<p><strong>ನವದೆಹಲಿ</strong>: ಚಳಿಗಾಲದಲ್ಲಿ ದೆಹಲಿಯಲ್ಲಿ ಉಂಟಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕಾಗಿ ಐಐಟಿ–ಕಾನ್ಪುರದ ಸಹಯೋಗದಲ್ಲಿ ದೆಹಲಿ ಸರ್ಕಾರ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಮೋಡಬಿತ್ತನೆ ಕಾರ್ಯ ಕೈಗೊಂಡಿದೆ.</p>.<p>ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶದಲ್ಲಿ ಈ ಪ್ರಯೋಗವನ್ನು ವಿಸ್ತರಿಸಲಾಗುವುದು ಎಂದು ಪರಿಸರ ಇಲಾಖೆ ಸಚಿವ ಮಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.</p>.<p>ಮೋಡಬಿತ್ತನೆ ಮಾಡುವ ವಿಮಾನವು ಕಾನ್ಪುರದಿಂದ ಹಾರಾಟ ಆರಂಭಿಸಿ, ದೆಹಲಿ ಸುತ್ತಮುತ್ತಲಿನ ಪ್ರದೇಶಗಳಾದ ಬುರಾರಿ, ಉತ್ತರ ಕರೋಲ್ ಬಾಘ್ ಮತ್ತು ಮಯೂರ್ ವಿಹಾರ ಪ್ರದೇಶಗಳಲ್ಲಿ ಕಾರ್ಯಾಚರಣೆ ಪೂರ್ಣಗೊಳಿಸಿ, ಮೀರತ್ ವಾಯ ನೆಲೆಯಲ್ಲಿ ಇಳಿಯಿತು.</p>.<p>‘ಎಂಟು ಗನ್ಗಳ ಮೂಲಕ ಅರ್ಧ ಗಂಟೆಗಳ ಕಾಲ ರಾಸಾಯನಿಕವನ್ನು ವಾತಾವರಣಕ್ಕೆ ಬಿಡುಗಡೆ ಮಾಡಿತು’ ಎಂದು ಸಚಿವ ಸಿರ್ಸಾ ವಿಡಿಯೊ ಮೂಲಕ ಮಾಹಿತಿ ನೀಡಿದ್ದಾರೆ.</p>.<p>‘ಮೋಡಬಿತ್ತನೆ ಪ್ರಕ್ರಿಯೆ ನಡೆದ 15 ನಿಮಿಷದಿಂದ 4 ಗಂಟೆಗಳ ಒಳಗೆ ಮಳೆಯ ಮೋಡಗಳು ಸೃಷ್ಟಿಯಾಗುತ್ತವೆ ಎಂದು ಐಐಟಿ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ’ ಎಂದು ಸಿರ್ಸಾ ತಿಳಿಸಿದರು.</p>.<p class="title">ಮೋಡ ಬಿತ್ತನೆಯ ಎರಡನೇ ಪ್ರಯೋಗ ದೆಹಲಿಯ ಹೊರವಲಯದಲ್ಲಿ ನಡೆಸಲಾಗುತ್ತದೆ. ಇಂಥ ಸುಮಾರು ಹತ್ತು ಪ್ರಯೋಗಗಳನ್ನು ದೆಹಲಿಯ ಸುತ್ತಮುತ್ತ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.</p>.<p class="title">‘ಮಾಲಿನ್ಯವನ್ನು ತಗ್ಗಿಸಲು ಸರ್ಕಾರ ತೆಗೆದುಕೊಂಡ ಒಂದು ದೊಡ್ಡ ಹೆಜ್ಜೆಯಾಗಿದೆ. ಈ ಪ್ರಯೋಗಗಳು ಯಶಸ್ವಿಯಾದರೆ, ದೀರ್ಘಾವಧಿಯಲ್ಲಿ ಯೋಜನೆಯನ್ನು ರೂಪಿಸಲಿದ್ದೇವೆ’ ಎಂದು ಸಿರ್ಸಾ ಭವಿಷ್ಯದ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.</p>.<p class="title">ಕಳೆದ ವಾರ ಬುರಾರಿ ಪ್ರದೇಶದಲ್ಲಿ ಪರೀಕ್ಷಾರ್ಥವಾಗಿ ಮೋಡಬಿತ್ತನೆ ಕಾರ್ಯವನ್ನು ನಡೆಸಲಾಗಿತ್ತು. ಮೋಡಬಿತ್ತನೆಗೆ ಬಳಸುವ ಸಿಲ್ವರ್ ಅಯೋಡೈಡ್ ಮತ್ತು ಸೋಡಿಯಂ ಕ್ಲೋರೈಡ್ ಸಂಯುಕ್ತಗಳ ರಾಸಾಯನಿಕವನ್ನು ಅಲ್ಪ ಪ್ರಮಾಣದಲ್ಲಿ ಸಿಂಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚಳಿಗಾಲದಲ್ಲಿ ದೆಹಲಿಯಲ್ಲಿ ಉಂಟಾಗುವ ವಾಯುಮಾಲಿನ್ಯ ತಡೆಗಟ್ಟುವುದಕ್ಕಾಗಿ ಐಐಟಿ–ಕಾನ್ಪುರದ ಸಹಯೋಗದಲ್ಲಿ ದೆಹಲಿ ಸರ್ಕಾರ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಮೋಡಬಿತ್ತನೆ ಕಾರ್ಯ ಕೈಗೊಂಡಿದೆ.</p>.<p>ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶದಲ್ಲಿ ಈ ಪ್ರಯೋಗವನ್ನು ವಿಸ್ತರಿಸಲಾಗುವುದು ಎಂದು ಪರಿಸರ ಇಲಾಖೆ ಸಚಿವ ಮಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ.</p>.<p>ಮೋಡಬಿತ್ತನೆ ಮಾಡುವ ವಿಮಾನವು ಕಾನ್ಪುರದಿಂದ ಹಾರಾಟ ಆರಂಭಿಸಿ, ದೆಹಲಿ ಸುತ್ತಮುತ್ತಲಿನ ಪ್ರದೇಶಗಳಾದ ಬುರಾರಿ, ಉತ್ತರ ಕರೋಲ್ ಬಾಘ್ ಮತ್ತು ಮಯೂರ್ ವಿಹಾರ ಪ್ರದೇಶಗಳಲ್ಲಿ ಕಾರ್ಯಾಚರಣೆ ಪೂರ್ಣಗೊಳಿಸಿ, ಮೀರತ್ ವಾಯ ನೆಲೆಯಲ್ಲಿ ಇಳಿಯಿತು.</p>.<p>‘ಎಂಟು ಗನ್ಗಳ ಮೂಲಕ ಅರ್ಧ ಗಂಟೆಗಳ ಕಾಲ ರಾಸಾಯನಿಕವನ್ನು ವಾತಾವರಣಕ್ಕೆ ಬಿಡುಗಡೆ ಮಾಡಿತು’ ಎಂದು ಸಚಿವ ಸಿರ್ಸಾ ವಿಡಿಯೊ ಮೂಲಕ ಮಾಹಿತಿ ನೀಡಿದ್ದಾರೆ.</p>.<p>‘ಮೋಡಬಿತ್ತನೆ ಪ್ರಕ್ರಿಯೆ ನಡೆದ 15 ನಿಮಿಷದಿಂದ 4 ಗಂಟೆಗಳ ಒಳಗೆ ಮಳೆಯ ಮೋಡಗಳು ಸೃಷ್ಟಿಯಾಗುತ್ತವೆ ಎಂದು ಐಐಟಿ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ’ ಎಂದು ಸಿರ್ಸಾ ತಿಳಿಸಿದರು.</p>.<p class="title">ಮೋಡ ಬಿತ್ತನೆಯ ಎರಡನೇ ಪ್ರಯೋಗ ದೆಹಲಿಯ ಹೊರವಲಯದಲ್ಲಿ ನಡೆಸಲಾಗುತ್ತದೆ. ಇಂಥ ಸುಮಾರು ಹತ್ತು ಪ್ರಯೋಗಗಳನ್ನು ದೆಹಲಿಯ ಸುತ್ತಮುತ್ತ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.</p>.<p class="title">‘ಮಾಲಿನ್ಯವನ್ನು ತಗ್ಗಿಸಲು ಸರ್ಕಾರ ತೆಗೆದುಕೊಂಡ ಒಂದು ದೊಡ್ಡ ಹೆಜ್ಜೆಯಾಗಿದೆ. ಈ ಪ್ರಯೋಗಗಳು ಯಶಸ್ವಿಯಾದರೆ, ದೀರ್ಘಾವಧಿಯಲ್ಲಿ ಯೋಜನೆಯನ್ನು ರೂಪಿಸಲಿದ್ದೇವೆ’ ಎಂದು ಸಿರ್ಸಾ ಭವಿಷ್ಯದ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.</p>.<p class="title">ಕಳೆದ ವಾರ ಬುರಾರಿ ಪ್ರದೇಶದಲ್ಲಿ ಪರೀಕ್ಷಾರ್ಥವಾಗಿ ಮೋಡಬಿತ್ತನೆ ಕಾರ್ಯವನ್ನು ನಡೆಸಲಾಗಿತ್ತು. ಮೋಡಬಿತ್ತನೆಗೆ ಬಳಸುವ ಸಿಲ್ವರ್ ಅಯೋಡೈಡ್ ಮತ್ತು ಸೋಡಿಯಂ ಕ್ಲೋರೈಡ್ ಸಂಯುಕ್ತಗಳ ರಾಸಾಯನಿಕವನ್ನು ಅಲ್ಪ ಪ್ರಮಾಣದಲ್ಲಿ ಸಿಂಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>