<p><strong>ಪಟ್ನಾ</strong>: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಹಜವಾಗಿ ಕರ್ತವ್ಯ ನಿರ್ವಹಿಸಲು ಆಗುತ್ತಿಲ್ಲ, ಅವರನ್ನು ಕೆಲವು ನಿಕಟವರ್ತಿಗಳು ‘ಹಿಡಿದಿಟ್ಟುಕೊಂಡಿದ್ದಾರೆ’ ಎಂದು ಆರ್ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಶನಿವಾರ ಆರೋಪಿಸಿದ್ದಾರೆ.</p>.<p>ತೇಜಸ್ವಿ ಯಾದವ್ ಅವರು ಈ ಹಿಂದೆ ನಿತೀಶ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. ‘ನಿತೀಶ್ ಅವರಿಗೆ ಏನೂ ಗೊತ್ತಾಗುತ್ತಿಲ್ಲ. ಅವರು ಬಿಹಾರವನ್ನು ಮುನ್ನಡೆಸಲು ಅಸಮರ್ಥರಾಗಿದ್ದಾರೆ’ ಎಂದು ತೇಜಸ್ವಿ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರವಾಗಿ ಹೇಳಿದ್ದಾರೆ.</p>.<p>‘ನಿತೀಶ್ ಅವರು ತಾವಾಗಿಯೇ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಅವರ ಪಕ್ಷದ ನಾಲ್ಕು ಮಂದಿ ನಾಯಕರು, ದೆಹಲಿಯ ಇಬ್ಬರು ಹಾಗೂ ಇಲ್ಲಿನ ಇನ್ನುಳಿದವರು ನಿತೀಶ್ ಅವರನ್ನು ಹಿಡಿದಿಟ್ಟುಕೊಂಡಿದ್ದಾರೆ. ಅವರೇ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದು ತೇಜಸ್ವಿ ಅವರು ಹೇಳಿದ್ದಾರೆ.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂಬ ಆರೋಪವನ್ನು ಉಲ್ಲೇಖಿಸಿ, ಬಿಜೆಪಿಗೆ ನೀಡಿರುವ ಬೆಂಬಲದ ಬಗ್ಗೆ ಮರುಚಿಂತನೆ ನಡೆಸುವಂತೆ ಕೋರಿ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ನಿತೀಶ್ ಅವರಿಗೆ ಪತ್ರ ಬರೆದಿದ್ದರು. ಆದರೆ ಈ ಪತ್ರಕ್ಕೆ ಸಂಜಯ್ ಝಾ ಅವರಿಂದ ಉತ್ತರ ಬಂದಿದೆ. ಪತ್ರಕ್ಕೆ ಉತ್ತರಿಸಲು ಝಾ ಯಾರು ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಸಹಜವಾಗಿ ಕರ್ತವ್ಯ ನಿರ್ವಹಿಸಲು ಆಗುತ್ತಿಲ್ಲ, ಅವರನ್ನು ಕೆಲವು ನಿಕಟವರ್ತಿಗಳು ‘ಹಿಡಿದಿಟ್ಟುಕೊಂಡಿದ್ದಾರೆ’ ಎಂದು ಆರ್ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಶನಿವಾರ ಆರೋಪಿಸಿದ್ದಾರೆ.</p>.<p>ತೇಜಸ್ವಿ ಯಾದವ್ ಅವರು ಈ ಹಿಂದೆ ನಿತೀಶ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. ‘ನಿತೀಶ್ ಅವರಿಗೆ ಏನೂ ಗೊತ್ತಾಗುತ್ತಿಲ್ಲ. ಅವರು ಬಿಹಾರವನ್ನು ಮುನ್ನಡೆಸಲು ಅಸಮರ್ಥರಾಗಿದ್ದಾರೆ’ ಎಂದು ತೇಜಸ್ವಿ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರವಾಗಿ ಹೇಳಿದ್ದಾರೆ.</p>.<p>‘ನಿತೀಶ್ ಅವರು ತಾವಾಗಿಯೇ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಅವರ ಪಕ್ಷದ ನಾಲ್ಕು ಮಂದಿ ನಾಯಕರು, ದೆಹಲಿಯ ಇಬ್ಬರು ಹಾಗೂ ಇಲ್ಲಿನ ಇನ್ನುಳಿದವರು ನಿತೀಶ್ ಅವರನ್ನು ಹಿಡಿದಿಟ್ಟುಕೊಂಡಿದ್ದಾರೆ. ಅವರೇ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ’ ಎಂದು ತೇಜಸ್ವಿ ಅವರು ಹೇಳಿದ್ದಾರೆ.</p>.<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂಬ ಆರೋಪವನ್ನು ಉಲ್ಲೇಖಿಸಿ, ಬಿಜೆಪಿಗೆ ನೀಡಿರುವ ಬೆಂಬಲದ ಬಗ್ಗೆ ಮರುಚಿಂತನೆ ನಡೆಸುವಂತೆ ಕೋರಿ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ನಿತೀಶ್ ಅವರಿಗೆ ಪತ್ರ ಬರೆದಿದ್ದರು. ಆದರೆ ಈ ಪತ್ರಕ್ಕೆ ಸಂಜಯ್ ಝಾ ಅವರಿಂದ ಉತ್ತರ ಬಂದಿದೆ. ಪತ್ರಕ್ಕೆ ಉತ್ತರಿಸಲು ಝಾ ಯಾರು ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>