<p><strong>ಲಖನೌ:</strong> ಕಪಾಳಮೋಕ್ಷ ಮಾಡಿದರೆಂದು ಸಿಟ್ಟಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಪ್ರಾಂಶುಪಾಲರ ಮೇಲೆ ಶನಿವಾರ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.</p>.<p>ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಪ್ರಾಂಶುಪಾಲ ರಾಮ್ಸಿಂಗ್ ವರ್ಮಾ ಅವರ ಸ್ಥಿತಿ ಗಂಭೀರವಾಗಿದೆ.</p>.<p>‘ರೇವಾನ್ ನಿವಾಸಿಯಾಗಿರುವ ವಿದ್ಯಾರ್ಥಿಯು ಆಸನದ ವಿಚಾರವಾಗಿ ಶುಕ್ರವಾರಸಹಪಾಠಿ ಜೊತೆ ಜಗಳ ಮಾಡಿಕೊಂಡಿದ್ದ. ಆತನನ್ನು ಕೊಠಡಿಗೆ ಕರೆಸಿದ್ದ ಪ್ರಾಂಶುಪಾಲರು ಬುದ್ಧಿವಾದ ಹೇಳಲು ಮುಂದಾಗಿದ್ದರು. ಈ ವೇಳೆ ಆತ ತನ್ನ ವರ್ತನೆ ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದ. ಆಗ ಕಪಾಳಕ್ಕೆ ಹೊಡೆದಿದ್ದರು. ಮರು ಮಾತನಾಡದೆ ಅಲ್ಲಿಂದ ಮನೆಗೆ ತೆರಳಿದ್ದ ಆತ ಶನಿವಾರ ಬೆಳಿಗ್ಗೆಪಿಸ್ತೂಲ್ನೊಂದಿಗೆ ಕಾಲೇಜಿಗೆ ಬಂದಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><a href="https://www.prajavani.net/district/mysore/no-mahisha-dasara-in-chamundi-hill-974731.html" itemprop="url">ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅವಕಾಶವಿಲ್ಲ: ಪ್ರತಿಮೆಗೆ ಬಟ್ಟೆ </a></p>.<p>‘ಕಾಲೇಜಿನ ಹೊರಗೆ ನಿರ್ಮಾಣ ಮಾಡಲಾಗುತ್ತಿರುವ ಮಳಿಗೆಗಳನ್ನುರಾಮ್ಸಿಂಗ್ ಪರಿಶೀಲಿಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯು ಅವರೆಡೆ ಮೂರು ಸುತ್ತು ಗುಂಡು ಹಾರಿಸಿದ್ದ. ಅವು ರಾಮ್ಸಿಂಗ್ ತಲೆ, ಹೊಟ್ಟೆ ಹಾಗೂ ತೊಡೆಗೆ ತಗುಲಿದ್ದವು. ಗುಂಡಿನ ಸದ್ದು ಕೇಳಿದೊಡನೆ ಕಾಲೇಜಿನ ಇತರ ಸಿಬ್ಬಂದಿ ಹೊರಗೆ ಬಂದಿದ್ದರು. ಅವರನ್ನು ಕಂಡೊಡನೆ ವಿದ್ಯಾರ್ಥಿಯು ಅಲ್ಲಿಂದ ಪರಾರಿಯಾಗಿದ್ದ’ ಎಂದು ಮೂಲಗಳು ತಿಳಿಸಿವೆ.</p>.<p>‘ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ವಿದ್ಯಾರ್ಥಿಯ ಪತ್ತೆಗೆ ತಂಡ ರಚಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಆತ ಪಿಸ್ತೂಲ್ ಎಲ್ಲಿಂದ ತಂದ ಎಂಬುದು ಗೊತ್ತಿಲ್ಲ ಎಂದು ವಿದ್ಯಾರ್ಥಿಯ ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕಪಾಳಮೋಕ್ಷ ಮಾಡಿದರೆಂದು ಸಿಟ್ಟಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಪ್ರಾಂಶುಪಾಲರ ಮೇಲೆ ಶನಿವಾರ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.</p>.<p>ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಪ್ರಾಂಶುಪಾಲ ರಾಮ್ಸಿಂಗ್ ವರ್ಮಾ ಅವರ ಸ್ಥಿತಿ ಗಂಭೀರವಾಗಿದೆ.</p>.<p>‘ರೇವಾನ್ ನಿವಾಸಿಯಾಗಿರುವ ವಿದ್ಯಾರ್ಥಿಯು ಆಸನದ ವಿಚಾರವಾಗಿ ಶುಕ್ರವಾರಸಹಪಾಠಿ ಜೊತೆ ಜಗಳ ಮಾಡಿಕೊಂಡಿದ್ದ. ಆತನನ್ನು ಕೊಠಡಿಗೆ ಕರೆಸಿದ್ದ ಪ್ರಾಂಶುಪಾಲರು ಬುದ್ಧಿವಾದ ಹೇಳಲು ಮುಂದಾಗಿದ್ದರು. ಈ ವೇಳೆ ಆತ ತನ್ನ ವರ್ತನೆ ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದ. ಆಗ ಕಪಾಳಕ್ಕೆ ಹೊಡೆದಿದ್ದರು. ಮರು ಮಾತನಾಡದೆ ಅಲ್ಲಿಂದ ಮನೆಗೆ ತೆರಳಿದ್ದ ಆತ ಶನಿವಾರ ಬೆಳಿಗ್ಗೆಪಿಸ್ತೂಲ್ನೊಂದಿಗೆ ಕಾಲೇಜಿಗೆ ಬಂದಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><a href="https://www.prajavani.net/district/mysore/no-mahisha-dasara-in-chamundi-hill-974731.html" itemprop="url">ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅವಕಾಶವಿಲ್ಲ: ಪ್ರತಿಮೆಗೆ ಬಟ್ಟೆ </a></p>.<p>‘ಕಾಲೇಜಿನ ಹೊರಗೆ ನಿರ್ಮಾಣ ಮಾಡಲಾಗುತ್ತಿರುವ ಮಳಿಗೆಗಳನ್ನುರಾಮ್ಸಿಂಗ್ ಪರಿಶೀಲಿಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯು ಅವರೆಡೆ ಮೂರು ಸುತ್ತು ಗುಂಡು ಹಾರಿಸಿದ್ದ. ಅವು ರಾಮ್ಸಿಂಗ್ ತಲೆ, ಹೊಟ್ಟೆ ಹಾಗೂ ತೊಡೆಗೆ ತಗುಲಿದ್ದವು. ಗುಂಡಿನ ಸದ್ದು ಕೇಳಿದೊಡನೆ ಕಾಲೇಜಿನ ಇತರ ಸಿಬ್ಬಂದಿ ಹೊರಗೆ ಬಂದಿದ್ದರು. ಅವರನ್ನು ಕಂಡೊಡನೆ ವಿದ್ಯಾರ್ಥಿಯು ಅಲ್ಲಿಂದ ಪರಾರಿಯಾಗಿದ್ದ’ ಎಂದು ಮೂಲಗಳು ತಿಳಿಸಿವೆ.</p>.<p>‘ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ವಿದ್ಯಾರ್ಥಿಯ ಪತ್ತೆಗೆ ತಂಡ ರಚಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಆತ ಪಿಸ್ತೂಲ್ ಎಲ್ಲಿಂದ ತಂದ ಎಂಬುದು ಗೊತ್ತಿಲ್ಲ ಎಂದು ವಿದ್ಯಾರ್ಥಿಯ ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>