<p><strong>ನವದೆಹಲಿ:</strong> ಜಾರ್ಖಂಡ್ ಕಲ್ಲಿದ್ದಲು ಘಟಕದ ಹಂಚಿಕೆ ಸಂಬಂಧಿಸಿದ (1999)ಅಕ್ರಮ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿರುವ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಸಿಬಿಐ, ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.</p>.<p>ದಿಲೀಪ್ ರೇ ಜತೆಗೆ, ಪ್ರಕರಣದ ಆರೋಪಿಗಳಾಗಿರುವ, ಆಗ ಕಲ್ಲಿದ್ದಲು ಸಚಿವಾಲಯದ ಹಿರಿಯ ಅಧಿಕಾರಿಗಳಾಗಿದ್ದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ ಗೌತಮ್ ಹಾಗೂ ಕ್ಯಾಸ್ಟ್ರೊನ್ ಟೆಕ್ನಾಲಜಿ ಲಿಮಿಟೆಡ್ನ (ಸಿಟಿಎಲ್) ನಿರ್ದೇಶಕ ಮಹೇಂದ್ರಕುಮಾರ್ ಅಗರ್ವಾಲ್ ಅವರಿಗೂ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಸಿಬಿಐ ಕೋರಿದೆ.</p>.<p>ಈ ಪ್ರಕರಣದ ವಿಚಾರಣೆ ನಡೆಸಿದವಿಶೇಷ ನ್ಯಾಯಮೂರ್ತಿ ಭಾರತ್ ಪರಾಶರ್ ಅವರುಅಕ್ಟೋಬರ್ 26ಕ್ಕೆ ಆದೇಶವನ್ನು ಕಾಯ್ದಿರಿಸಿದರು.</p>.<p>ಸರ್ಕಾರದ ಪರ ವಕೀಲರು, ಪ್ರಕರಣದ ಆರೋಪಿಗಳಾಗಿರುವ ಸಿಟಿಎಲ್ ಮತ್ತು ಕ್ಯಾಸ್ಟ್ರೊನ್ ಮೈನಿಂಗ್ ಲಿ.(ಸಿಎಂಎಲ್) ಸಂಸ್ಥೆಗೆ ಗರಿಷ್ಠ ದಂಡವನ್ನು ವಿಧಿಸಬೇಕೆಂದು ವಾದ ಮಾಡಿದರು.</p>.<p>ಸಿಬಿಐ ಪರ ವಕೀಲರಾದ ಕೆ.ವಿ ಶರ್ಮಾ ಮತ್ತು ಎ.ಪಿ.ಸಿಂಗ್ ವಾದ ಮಂಡಿಸಿದ್ದರು. ಕೋವಿಡ್ 19 ಕಾರಣದಿಂದಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾರ್ಖಂಡ್ ಕಲ್ಲಿದ್ದಲು ಘಟಕದ ಹಂಚಿಕೆ ಸಂಬಂಧಿಸಿದ (1999)ಅಕ್ರಮ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿರುವ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಸಿಬಿಐ, ದೆಹಲಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.</p>.<p>ದಿಲೀಪ್ ರೇ ಜತೆಗೆ, ಪ್ರಕರಣದ ಆರೋಪಿಗಳಾಗಿರುವ, ಆಗ ಕಲ್ಲಿದ್ದಲು ಸಚಿವಾಲಯದ ಹಿರಿಯ ಅಧಿಕಾರಿಗಳಾಗಿದ್ದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ ಗೌತಮ್ ಹಾಗೂ ಕ್ಯಾಸ್ಟ್ರೊನ್ ಟೆಕ್ನಾಲಜಿ ಲಿಮಿಟೆಡ್ನ (ಸಿಟಿಎಲ್) ನಿರ್ದೇಶಕ ಮಹೇಂದ್ರಕುಮಾರ್ ಅಗರ್ವಾಲ್ ಅವರಿಗೂ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಸಿಬಿಐ ಕೋರಿದೆ.</p>.<p>ಈ ಪ್ರಕರಣದ ವಿಚಾರಣೆ ನಡೆಸಿದವಿಶೇಷ ನ್ಯಾಯಮೂರ್ತಿ ಭಾರತ್ ಪರಾಶರ್ ಅವರುಅಕ್ಟೋಬರ್ 26ಕ್ಕೆ ಆದೇಶವನ್ನು ಕಾಯ್ದಿರಿಸಿದರು.</p>.<p>ಸರ್ಕಾರದ ಪರ ವಕೀಲರು, ಪ್ರಕರಣದ ಆರೋಪಿಗಳಾಗಿರುವ ಸಿಟಿಎಲ್ ಮತ್ತು ಕ್ಯಾಸ್ಟ್ರೊನ್ ಮೈನಿಂಗ್ ಲಿ.(ಸಿಎಂಎಲ್) ಸಂಸ್ಥೆಗೆ ಗರಿಷ್ಠ ದಂಡವನ್ನು ವಿಧಿಸಬೇಕೆಂದು ವಾದ ಮಾಡಿದರು.</p>.<p>ಸಿಬಿಐ ಪರ ವಕೀಲರಾದ ಕೆ.ವಿ ಶರ್ಮಾ ಮತ್ತು ಎ.ಪಿ.ಸಿಂಗ್ ವಾದ ಮಂಡಿಸಿದ್ದರು. ಕೋವಿಡ್ 19 ಕಾರಣದಿಂದಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>