ಇಂದು ಹಾಗೂ ನಾಳೆ ಎರಡು ದಿನಗಳ ವಾರಾಣಸಿ ಪ್ರವಾಸವನ್ನು ಕೈಗೊಂಡಿರುವ ಪ್ರಧಾನಿ ಮೋದಿ, ಇಂದು ಮಧ್ಯಾಹ್ನ 3.30ರ ಸುಮಾರಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.15ರ ವೇಳೆಗೆ ನಮೋ ಘಾಟ್ನಲ್ಲಿ ‘ಕಾಶಿ ತಮಿಳು ಸಂಗಮಂ 2023’ ಅನ್ನು ಉದ್ಘಾಟಿಸಲಿದ್ದಾರೆ. ನಾಳೆ (ಸೋಮವಾರ) ಬೆಳಿಗ್ಗೆ ಸ್ವರವೇದ ಮಹಾಮಂದಿರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ₹19,150 ಕೋಟಿಗೂ ಹೆಚ್ಚಿನ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.