<p><strong>ರಾಮಗಢ(ಜಾರ್ಖಂಡ್): </strong>ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ವೇಳೆ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜಿಲ್ಲೆಯ ಕರ್ಮಾ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ಈ ಘಟನೆ ನಡೆದಿದೆ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ವೇಳೆ ಗಣಿಯ ಒಂದು ಭಾಗ ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿರು ಶಂಕೆಯಿದೆ ಎಂದು ಅವರು ತಿಳಿಸಿದ್ದಾರೆ.</p><p>ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಎಸ್ಡಿಪಿಒ ಪರಮೇಶ್ವರ ಪ್ರಸಾದ್ ತಿಳಿಸಿದ್ದಾರೆ.</p><p>ಸ್ಥಳಕ್ಕೆ ಪೊಲೀಸರು ಬರುವುದಕ್ಕೆ ಮುನ್ನವೇ ಮೂರು ಮೃತದೇಹಗಳನ್ನು ಸ್ಥಳೀಯರು ತೆಗೆದುಕೊಂಡು ಹೋಗಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.</p><p>ಗಣಿಯ ಕುಸಿದ ಭಾಗದಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿರಬಹುದು ಎಂದು ಕುಜು ಪೊಲೀಸ್ ಹೊರ ಠಾಣೆಯ ಉಸ್ತುವಾರಿ ಅಶುತೋಷ್ ಕುಮಾರ್ ಸಿಂಗ್ ಶಂಕೆ ವ್ಯಕ್ತಪಡಿದ್ದಾರೆ.</p><p>‘ಅಕ್ರಮವಾಗಿ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇದರಲ್ಲಿ ಗ್ರಾಮದ ಹಲವರು ಭಾಗಿಯಾಗಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p><p>‘ತನಿಖೆಗಾಗಿ ತಂಡವೊಂದನ್ನು ಸ್ಥಳಕ್ಕೆ ಕಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p><p>ಸೆಂಟ್ರಲ್ ಕೋಲ್ಫೀಲ್ಡ್ ಲಿಮಿಟೆಡ್ (ಸಿಸಿಎಲ್) ಸ್ಥಗಿತಗೊಳಿಸಿದ್ದ ಕಲ್ಲಿದ್ದಲು ಗಣಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.</p><p>ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಸಿಸಿಎಲ್ನ ಕರಮಾ ಯೋಜನಾ ಕಚೇರಿ ಬಳಿಪ್ರತಿಭಟಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.</p>
<p><strong>ರಾಮಗಢ(ಜಾರ್ಖಂಡ್): </strong>ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ವೇಳೆ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜಿಲ್ಲೆಯ ಕರ್ಮಾ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ಈ ಘಟನೆ ನಡೆದಿದೆ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ವೇಳೆ ಗಣಿಯ ಒಂದು ಭಾಗ ಕುಸಿದಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿರು ಶಂಕೆಯಿದೆ ಎಂದು ಅವರು ತಿಳಿಸಿದ್ದಾರೆ.</p><p>ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಎಸ್ಡಿಪಿಒ ಪರಮೇಶ್ವರ ಪ್ರಸಾದ್ ತಿಳಿಸಿದ್ದಾರೆ.</p><p>ಸ್ಥಳಕ್ಕೆ ಪೊಲೀಸರು ಬರುವುದಕ್ಕೆ ಮುನ್ನವೇ ಮೂರು ಮೃತದೇಹಗಳನ್ನು ಸ್ಥಳೀಯರು ತೆಗೆದುಕೊಂಡು ಹೋಗಿದ್ದಾರೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.</p><p>ಗಣಿಯ ಕುಸಿದ ಭಾಗದಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿರಬಹುದು ಎಂದು ಕುಜು ಪೊಲೀಸ್ ಹೊರ ಠಾಣೆಯ ಉಸ್ತುವಾರಿ ಅಶುತೋಷ್ ಕುಮಾರ್ ಸಿಂಗ್ ಶಂಕೆ ವ್ಯಕ್ತಪಡಿದ್ದಾರೆ.</p><p>‘ಅಕ್ರಮವಾಗಿ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇದರಲ್ಲಿ ಗ್ರಾಮದ ಹಲವರು ಭಾಗಿಯಾಗಿದ್ದಾರೆ’ ಎಂದೂ ಅವರು ಹೇಳಿದ್ದಾರೆ.</p><p>‘ತನಿಖೆಗಾಗಿ ತಂಡವೊಂದನ್ನು ಸ್ಥಳಕ್ಕೆ ಕಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p><p>ಸೆಂಟ್ರಲ್ ಕೋಲ್ಫೀಲ್ಡ್ ಲಿಮಿಟೆಡ್ (ಸಿಸಿಎಲ್) ಸ್ಥಗಿತಗೊಳಿಸಿದ್ದ ಕಲ್ಲಿದ್ದಲು ಗಣಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.</p><p>ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಸಿಸಿಎಲ್ನ ಕರಮಾ ಯೋಜನಾ ಕಚೇರಿ ಬಳಿಪ್ರತಿಭಟಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.</p>