<p><strong>ನವದೆಹಲಿ:</strong> ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಪಕ್ಷದ ಅಧಿಕೃತ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ, ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.</p><p>ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದ್ದ ಸಿಜೆಪಿಯ ಎಕ್ಸ್ ಖಾತೆಯನ್ನು(@CJP_2029) ಮೇ 21ರಂದು ಭಾರತದಲ್ಲಿ ತಡೆಹಿಡಿಯಲಾಗಿತ್ತು. ಅದನ್ನು ಪ್ರಶ್ನಿಸಿ ವಕೀಲ ನಕುಲ್ ಗಾಂಧಿ ಮೂಲಕ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. </p><p>@CJP_2029 ಖಾತೆಯನ್ನು ನಿರ್ಬಂಧಿಸಿದ ಬಳಿಕ, ‘ಕಾಕ್ರೋಚ್ ಇಸ್ ಬ್ಯಾಕ್’ ಎನ್ನುವ ಹೊಸ ಖಾತೆಯನ್ನು ಸಿಜೆಪಿ ಆರಂಭಿಸಿತ್ತು. ನಮ್ಮ ಜಾಲತಾಣ ಖಾತೆಯನ್ನು ನಿರ್ಬಂಧಿಸುವ ಮೂಲಕ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಅದರಲ್ಲಿ ಪೋಸ್ಟ್ ಮಾಡಿತ್ತು. </p><p>ಸಿಜೆಪಿಗೆ ಪರ–ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಅಭಿಯಾನಕ್ಕೆ ಬಹಿರಂಗ ಬೆಂಬಲ ನೀಡಿವೆ. </p><p>ಸಿಜೆಪಿ ಜೊತೆ ನಕಲಿ ವಕೀಲರು ಮತ್ತು ಕಾರ್ಯಕರ್ತರು ನಂಟು ಹೊಂದಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಪಕ್ಷದ ಅಧಿಕೃತ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ, ಅದರ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.</p><p>ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದ್ದ ಸಿಜೆಪಿಯ ಎಕ್ಸ್ ಖಾತೆಯನ್ನು(@CJP_2029) ಮೇ 21ರಂದು ಭಾರತದಲ್ಲಿ ತಡೆಹಿಡಿಯಲಾಗಿತ್ತು. ಅದನ್ನು ಪ್ರಶ್ನಿಸಿ ವಕೀಲ ನಕುಲ್ ಗಾಂಧಿ ಮೂಲಕ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. </p><p>@CJP_2029 ಖಾತೆಯನ್ನು ನಿರ್ಬಂಧಿಸಿದ ಬಳಿಕ, ‘ಕಾಕ್ರೋಚ್ ಇಸ್ ಬ್ಯಾಕ್’ ಎನ್ನುವ ಹೊಸ ಖಾತೆಯನ್ನು ಸಿಜೆಪಿ ಆರಂಭಿಸಿತ್ತು. ನಮ್ಮ ಜಾಲತಾಣ ಖಾತೆಯನ್ನು ನಿರ್ಬಂಧಿಸುವ ಮೂಲಕ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಅದರಲ್ಲಿ ಪೋಸ್ಟ್ ಮಾಡಿತ್ತು. </p><p>ಸಿಜೆಪಿಗೆ ಪರ–ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಅಭಿಯಾನಕ್ಕೆ ಬಹಿರಂಗ ಬೆಂಬಲ ನೀಡಿವೆ. </p><p>ಸಿಜೆಪಿ ಜೊತೆ ನಕಲಿ ವಕೀಲರು ಮತ್ತು ಕಾರ್ಯಕರ್ತರು ನಂಟು ಹೊಂದಿದ್ದಾರೆ ಎಂಬ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>