<p><strong>ಚೆನ್ನೈ:</strong> 1998ರ ಕೊಯಮತ್ತೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಾದಿಕ್ನನ್ನು ಕರ್ನಾಟಕದ ವಿಜಯಪುರದಲ್ಲಿ ಬಂಧಿಸಿರುವುದಾಗಿ ತಮಿಳುನಾಡು ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ಗುರುವಾರ ಹೇಳಿದೆ.</p><p>ಕೊಯಮತ್ತೂರು ಸ್ಫೋಟದಲ್ಲಿ 58 ಜನ ಮೃತರಾಗಿ 250 ಜನ ಗಾಯಗೊಂಡಿದ್ದರು. </p><p>ಸಾದಿಕ್, ತಮಿಳುನಾಡಿನಾದ್ಯಂತ ನಡೆದ ಹಲವು ಹತ್ಯೆ ಪ್ರಕರಣಗಳಲ್ಲೂ ಆರೋಪಿಯಾಗಿದ್ದು, 26 ವರ್ಷಗಳ ಹಿಂದೆ ಅಂದರೆ 1996ರಲ್ಲಿ ತಲೆಮರೆಸಿಕೊಂಡಿದ್ದ.</p><p>ಸಾದಿಕ್ ಕೊಯಮತ್ತೂರು ಮೂಲದವನಾಗಿದ್ದು, ರಾಜಾ, ಟೇಲರ್ ರಾಜಾ, ವಲರಂತ ರಾಜಾ, ಶಹಜಹಾನ್ ಅಬ್ದುಲ್ ಮಜೀದ್ ಮಕಂದರ್ ಮತ್ತು ಶಹಜಹಾನ್ ಶೇಖ್ ಹೀಗೆ ಹಲವು ಹೆಸರುಗಳನ್ನು ಇಟ್ಟುಕೊಂಡು ತಲೆಮರೆಸಿಕೊಂಡಿದ್ದ. </p><p>'ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ವಿಶೇಷ ತಂಡವು ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಿದೆ. ವಿಜಯಪುರದಲ್ಲಿ ಟೇಲರ್ ರಾಜಾ ಎನ್ನುವ ಹೆಸರಿನಲ್ಲಿದ್ದ ಸಾದಿಕ್ ವಾಸಿಸುತ್ತಿದ್ದ" ಎಂದು ಎಟಿಎಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಈತ 1996ರಲ್ಲಿ ನಡೆದ ಪೆಟ್ರೋಲ್ ಬಾಂಬ್ ಸ್ಫೋಟ, 1996ರಲ್ಲಿ ನಗೋರ್ನಲ್ಲಿ ನಡೆದ ಸಯೀತಾ ಹತ್ಯೆ ಪ್ರಕರಣ, 1997ರಲ್ಲಿ ಮಧುರೈನಲ್ಲಿ ನಡೆದ ಜೈಲರ್ ಜಯಪ್ರಕಾಶ್ ಹತ್ಯೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> 1998ರ ಕೊಯಮತ್ತೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಾದಿಕ್ನನ್ನು ಕರ್ನಾಟಕದ ವಿಜಯಪುರದಲ್ಲಿ ಬಂಧಿಸಿರುವುದಾಗಿ ತಮಿಳುನಾಡು ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ಗುರುವಾರ ಹೇಳಿದೆ.</p><p>ಕೊಯಮತ್ತೂರು ಸ್ಫೋಟದಲ್ಲಿ 58 ಜನ ಮೃತರಾಗಿ 250 ಜನ ಗಾಯಗೊಂಡಿದ್ದರು. </p><p>ಸಾದಿಕ್, ತಮಿಳುನಾಡಿನಾದ್ಯಂತ ನಡೆದ ಹಲವು ಹತ್ಯೆ ಪ್ರಕರಣಗಳಲ್ಲೂ ಆರೋಪಿಯಾಗಿದ್ದು, 26 ವರ್ಷಗಳ ಹಿಂದೆ ಅಂದರೆ 1996ರಲ್ಲಿ ತಲೆಮರೆಸಿಕೊಂಡಿದ್ದ.</p><p>ಸಾದಿಕ್ ಕೊಯಮತ್ತೂರು ಮೂಲದವನಾಗಿದ್ದು, ರಾಜಾ, ಟೇಲರ್ ರಾಜಾ, ವಲರಂತ ರಾಜಾ, ಶಹಜಹಾನ್ ಅಬ್ದುಲ್ ಮಜೀದ್ ಮಕಂದರ್ ಮತ್ತು ಶಹಜಹಾನ್ ಶೇಖ್ ಹೀಗೆ ಹಲವು ಹೆಸರುಗಳನ್ನು ಇಟ್ಟುಕೊಂಡು ತಲೆಮರೆಸಿಕೊಂಡಿದ್ದ. </p><p>'ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ವಿಶೇಷ ತಂಡವು ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಿದೆ. ವಿಜಯಪುರದಲ್ಲಿ ಟೇಲರ್ ರಾಜಾ ಎನ್ನುವ ಹೆಸರಿನಲ್ಲಿದ್ದ ಸಾದಿಕ್ ವಾಸಿಸುತ್ತಿದ್ದ" ಎಂದು ಎಟಿಎಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.</p><p>ಈತ 1996ರಲ್ಲಿ ನಡೆದ ಪೆಟ್ರೋಲ್ ಬಾಂಬ್ ಸ್ಫೋಟ, 1996ರಲ್ಲಿ ನಗೋರ್ನಲ್ಲಿ ನಡೆದ ಸಯೀತಾ ಹತ್ಯೆ ಪ್ರಕರಣ, 1997ರಲ್ಲಿ ಮಧುರೈನಲ್ಲಿ ನಡೆದ ಜೈಲರ್ ಜಯಪ್ರಕಾಶ್ ಹತ್ಯೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>