ನೀಡಿದ್ದಾರೆ.</p>.ಮಹಾ ಕುಂಭಮೇಳ: UP – MP ಗಡಿಯಲ್ಲಿ ವಾರಾಂತ್ಯದಲ್ಲಿ ವಿಪರೀತ ವಾಹನ ಸಂಚಾರ.‘ಪ್ರಯಾಗರಾಜ್’ ಹೆಸರಿನ ರೈಲುಗಳ ಗೊಂದಲದಿಂದಲೇ ಕಾಲ್ತುಳಿತ ಸಂಭವಿಸಿದೆ: ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>