<p><strong>ಇಸ್ಲಾಮಾಬಾದ್:</strong>ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ನಾಗರಿಕ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧವನ್ನು ಮಂಗಳವಾರ ತೆಗೆದು ಹಾಕಿದೆ.</p>.<p>ಪಾಕಿಸ್ತಾನ ಸರ್ಕಾರದ ಈ ತೀರ್ಮಾನದಿಂದಾಗಿ ಭಾರತೀಯ ವೈಮಾನಿಕ ಉದ್ಯಮಕ್ಕೆ ಅನುಕೂಲವಾದಂತಾಗಿದೆ.ಪುಲ್ವಾಮಾ ದಾಳಿ ಬಳಿಕ ಫೆಬ್ರುವರಿ 26ರಂದು ಭಾರತೀಯ ವಾಯುಪಡೆ ವಿಮಾನಗಳು, ಬಾಲಕೋಟ್ ಪ್ರದೇಶದಲ್ಲಿ ಜೈಶ್ ಎ ಮೊಹಮ್ಮದ್(ಜೆಇಎಂ)ಭಯೋತ್ಪಾದಕರ ಸಂಘಟನೆ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಸಂಪೂರ್ಣ ತಡೆಯೊಡ್ಡಿತ್ತು.</p>.<p>ಪಾಕಿಸ್ತಾನದ ವಾಯುಪ್ರದೇಶ ನಿರ್ಬಂಧದ ಬಳಿಕ ಭಾರತದಿಂದ ಹೊರಡುವ ಎಲ್ಲ ವಿಮಾನಗಳ ಮಾರ್ಗ ಬದಲಾಯಿಸಲಾಗಿತ್ತು. ಇದರಿಂದಾಗಿ ವೈಮಾನಿಕ ಉದ್ಯಮ ನಷ್ಟ ಅನುಭವಿಸುತ್ತಿತ್ತು. ಏರ್ ಇಂಡಿಯಾ ಒಂದಕ್ಕೇ ಅಂದಾಜು ₹491 ಕೋಟಿ ಹೆಚ್ಚುವರಿ ಹೊರೆಯಾಗುತ್ತಿತ್ತು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದರು.</p>.<p>ಮಂಗಳವಾರ ಬೆಳಗ್ಗೆ 12.41ರಿಂದ ತನ್ನ ವಾಯುಪ್ರದೇಶದ ಮೂಲಕ ಎಲ್ಲಾ ರೀತಿಯ ನಾಗರಿಕ ವಿಮಾನಗಳ ಹಾರಾಟ ನಡೆಸಬಹುದು ಎಂದು ಪಾಕಿಸ್ತಾನ ವಿಮಾನಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ನಾಗರಿಕ ವಿಮಾನಗಳ ಹಾರಾಟಕ್ಕೆವಾಯುಪ್ರದೇಶ ನಿರ್ಬಂಧ ತೆರವು ಮಾಡುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಕೇಳಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong>ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ನಾಗರಿಕ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧವನ್ನು ಮಂಗಳವಾರ ತೆಗೆದು ಹಾಕಿದೆ.</p>.<p>ಪಾಕಿಸ್ತಾನ ಸರ್ಕಾರದ ಈ ತೀರ್ಮಾನದಿಂದಾಗಿ ಭಾರತೀಯ ವೈಮಾನಿಕ ಉದ್ಯಮಕ್ಕೆ ಅನುಕೂಲವಾದಂತಾಗಿದೆ.ಪುಲ್ವಾಮಾ ದಾಳಿ ಬಳಿಕ ಫೆಬ್ರುವರಿ 26ರಂದು ಭಾರತೀಯ ವಾಯುಪಡೆ ವಿಮಾನಗಳು, ಬಾಲಕೋಟ್ ಪ್ರದೇಶದಲ್ಲಿ ಜೈಶ್ ಎ ಮೊಹಮ್ಮದ್(ಜೆಇಎಂ)ಭಯೋತ್ಪಾದಕರ ಸಂಘಟನೆ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಸಂಪೂರ್ಣ ತಡೆಯೊಡ್ಡಿತ್ತು.</p>.<p>ಪಾಕಿಸ್ತಾನದ ವಾಯುಪ್ರದೇಶ ನಿರ್ಬಂಧದ ಬಳಿಕ ಭಾರತದಿಂದ ಹೊರಡುವ ಎಲ್ಲ ವಿಮಾನಗಳ ಮಾರ್ಗ ಬದಲಾಯಿಸಲಾಗಿತ್ತು. ಇದರಿಂದಾಗಿ ವೈಮಾನಿಕ ಉದ್ಯಮ ನಷ್ಟ ಅನುಭವಿಸುತ್ತಿತ್ತು. ಏರ್ ಇಂಡಿಯಾ ಒಂದಕ್ಕೇ ಅಂದಾಜು ₹491 ಕೋಟಿ ಹೆಚ್ಚುವರಿ ಹೊರೆಯಾಗುತ್ತಿತ್ತು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದರು.</p>.<p>ಮಂಗಳವಾರ ಬೆಳಗ್ಗೆ 12.41ರಿಂದ ತನ್ನ ವಾಯುಪ್ರದೇಶದ ಮೂಲಕ ಎಲ್ಲಾ ರೀತಿಯ ನಾಗರಿಕ ವಿಮಾನಗಳ ಹಾರಾಟ ನಡೆಸಬಹುದು ಎಂದು ಪಾಕಿಸ್ತಾನ ವಿಮಾನಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ನಾಗರಿಕ ವಿಮಾನಗಳ ಹಾರಾಟಕ್ಕೆವಾಯುಪ್ರದೇಶ ನಿರ್ಬಂಧ ತೆರವು ಮಾಡುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಕೇಳಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>