<p><strong>ನವದೆಹಲಿ:</strong> ಗಾಜಾ ಮೇಲೆ ಇಸ್ರೇಲ್ ನಡೆಸಿರುವ ಹಠಾತ್ ದಾಳಿಯನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ, 'ಇಸ್ರೇಲ್ ಸರ್ಕಾರವು 130 ಮಕ್ಕಳು ಸೇರಿದಂತೆ 400 ಅಮಾಯಕ ನಾಗರಿಕರನ್ನು ಕ್ರೂರವಾಗಿ ಹತ್ಯೆ ಮಾಡಿದೆ. ಮಾನವೀಯತೆಗೆ ಇಸ್ರೇಲ್ ಬೆಲೆಯೇ ಕೊಡುತ್ತಿಲ್ಲ' ಎಂದು ತೀಕ್ಷ್ಣವಾಗಿ ಪ್ರತಿಕ್ರಿಸಿಯಿದ್ದಾರೆ. </p><p>ಕದನ ವಿರಾಮ ಉಲ್ಲಂಘಿಸಿ ಗಾಜಾ ಪಟ್ಟಿಯಾದ್ಯಂತ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರಲ್ಲದೆ 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>'ಇಸ್ರೇಲ್ ನರಮೇಧವನ್ನು ಪಾಶ್ಚಿಮಾತ್ಯ ಶಕ್ತಿಗಳು ಬೆಂಬಲಿಸಿದರೂ ಆತ್ಮಸಾಕ್ಷಿ ಹೊಂದಿರುವ ಜಗತ್ತಿನ ಎಲ್ಲ ನಾಗರಿಕರು ಖಂಡಿಸುತ್ತಾರೆ. ಈ ದಾಳಿಯು ದೌರ್ಬಲ್ಯ ಮತ್ತು ಸತ್ಯವನ್ನು ಎದುರಿಸುವಲ್ಲಿ ಇಸ್ರೇಲ್ ಅಸಮರ್ಥತೆಯನ್ನು ತೋರಿಸುತ್ತದೆ' ಎಂದು ಪ್ರಿಯಾಂಕಾ ಹೇಳಿದ್ದಾರೆ. </p><p>'ಇಸ್ರೇಲ್ ಸರ್ಕಾರ ಕ್ರೂರವಾಗಿ ವರ್ತಿಸಿದಷ್ಟು ನಿಜಕ್ಕೂ ಹೇಡಿತನವನ್ನು ಬಹಿರಂಗಪಡಿಸುತ್ತದೆ. ಮತ್ತೊಂದೆಡೆ ಪಾಲೆಸ್ಟೀನಿಯರ ಧೈರ್ಯ ಮೇಲುಗೈ ಸಾಧಿಸುತ್ತದೆ. ಅವರು ಊಹಿಸಲು ಸಾಧ್ಯವಾಗದಷ್ಟು ನೋವನ್ನು ಸಹಿಸಿಕೊಂಡಿದ್ದಾರೆ. ಅವರ ಛಲ ಅಚಲವಾಗಿ ಉಳಿದಿದೆ. ಸತ್ಯಮೇವ ಜಯತೇ' ಎಂದು ಹೇಳಿದ್ದಾರೆ. </p>.ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 400ಕ್ಕೂ ಅಧಿಕ ಮಂದಿ ಸಾವು.ಗಾಜಾ ತೊರೆಯುವ ನಿವಾಸಿಗಳ ನಿರ್ಗಮನಕ್ಕೆ ಯೋಜನೆ ಸಿದ್ಧಪಡಿಸಿ: ಸೇನೆಗೆ ಇಸ್ರೇಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಾಜಾ ಮೇಲೆ ಇಸ್ರೇಲ್ ನಡೆಸಿರುವ ಹಠಾತ್ ದಾಳಿಯನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ, 'ಇಸ್ರೇಲ್ ಸರ್ಕಾರವು 130 ಮಕ್ಕಳು ಸೇರಿದಂತೆ 400 ಅಮಾಯಕ ನಾಗರಿಕರನ್ನು ಕ್ರೂರವಾಗಿ ಹತ್ಯೆ ಮಾಡಿದೆ. ಮಾನವೀಯತೆಗೆ ಇಸ್ರೇಲ್ ಬೆಲೆಯೇ ಕೊಡುತ್ತಿಲ್ಲ' ಎಂದು ತೀಕ್ಷ್ಣವಾಗಿ ಪ್ರತಿಕ್ರಿಸಿಯಿದ್ದಾರೆ. </p><p>ಕದನ ವಿರಾಮ ಉಲ್ಲಂಘಿಸಿ ಗಾಜಾ ಪಟ್ಟಿಯಾದ್ಯಂತ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರಲ್ಲದೆ 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>'ಇಸ್ರೇಲ್ ನರಮೇಧವನ್ನು ಪಾಶ್ಚಿಮಾತ್ಯ ಶಕ್ತಿಗಳು ಬೆಂಬಲಿಸಿದರೂ ಆತ್ಮಸಾಕ್ಷಿ ಹೊಂದಿರುವ ಜಗತ್ತಿನ ಎಲ್ಲ ನಾಗರಿಕರು ಖಂಡಿಸುತ್ತಾರೆ. ಈ ದಾಳಿಯು ದೌರ್ಬಲ್ಯ ಮತ್ತು ಸತ್ಯವನ್ನು ಎದುರಿಸುವಲ್ಲಿ ಇಸ್ರೇಲ್ ಅಸಮರ್ಥತೆಯನ್ನು ತೋರಿಸುತ್ತದೆ' ಎಂದು ಪ್ರಿಯಾಂಕಾ ಹೇಳಿದ್ದಾರೆ. </p><p>'ಇಸ್ರೇಲ್ ಸರ್ಕಾರ ಕ್ರೂರವಾಗಿ ವರ್ತಿಸಿದಷ್ಟು ನಿಜಕ್ಕೂ ಹೇಡಿತನವನ್ನು ಬಹಿರಂಗಪಡಿಸುತ್ತದೆ. ಮತ್ತೊಂದೆಡೆ ಪಾಲೆಸ್ಟೀನಿಯರ ಧೈರ್ಯ ಮೇಲುಗೈ ಸಾಧಿಸುತ್ತದೆ. ಅವರು ಊಹಿಸಲು ಸಾಧ್ಯವಾಗದಷ್ಟು ನೋವನ್ನು ಸಹಿಸಿಕೊಂಡಿದ್ದಾರೆ. ಅವರ ಛಲ ಅಚಲವಾಗಿ ಉಳಿದಿದೆ. ಸತ್ಯಮೇವ ಜಯತೇ' ಎಂದು ಹೇಳಿದ್ದಾರೆ. </p>.ಗಾಜಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 400ಕ್ಕೂ ಅಧಿಕ ಮಂದಿ ಸಾವು.ಗಾಜಾ ತೊರೆಯುವ ನಿವಾಸಿಗಳ ನಿರ್ಗಮನಕ್ಕೆ ಯೋಜನೆ ಸಿದ್ಧಪಡಿಸಿ: ಸೇನೆಗೆ ಇಸ್ರೇಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>