<p><strong>ಚೆನ್ನೈ</strong>: ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರ್.ಎನ್.ರವಿ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪಾಲ್ಗೊಳ್ಳಲಿಲ್ಲ.</p>.<p>ಕೇಂದ್ರ ಆರಂಭಿಸಲಿದ್ದ ಟಂಗಸ್ಟನ್ ಗಣಿಗಾರಿಕೆಯನ್ನು ರದ್ದುಪಡಿಸಿದ್ದಕ್ಕಾಗಿ ತಮ್ಮನ್ನು ಸನ್ಮಾನಿಸಲು ಮದುರೈಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ್ಟಾಲಿನ್ ಪಾಲ್ಗೊಂಡಿದ್ದರು.</p>.<p>ಹಲವು ವಿಚಾರಗಳಿಗೆ ಸಂಬಂಧಿಸಿ ರಾಜಭವನ ಮತ್ತು ಡಿಎಂಕೆ ನೇತೃತ್ವದ ಸರ್ಕಾರದ ನಡುವಿನ ಜಟಾಪಟಿಯೇ ಇಂತಹ ನಡೆಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ವಿರೋಧ ಪಕ್ಷಗಳಾದ ಎಐಎಡಿಎಂಕೆ, ಬಿಜೆಪಿ, ಡಿಎಂಡಿಕೆ ಹಾಗೂ ಪುದಿಯ ತಮಿಳಗಂ ಪಕ್ಷಗಳ ನಾಯಕರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>‘ರಾಜಭವನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡ ತಮಿಳುನಾಡು ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು’ ಎಂದು ರಾಜ್ಯಪಾಲ ರವಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಜಭವನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಪಾಲ್ಗೊಂಡಿದ್ದರು.</p>.<p>ಮದುರೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಠಾಲಿನ್, ‘ಟಂಗಸ್ಟನ್ ಗಣಿಗಾರಿಕೆ ತಡೆದಿದ್ದಕ್ಕಾಗಿ ನನ್ನನ್ನು ಹೊಗಳುವ ಬದಲು, ಇದಕ್ಕೆ ಕಾರಣರಾದ ಇಲ್ಲಿನ ಜನರಿಗೆ ಧನ್ಯವಾದ ಹೇಳಿ, ಅವರನ್ನು ಸನ್ಮಾನಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಗಣರಾಜ್ಯೋತ್ಸವ ಅಂಗವಾಗಿ ರಾಜ್ಯಪಾಲ ಆರ್.ಎನ್.ರವಿ ಅವರು ರಾಜಭವನದಲ್ಲಿ ಭಾನುವಾರ ಏರ್ಪಡಿಸಿದ್ದ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪಾಲ್ಗೊಳ್ಳಲಿಲ್ಲ.</p>.<p>ಕೇಂದ್ರ ಆರಂಭಿಸಲಿದ್ದ ಟಂಗಸ್ಟನ್ ಗಣಿಗಾರಿಕೆಯನ್ನು ರದ್ದುಪಡಿಸಿದ್ದಕ್ಕಾಗಿ ತಮ್ಮನ್ನು ಸನ್ಮಾನಿಸಲು ಮದುರೈಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ್ಟಾಲಿನ್ ಪಾಲ್ಗೊಂಡಿದ್ದರು.</p>.<p>ಹಲವು ವಿಚಾರಗಳಿಗೆ ಸಂಬಂಧಿಸಿ ರಾಜಭವನ ಮತ್ತು ಡಿಎಂಕೆ ನೇತೃತ್ವದ ಸರ್ಕಾರದ ನಡುವಿನ ಜಟಾಪಟಿಯೇ ಇಂತಹ ನಡೆಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ವಿರೋಧ ಪಕ್ಷಗಳಾದ ಎಐಎಡಿಎಂಕೆ, ಬಿಜೆಪಿ, ಡಿಎಂಡಿಕೆ ಹಾಗೂ ಪುದಿಯ ತಮಿಳಗಂ ಪಕ್ಷಗಳ ನಾಯಕರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>‘ರಾಜಭವನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡ ತಮಿಳುನಾಡು ಜನತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು’ ಎಂದು ರಾಜ್ಯಪಾಲ ರವಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಜಭವನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಪಾಲ್ಗೊಂಡಿದ್ದರು.</p>.<p>ಮದುರೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಠಾಲಿನ್, ‘ಟಂಗಸ್ಟನ್ ಗಣಿಗಾರಿಕೆ ತಡೆದಿದ್ದಕ್ಕಾಗಿ ನನ್ನನ್ನು ಹೊಗಳುವ ಬದಲು, ಇದಕ್ಕೆ ಕಾರಣರಾದ ಇಲ್ಲಿನ ಜನರಿಗೆ ಧನ್ಯವಾದ ಹೇಳಿ, ಅವರನ್ನು ಸನ್ಮಾನಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>