<p><strong>ರಾಂಚಿ</strong>: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಸಂಪುಟದ ಇತರ ಸಚಿವರು ಜಾರ್ಖಂಡ್ ವಿಧಾನಸಭಾ ಸದಸ್ಯರಾಗಿ ಅಧಿವೇಶನದ ಮೊದಲ ದಿನ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಸಂಸದೀಯ ವ್ಯವಹಾರಗಳ ಸಚಿವ ರಾಧಾಕೃಷ್ಣ ಕಿಶೋರ್, ಕಂದಾಯ ಮತ್ತು ಭೂ ಸುಧಾರಣಾ ಸಚಿವ ದೀಪಕ್ ಬಿರುವಾ ಮತ್ತು ಕಾರ್ಮಿಕ ಸಚಿವ ಸಂಜಯ್ ಪ್ರಸಾದ್ ಯಾದವ್ ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಹಂಗಾಮಿ ಸ್ಪೀಕರ್ ಸ್ಟೀಫನ್ ಮರಾಂಡಿ ಅವರು ಪ್ರಮಾಣ ವಚನ ಬೋಧಿಸಿದರು. ನಾಲ್ಕು ದಿನಗಳ ಈ ಅಧಿವೇಶನದಲ್ಲಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ, ರಾಜ್ಯಪಾಲರ ಭಾಷಣ, ಎರಡನೇ ಪೂರಕ ಬಜೆಟ್ ಮಂಡನೆ ಮತ್ತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆಯಲಿದೆ.</p>.<p><strong>ರವೀಂದ್ರ ನಾಥ ಮಹತೋ ಹೆಸರು ಶಿಫಾರಸು:</strong> ಜಾರ್ಖಂಡ್ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ನಾಲಾ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ನಾಥ ಮಹತೋ ಅವರ ಹೆಸರನ್ನು ಆಡಳಿತ ಮೈತ್ರಿಕೂಟ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.</p>.<p>ಹಿಂದಿನ ವಿಧಾನಸಭೆಯಲ್ಲೂ ಮಹತೋ ಸ್ಪೀಕರ್ ಆಗಿದ್ದರು. ಅಧಿವೇಶನದ ಎರಡನೇ ದಿನವಾದ ಮಂಗಳವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹತೋ ಅವರು ವಿಧಾನಸಭಾ ಸದಸ್ಯರಾಗಿ ಇತರೆ ಶಾಸಕರೊಂದಿಗೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ</strong>: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಸಂಪುಟದ ಇತರ ಸಚಿವರು ಜಾರ್ಖಂಡ್ ವಿಧಾನಸಭಾ ಸದಸ್ಯರಾಗಿ ಅಧಿವೇಶನದ ಮೊದಲ ದಿನ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಸಂಸದೀಯ ವ್ಯವಹಾರಗಳ ಸಚಿವ ರಾಧಾಕೃಷ್ಣ ಕಿಶೋರ್, ಕಂದಾಯ ಮತ್ತು ಭೂ ಸುಧಾರಣಾ ಸಚಿವ ದೀಪಕ್ ಬಿರುವಾ ಮತ್ತು ಕಾರ್ಮಿಕ ಸಚಿವ ಸಂಜಯ್ ಪ್ರಸಾದ್ ಯಾದವ್ ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಹಂಗಾಮಿ ಸ್ಪೀಕರ್ ಸ್ಟೀಫನ್ ಮರಾಂಡಿ ಅವರು ಪ್ರಮಾಣ ವಚನ ಬೋಧಿಸಿದರು. ನಾಲ್ಕು ದಿನಗಳ ಈ ಅಧಿವೇಶನದಲ್ಲಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ, ರಾಜ್ಯಪಾಲರ ಭಾಷಣ, ಎರಡನೇ ಪೂರಕ ಬಜೆಟ್ ಮಂಡನೆ ಮತ್ತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆಯಲಿದೆ.</p>.<p><strong>ರವೀಂದ್ರ ನಾಥ ಮಹತೋ ಹೆಸರು ಶಿಫಾರಸು:</strong> ಜಾರ್ಖಂಡ್ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ನಾಲಾ ವಿಧಾನಸಭಾ ಕ್ಷೇತ್ರದ ಶಾಸಕ ರವೀಂದ್ರ ನಾಥ ಮಹತೋ ಅವರ ಹೆಸರನ್ನು ಆಡಳಿತ ಮೈತ್ರಿಕೂಟ ಶಿಫಾರಸು ಮಾಡಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.</p>.<p>ಹಿಂದಿನ ವಿಧಾನಸಭೆಯಲ್ಲೂ ಮಹತೋ ಸ್ಪೀಕರ್ ಆಗಿದ್ದರು. ಅಧಿವೇಶನದ ಎರಡನೇ ದಿನವಾದ ಮಂಗಳವಾರ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹತೋ ಅವರು ವಿಧಾನಸಭಾ ಸದಸ್ಯರಾಗಿ ಇತರೆ ಶಾಸಕರೊಂದಿಗೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>