<p><strong>ನವದೆಹಲಿ</strong>: ಇತ್ತೀಚಿನ ದಿನಗಳಲ್ಲಿ ಕೋಚಿಂಗ್ ಸೆಂಟರ್ಗಳು ಗ್ಯಾಸ್ ಚೇಂಬರ್ಗಳಾಗಿ ಕಾಣಿಸುತ್ತಿವೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ವಿಷಾದ ವ್ಯಕ್ತಪಡಿಸಿದ್ದಾರೆ.</p><p>ಭಾರಿ ಮಳೆಯಿಂದಾಗಿ ದೆಹಲಿಯ ರಾವುಸ್ ಕೋಚಿಂಗ್ ಸೆಂಟರ್ನಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ಧನಕರ್ ಅವರು ಈ ಬೇಸರ ವ್ಯಕ್ತಪಡಿಸಿದರು.</p><p>ಘಟನೆಯಲ್ಲಿ ಉತ್ತರ ಪ್ರದೇಶದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಹಾಗೂ ಕೇರಳದ ನವೀನ್ ದಾಲವೀನ್ ಮೃತರಾಗಿದ್ದರು.</p><p>ಕೋಚಿಂಗ್ ಸೆಂಟರ್ಗಳು ಜ್ಞಾನ ನೀಡುವ ಬದಲು ವಾಣಿಜ್ಯೀಕರಣವಾಗಿವೆ. ವಿದ್ಯಾರ್ಥಿಗಳಿಂದ ಹಣ ಹೀರುವ ಇವರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿ ಮೆರೆಯುತ್ತಿದ್ದಾರೆ. ಇಂತಹ ಕಟ್ಟಡಗಳು ಸಾವಿನ ಮನೆಗಳ ರೀತಿ ಆಗಿವೆ ಎಂದು ಕಿಡಿಕಾರಿದರು.</p><p>ಕೇವಲ ಐಎಎಸ್ ಅಷ್ಟೇ ಉದ್ಯೋಗ ಅಲ್ಲ. ಸಾಕಷ್ಟು ದಾರಿಗಳು ಉದ್ಯೋಗ ಮಾಡಲು ಇವೆ ಎಂಬುದನ್ನು ಸಂಸದರು ಯುವಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.</p><p>ಎರಡು ದಿನಗಳ ಹಿಂದೆ ನಡೆದ ಘಟನೆಯ ಕುರಿತು ಎಂಸಿಡಿ, ದೆಹಲಿ ಸರ್ಕಾರ ಹಾಗೂ ದೆಹಲಿ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಸಾವಿಗೆ ಕಾರಣಗಳನ್ನು ಅವಲೋಕಿಸಲಾಗುತ್ತಿದೆ.</p><p>ಹಳೆಯ ರಾಜಿಂದರ್ ನಗರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 13 ಕೋಚಿಂಗ್ ಸೆಂಟರ್ಗಳನ್ನು ಎಂಸಿಡಿ ಅಧಿಕಾರಿಗಳು ಮುಚ್ಚಿಸಿದ್ದಾರೆ. ‘ಅಧಿಕಾರಿಗಳ ತಂಡವೊಂದು ಕೇಂದ್ರ ದೆಹಲಿಯಲ್ಲಿರುವ ಕೋಚಿಂಗ್ ಸೆಂಟರ್ಗಳಿಗೆ ಭೇಟಿ ನೀಡಲಿದೆ’ ಎಂದು ದೆಹಲಿ ಸರ್ಕಾರವು ಭಾನುವಾರ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇತ್ತೀಚಿನ ದಿನಗಳಲ್ಲಿ ಕೋಚಿಂಗ್ ಸೆಂಟರ್ಗಳು ಗ್ಯಾಸ್ ಚೇಂಬರ್ಗಳಾಗಿ ಕಾಣಿಸುತ್ತಿವೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ವಿಷಾದ ವ್ಯಕ್ತಪಡಿಸಿದ್ದಾರೆ.</p><p>ಭಾರಿ ಮಳೆಯಿಂದಾಗಿ ದೆಹಲಿಯ ರಾವುಸ್ ಕೋಚಿಂಗ್ ಸೆಂಟರ್ನಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ಧನಕರ್ ಅವರು ಈ ಬೇಸರ ವ್ಯಕ್ತಪಡಿಸಿದರು.</p><p>ಘಟನೆಯಲ್ಲಿ ಉತ್ತರ ಪ್ರದೇಶದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಹಾಗೂ ಕೇರಳದ ನವೀನ್ ದಾಲವೀನ್ ಮೃತರಾಗಿದ್ದರು.</p><p>ಕೋಚಿಂಗ್ ಸೆಂಟರ್ಗಳು ಜ್ಞಾನ ನೀಡುವ ಬದಲು ವಾಣಿಜ್ಯೀಕರಣವಾಗಿವೆ. ವಿದ್ಯಾರ್ಥಿಗಳಿಂದ ಹಣ ಹೀರುವ ಇವರು ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿ ಮೆರೆಯುತ್ತಿದ್ದಾರೆ. ಇಂತಹ ಕಟ್ಟಡಗಳು ಸಾವಿನ ಮನೆಗಳ ರೀತಿ ಆಗಿವೆ ಎಂದು ಕಿಡಿಕಾರಿದರು.</p><p>ಕೇವಲ ಐಎಎಸ್ ಅಷ್ಟೇ ಉದ್ಯೋಗ ಅಲ್ಲ. ಸಾಕಷ್ಟು ದಾರಿಗಳು ಉದ್ಯೋಗ ಮಾಡಲು ಇವೆ ಎಂಬುದನ್ನು ಸಂಸದರು ಯುವಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.</p><p>ಎರಡು ದಿನಗಳ ಹಿಂದೆ ನಡೆದ ಘಟನೆಯ ಕುರಿತು ಎಂಸಿಡಿ, ದೆಹಲಿ ಸರ್ಕಾರ ಹಾಗೂ ದೆಹಲಿ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಸಾವಿಗೆ ಕಾರಣಗಳನ್ನು ಅವಲೋಕಿಸಲಾಗುತ್ತಿದೆ.</p><p>ಹಳೆಯ ರಾಜಿಂದರ್ ನಗರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 13 ಕೋಚಿಂಗ್ ಸೆಂಟರ್ಗಳನ್ನು ಎಂಸಿಡಿ ಅಧಿಕಾರಿಗಳು ಮುಚ್ಚಿಸಿದ್ದಾರೆ. ‘ಅಧಿಕಾರಿಗಳ ತಂಡವೊಂದು ಕೇಂದ್ರ ದೆಹಲಿಯಲ್ಲಿರುವ ಕೋಚಿಂಗ್ ಸೆಂಟರ್ಗಳಿಗೆ ಭೇಟಿ ನೀಡಲಿದೆ’ ಎಂದು ದೆಹಲಿ ಸರ್ಕಾರವು ಭಾನುವಾರ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>