ಆದರೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ವಿದ್ಯುತ್ ದೋಷವೇ ಬೆಂಕಿಗೆ ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.
‘ಘಟನೆಯ ಬಗ್ಗೆ ನಮಗೆ ಮುಂಜಾನೆ 1.30ರ ಸುಮಾರಿಗೆ ಮಾಹಿತಿ ಸಿಕ್ಕಿತು. ಸ್ಥಳಕ್ಕೆ ತೆರಳಿದಾಗ ಒಂದು ಕೋಚ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ನಾಲ್ಕು ಅಗ್ನಿಶಾಮಕ ಹಾಹನಗಳನ್ನು ನಿಯೋಜಿಸಲಾಗಿತ್ತು. ಬೆಳಗಿನ ಜಾವ 3.15 ರ ಸುಮಾರಿಗೆ ಬೆಂಕಿಯನ್ನು ನಂದಿಸಲಾಯಿತು. ರೈಲಿನ ಹಿಂಬದಿಯ ಮೂರನೇ ಕೋಚ್ಗೆ ಬೆಂಕಿ ಹೊತ್ತಿಕೊಂಡಿದೆ. ವಿಧಿವಿಜ್ಞಾನ ತನಿಖೆಯಿಂದ ಘಟನೆಗೆ ಕಾರಣ ಏನೆಂದು ನಿರ್ಧರಿಸಲಾಗುವುದು’ ಎಂದು ಕಣ್ಣೂರು ಅಗ್ನಿಶಾಮಕ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಎಪ್ರಿಲ್ 2 ರಂದು ರಾತ್ರಿ ಕೋಯಿಕ್ಕೋಡ್ ಜಿಲ್ಲೆಯಲ್ಲಿ ದುಷ್ಕರ್ಮಿಯೊಬ್ಬ ಅಲಪ್ಪುವ-ಕಣ್ಣೂರು ಎಕ್ಸಿಕ್ಯುಟಿವ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟರೆ, ಒಂಬತ್ತು ಜನರಿಗೆ ಸುಟ್ಟ ಗಾಯಗಳಾಗಿತ್ತು. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು.