<p><strong>ಕೊಚ್ಚಿ</strong>: ನ್ಯಾಯಮೂರ್ತಿ ಹೇಮಾ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯನ್ನು ಆಧರಿಸಿ ದಾಖಲಿಸಿದ್ದ ಎಲ್ಲ 35 ಪ್ರಕರಣಗಳನ್ನೂ ಮುಕ್ತಾಯಗೊಳಿಸುತ್ತಿರುವುದಾಗಿ ವಿಶೇಷ ತನಿಖಾ ತಂಡವು (ಎಸ್ಐಟಿ) ಕೇರಳ ಹೈಕೋರ್ಟ್ಗೆ ಬುಧವಾರ ತಿಳಿಸಿದೆ.</p>.<p>ಮಲಯಾಳ ಚಿತ್ರೋದ್ಯಮದಲ್ಲಿ ಮಹಿಳೆಯರ ಶೋಷಣೆ ಕುರಿತು ದಾಖಲಾಗಿರುವ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಯಾವುದೇ ಸಂತ್ರಸ್ತೆಯರು ಮುಂದೆಬಾರದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಎಸ್ಐಟಿ ಹೇಳಿದೆ.</p>.<p>ಹೇಮಾ ಸಮಿತಿಯ ವರದಿಯ ಆಧಾರದಲ್ಲೇ ಎಲ್ಲ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ಹಲವು ಅರ್ಜಿಗಳು ಕೇರಳ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದವು. ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಹಾಗೂ ನ್ಯಾ.ಸಿ.ಎಸ್ ಸುಧಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಈ ಕಾರಣ ಎಸ್ಐಟಿಯು ಪ್ರಕರಣಗಳನ್ನು ಮುಕ್ತಾಯಗೊಳಿಸುತ್ತಿರುವ ತನ್ನ ನಿರ್ಧಾರವನ್ನು ನ್ಯಾಯಪೀಠಕ್ಕೆ ತಿಳಿಸಿದೆ.</p>.<p>ಈ ಕಾರಣದಿಂದ ಸದ್ಯಕ್ಕೆ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಜತೆಗೆ ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರ ಸಿನಿಮಾ ಸಮ್ಮೇಳನ ನಡೆಸುತ್ತಿದ್ದು, ಆಗಸ್ಟ್ 13ರ ಬಳಿಕ ಈ ಅರ್ಜಿಗಳ ವಿಚಾರಣೆ ಮುಂದುವರಿಸುವುದಾಗಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ನ್ಯಾಯಮೂರ್ತಿ ಹೇಮಾ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯನ್ನು ಆಧರಿಸಿ ದಾಖಲಿಸಿದ್ದ ಎಲ್ಲ 35 ಪ್ರಕರಣಗಳನ್ನೂ ಮುಕ್ತಾಯಗೊಳಿಸುತ್ತಿರುವುದಾಗಿ ವಿಶೇಷ ತನಿಖಾ ತಂಡವು (ಎಸ್ಐಟಿ) ಕೇರಳ ಹೈಕೋರ್ಟ್ಗೆ ಬುಧವಾರ ತಿಳಿಸಿದೆ.</p>.<p>ಮಲಯಾಳ ಚಿತ್ರೋದ್ಯಮದಲ್ಲಿ ಮಹಿಳೆಯರ ಶೋಷಣೆ ಕುರಿತು ದಾಖಲಾಗಿರುವ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಯಾವುದೇ ಸಂತ್ರಸ್ತೆಯರು ಮುಂದೆಬಾರದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಎಸ್ಐಟಿ ಹೇಳಿದೆ.</p>.<p>ಹೇಮಾ ಸಮಿತಿಯ ವರದಿಯ ಆಧಾರದಲ್ಲೇ ಎಲ್ಲ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ಹಲವು ಅರ್ಜಿಗಳು ಕೇರಳ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದವು. ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಹಾಗೂ ನ್ಯಾ.ಸಿ.ಎಸ್ ಸುಧಾ ಅವರನ್ನೊಳಗೊಂಡ ನ್ಯಾಯಪೀಠವು ಈ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಈ ಕಾರಣ ಎಸ್ಐಟಿಯು ಪ್ರಕರಣಗಳನ್ನು ಮುಕ್ತಾಯಗೊಳಿಸುತ್ತಿರುವ ತನ್ನ ನಿರ್ಧಾರವನ್ನು ನ್ಯಾಯಪೀಠಕ್ಕೆ ತಿಳಿಸಿದೆ.</p>.<p>ಈ ಕಾರಣದಿಂದ ಸದ್ಯಕ್ಕೆ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಜತೆಗೆ ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರ ಸಿನಿಮಾ ಸಮ್ಮೇಳನ ನಡೆಸುತ್ತಿದ್ದು, ಆಗಸ್ಟ್ 13ರ ಬಳಿಕ ಈ ಅರ್ಜಿಗಳ ವಿಚಾರಣೆ ಮುಂದುವರಿಸುವುದಾಗಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>