<p><strong>ಛಿಂದ್ವಾಢ</strong>: ಮಧ್ಯಪ್ರದೇಶದಲ್ಲಿ 24 ಮಕ್ಕಳ ಸಾವಿಗೆ ಕಾರಣವಾದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ತಯಾರಿಸಿದ್ದ ಸ್ರೇಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವೈದ್ಯಕೀಯ ಪ್ರತಿನಿಧಿ ಸತೀಶ್ ವರ್ಮಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಛಿಂದ್ವಾಢದಲ್ಲಿ ಸೋಮವಾರ ಮುಂಜಾನೆ ವರ್ಮಾ ಅವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಸ್ರೇಸನ್ ಫಾರ್ಮಾ ಕಂಪನಿ ಮಾಲೀಕ ಜಿ.ರಂಗನಾಥನ್ ಹಾಗೂ ಮಕ್ಕಳಿಗೆ ಈ ಸಿರಪ್ ಶಿಫಾರಸು ಮಾಡಿದ್ದ ಡಾ.ಪ್ರವೀಣ್ ಸೋನಿ ಸೇರಿದಂತೆ ಆರು ಮಂದಿಯನ್ನು ಈವರೆಗೆ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೃತಪಟ್ಟ 24 ಮಕ್ಕಳು ಐದು ವರ್ಷದೊಳಗಿನವರು. ‘ಕೋಲ್ಡ್ರಿಫ್’ ಸಿರಪ್ ಸೇವಿಸಿದ ಬಳಿಕ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದರು. ಇದಲ್ಲದೆ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ತಮಿಳುನಾಡು ಸರ್ಕಾರವು ಸ್ರೇಸನ್ ಫಾರ್ಮಾಕ್ಕೆ ನೀಡಿದ್ದ ತಯಾರಿಕಾ ಪರವಾನಗಿಯನ್ನು ರದ್ದುಪಡಿಸಿ, ಕಂಪನಿಯನ್ನು ಮುಚ್ಚಿಸಿತ್ತು.</p>.<p>ಈ ದುರಂತದ ಬಳಿಕ, ಭಾರತದ ಕೋಲ್ಡ್ರಿಫ್, ರೆಸ್ಪಿಫ್ರೆಶ್ ಟಿಆರ್ ಮತ್ತು ರಿಲೈಫ್ ಕಂಪನಿಗಳ ಕಲುಷಿತ ಕೆಮ್ಮಿನ ಸಿರಪ್ಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಕೆ ನೀಡಿತ್ತು. ಈ ಸಿರಪ್ಗಳು ವಿಶ್ವದಾದ್ಯಂತ ಎಲ್ಲಿ ಪತ್ತೆಯಾದರೂ ತಕ್ಷಣ ತಿಳಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛಿಂದ್ವಾಢ</strong>: ಮಧ್ಯಪ್ರದೇಶದಲ್ಲಿ 24 ಮಕ್ಕಳ ಸಾವಿಗೆ ಕಾರಣವಾದ ‘ಕೋಲ್ಡ್ರಿಫ್’ ಕೆಮ್ಮಿನ ಸಿರಪ್ ತಯಾರಿಸಿದ್ದ ಸ್ರೇಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ವೈದ್ಯಕೀಯ ಪ್ರತಿನಿಧಿ ಸತೀಶ್ ವರ್ಮಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಛಿಂದ್ವಾಢದಲ್ಲಿ ಸೋಮವಾರ ಮುಂಜಾನೆ ವರ್ಮಾ ಅವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಸ್ರೇಸನ್ ಫಾರ್ಮಾ ಕಂಪನಿ ಮಾಲೀಕ ಜಿ.ರಂಗನಾಥನ್ ಹಾಗೂ ಮಕ್ಕಳಿಗೆ ಈ ಸಿರಪ್ ಶಿಫಾರಸು ಮಾಡಿದ್ದ ಡಾ.ಪ್ರವೀಣ್ ಸೋನಿ ಸೇರಿದಂತೆ ಆರು ಮಂದಿಯನ್ನು ಈವರೆಗೆ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮೃತಪಟ್ಟ 24 ಮಕ್ಕಳು ಐದು ವರ್ಷದೊಳಗಿನವರು. ‘ಕೋಲ್ಡ್ರಿಫ್’ ಸಿರಪ್ ಸೇವಿಸಿದ ಬಳಿಕ ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದರು. ಇದಲ್ಲದೆ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂವರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ತಮಿಳುನಾಡು ಸರ್ಕಾರವು ಸ್ರೇಸನ್ ಫಾರ್ಮಾಕ್ಕೆ ನೀಡಿದ್ದ ತಯಾರಿಕಾ ಪರವಾನಗಿಯನ್ನು ರದ್ದುಪಡಿಸಿ, ಕಂಪನಿಯನ್ನು ಮುಚ್ಚಿಸಿತ್ತು.</p>.<p>ಈ ದುರಂತದ ಬಳಿಕ, ಭಾರತದ ಕೋಲ್ಡ್ರಿಫ್, ರೆಸ್ಪಿಫ್ರೆಶ್ ಟಿಆರ್ ಮತ್ತು ರಿಲೈಫ್ ಕಂಪನಿಗಳ ಕಲುಷಿತ ಕೆಮ್ಮಿನ ಸಿರಪ್ಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಎಚ್ಚರಿಕೆ ನೀಡಿತ್ತು. ಈ ಸಿರಪ್ಗಳು ವಿಶ್ವದಾದ್ಯಂತ ಎಲ್ಲಿ ಪತ್ತೆಯಾದರೂ ತಕ್ಷಣ ತಿಳಿಸುವಂತೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>