<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಸೋಮವಾರ ಮೇಘಸ್ಫೋಟ ಸಂಭವಿಸಿದ್ದು, 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಹಲವು ಜನರನ್ನು ಮನೆಗಳಿಂದ ಸ್ಥಳಾಂತರ ಮಾಡಲಾಗಿದೆ.</p>.<p>ಭದೋಗ ಮತ್ತು ಕಂಧ್ವಾರ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಮೇಘಸ್ಫೋಟದಿಂದಾಗಿ ದಿಢೀರನೆ ಭಾರಿ ಮಳೆ ಸುರಿದಿದೆ ಎಂದು ಚಂಬಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.</p>.<p><a href="https://www.prajavani.net/india-news/jdu-on-plan-switch-in-bihar-nitish-kumar-speaks-to-sonia-gandhi-961461.html" itemprop="url">ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ </a></p>.<p>ಭದೋಗ ಗ್ರಾಮದಲ್ಲಿ ವಿಜಯ್ ಕುಮಾರ್ (15) ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.</p>.<p>ಕಂಧ್ವಾರ ಗ್ರಾಮದಲ್ಲಿ ಸೇತುವೆಯೊಂದಕ್ಕೆ ಮತ್ತು ಕೃಷಿ ಭೂಮಿಗೂ ಹಾನಿಯಾಗಿದೆ ಎಂದು ಇಲಾಖೆ ಹೇಳಿದೆ. ಸಮೀಪದ ಗುಲೆಲ್ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಐದು ಮನೆಗಳಿಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಸೋಮವಾರ ಮೇಘಸ್ಫೋಟ ಸಂಭವಿಸಿದ್ದು, 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಹಲವು ಜನರನ್ನು ಮನೆಗಳಿಂದ ಸ್ಥಳಾಂತರ ಮಾಡಲಾಗಿದೆ.</p>.<p>ಭದೋಗ ಮತ್ತು ಕಂಧ್ವಾರ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಮೇಘಸ್ಫೋಟದಿಂದಾಗಿ ದಿಢೀರನೆ ಭಾರಿ ಮಳೆ ಸುರಿದಿದೆ ಎಂದು ಚಂಬಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.</p>.<p><a href="https://www.prajavani.net/india-news/jdu-on-plan-switch-in-bihar-nitish-kumar-speaks-to-sonia-gandhi-961461.html" itemprop="url">ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ </a></p>.<p>ಭದೋಗ ಗ್ರಾಮದಲ್ಲಿ ವಿಜಯ್ ಕುಮಾರ್ (15) ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.</p>.<p>ಕಂಧ್ವಾರ ಗ್ರಾಮದಲ್ಲಿ ಸೇತುವೆಯೊಂದಕ್ಕೆ ಮತ್ತು ಕೃಷಿ ಭೂಮಿಗೂ ಹಾನಿಯಾಗಿದೆ ಎಂದು ಇಲಾಖೆ ಹೇಳಿದೆ. ಸಮೀಪದ ಗುಲೆಲ್ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಐದು ಮನೆಗಳಿಗೆ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>