<p><strong>ಕೊಯಮತ್ತೂರು</strong>: ಕಾರಿನಲ್ಲಿ ಸ್ನೇಹಿತನೊಂದಿಗೆ ತೆರಳುತ್ತಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.</p><p>ನವೆಂಬರ್ 2 ಭಾನುವಾರ ರಾತ್ರಿ ಕೊಯಮತ್ತೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ವೆಲ್ಲಿಕಿನಾರು ಎಂಬಲ್ಲಿ ಘಟನೆ ನಡೆದಿತ್ತು.</p><p>ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಇದೇ ಪ್ರದೇಶದಲ್ಲಿ ಅಡಗಿ ಕೂತಿದ್ದ ಗುಣ, ಸತೀಶ, ಕಾರ್ತಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು, ಅವರ ಕಾಲಿಗೆ ಗುಂಡು ಹೊಡೆದಿದ್ದಾರೆ.</p><p>ಆರೋಪಿಗಳನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಕೊಯಮತ್ತೂರು ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಗೆಳೆಯನ ಜೊತೆ ಭಾನುವಾರ ಸಂಜೆ ಕಾರಿನಲ್ಲಿ ಸುತ್ತಾಡಲು ತೆರಳಿದ್ದರು. ಈ ವೇಳೆ ವೆಲ್ಲಿಕಿನಾರು ಬಳಿ ಟಂಟಂ ಆಟೊದಲ್ಲಿ ಬಂದಿದ್ದ ಆರೋಪಿಗಳು ಕಾರಿನ ಕಿಟಕಿ ಒಡೆದು ಯುವಕನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.</p><p>ಘಟನೆ ನಡೆದ ನಂತರ ಸ್ಥಳೀಯರ ನೆರವಿನಿಂದ ಯುವತಿ ಹಾಗೂ ಆಕೆಯ ಗೆಳೆಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು</strong>: ಕಾರಿನಲ್ಲಿ ಸ್ನೇಹಿತನೊಂದಿಗೆ ತೆರಳುತ್ತಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.</p><p>ನವೆಂಬರ್ 2 ಭಾನುವಾರ ರಾತ್ರಿ ಕೊಯಮತ್ತೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ವೆಲ್ಲಿಕಿನಾರು ಎಂಬಲ್ಲಿ ಘಟನೆ ನಡೆದಿತ್ತು.</p><p>ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು ಇದೇ ಪ್ರದೇಶದಲ್ಲಿ ಅಡಗಿ ಕೂತಿದ್ದ ಗುಣ, ಸತೀಶ, ಕಾರ್ತಿಕ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಪೊಲೀಸರು, ಅವರ ಕಾಲಿಗೆ ಗುಂಡು ಹೊಡೆದಿದ್ದಾರೆ.</p><p>ಆರೋಪಿಗಳನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p><p>ಕೊಯಮತ್ತೂರು ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಗೆಳೆಯನ ಜೊತೆ ಭಾನುವಾರ ಸಂಜೆ ಕಾರಿನಲ್ಲಿ ಸುತ್ತಾಡಲು ತೆರಳಿದ್ದರು. ಈ ವೇಳೆ ವೆಲ್ಲಿಕಿನಾರು ಬಳಿ ಟಂಟಂ ಆಟೊದಲ್ಲಿ ಬಂದಿದ್ದ ಆರೋಪಿಗಳು ಕಾರಿನ ಕಿಟಕಿ ಒಡೆದು ಯುವಕನನ್ನು ಬೆದರಿಸಿ, ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.</p><p>ಘಟನೆ ನಡೆದ ನಂತರ ಸ್ಥಳೀಯರ ನೆರವಿನಿಂದ ಯುವತಿ ಹಾಗೂ ಆಕೆಯ ಗೆಳೆಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>