ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಯ ನಿರ್ಮೂಲನೆಗೆ ಸಾಂಘಿಕ ಪ್ರಯತ್ನ ಅಗತ್ಯ: ದ್ರೌಪದಿ ಮುರ್ಮು

‘ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನಕ್ಕೆ’ ಚಾಲನೆ
Last Updated 9 ಸೆಪ್ಟೆಂಬರ್ 2022, 16:09 IST
ಅಕ್ಷರ ಗಾತ್ರ

ನವದೆಹಲಿ: ‘2025ರ ವೇಳೆಗೆ ದೇಶದಿಂದ ಕ್ಷಯರೋಗವನ್ನು ನಿರ್ಮೂಲನೆ ಮಾಡಲು ಎಲ್ಲರೂ ಸಮರೋಪಾದಿಯಲ್ಲಿ ಸಾಂಘಿಕ ಪ್ರಯತ್ನ ನಡೆಸಬೇಕು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಕರೆ ನೀಡಿದ್ದಾರೆ.‌

‘ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ’ಕ್ಕೆ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ‘ನಿ– ಕ್ಷಯ್ 2.0’ ಪೋರ್ಟಲ್ ಅಡಿಯಲ್ಲಿ ಸರ್ಕಾರವು ಕ್ಷಯರೋಗಿಗಳಿಗೆ ಸಮುದಾಯದ ಬೆಂಬಲವನ್ನು ನೀಡುವ ಕ್ರಮವನ್ನು ಶ್ಲಾಘಿಸಿದರು.

‘ಸರ್ಕಾರ ರೂಪಿಸಿರುವ ಪೋರ್ಟಲ್ ಅಡಿಯಲ್ಲಿ ಒಬ್ಬ ವ್ಯಕ್ತಿ, ಚುನಾಯಿತಿ ಪ್ರತಿನಿಧಿ ಇಲ್ಲವೇ ಸಂಘ–ಸಂಸ್ಥೆಗಳು ದತ್ತು ಪಡೆದು ಆರೈಕೆ ಮಾಡಬಹುದಾಗಿದೆ. ಈ ಅಭಿಯಾನವನ್ನು ಜನಾಂದೋಲನವನ್ನಾಗಿ ಮಾಡಲು ಎಲ್ಲರೂ ಪ್ರಯತ್ನಿಸಬೇಕು’ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರು, ‘ಪ್ರಧಾನ ಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನವು ಪ್ರಧಾನಿ ನರೇಂದ್ರ ಮೋದಿ ಅವರ ನಾಗರಿಕ ಕೇಂದ್ರಿತ ನೀತಿಗಳ ವಿಸ್ತರಣೆಯಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT