<p><strong>ಸರ್ದಾರ್ಪುರ (ರಾಜಸ್ಥಾನ):</strong> ಸರ್ದಾರ್ಪುರ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ(ನ.6) ನಾಮಪತ್ರ ಸಲ್ಲಿಸಿದ್ದಾರೆ.</p>. <p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಗೆಹಲೋತ್, 'ರಾಜ್ಯದ ಜನರು ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವತ್ತ ಚಿತ್ತ ಹರಿಸಿದ್ದಾರೆ' ಎಂದರು.</p><p>'ಹಿಂದೆ ರಾಜಸ್ಥಾನವನ್ನು ಹಿಂದುಳಿದ ರಾಜ್ಯ ಎಂದು ಕರೆಯಲಾಗುತ್ತಿತ್ತು. ಆದರೆ ನಾನು ಸಿಎಂ ಆದ ನಂತರ ಸಾಕಷ್ಟು ಬದಲಾವಣೆಯಾಗಿದೆ. ಇಂದು ರಾಜ್ಯದಲ್ಲಿ ಏಮ್ಸ್, ಐಐಟಿ, ಐಐಎಂ ಸೇರಿದಂತೆ ಇತರೆ ವಿಶ್ವವಿದ್ಯಾನಿಲಯಗಳಿವೆ. ನಾನು ಮೊದಲ ಬಾರಿಗೆ ಸಿಎಂ ಆದಾಗ ಕೇವಲ 6 ವಿಶ್ವವಿದ್ಯಾಲಯಗಳಿದ್ದವು. ಈಗ ಉನ್ನತ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಸಿಎಂ ಹೇಳಿದರು.</p><p>ರಾಜಸ್ಥಾನ ವಿಧಾನಸಭೆಗೆ ನ.25ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.</p>.ರಾಜಸ್ಥಾನ ಚುನಾವಣೆ: 22 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರ್ದಾರ್ಪುರ (ರಾಜಸ್ಥಾನ):</strong> ಸರ್ದಾರ್ಪುರ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ(ನ.6) ನಾಮಪತ್ರ ಸಲ್ಲಿಸಿದ್ದಾರೆ.</p>. <p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಗೆಹಲೋತ್, 'ರಾಜ್ಯದ ಜನರು ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವತ್ತ ಚಿತ್ತ ಹರಿಸಿದ್ದಾರೆ' ಎಂದರು.</p><p>'ಹಿಂದೆ ರಾಜಸ್ಥಾನವನ್ನು ಹಿಂದುಳಿದ ರಾಜ್ಯ ಎಂದು ಕರೆಯಲಾಗುತ್ತಿತ್ತು. ಆದರೆ ನಾನು ಸಿಎಂ ಆದ ನಂತರ ಸಾಕಷ್ಟು ಬದಲಾವಣೆಯಾಗಿದೆ. ಇಂದು ರಾಜ್ಯದಲ್ಲಿ ಏಮ್ಸ್, ಐಐಟಿ, ಐಐಎಂ ಸೇರಿದಂತೆ ಇತರೆ ವಿಶ್ವವಿದ್ಯಾನಿಲಯಗಳಿವೆ. ನಾನು ಮೊದಲ ಬಾರಿಗೆ ಸಿಎಂ ಆದಾಗ ಕೇವಲ 6 ವಿಶ್ವವಿದ್ಯಾಲಯಗಳಿದ್ದವು. ಈಗ ಉನ್ನತ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಸಿಎಂ ಹೇಳಿದರು.</p><p>ರಾಜಸ್ಥಾನ ವಿಧಾನಸಭೆಗೆ ನ.25ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.</p>.ರಾಜಸ್ಥಾನ ಚುನಾವಣೆ: 22 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>