<p><strong>ಭೋಪಾಲ್:</strong> ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ವಿರುದ್ಧ ಇಂದೋರ್ನಲ್ಲಿ ಎಫ್ಐಆರ್ ದಾಖಲಾಗಿದೆ.</p><p>ಬುಧವಾರ ಎಫ್ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸರಿಗೆ ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸತ್ತು. ಈ ಹಿನ್ನೆಲೆಯಲ್ಲಿ ಇಂದೋರ್ನ ಮನ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹಿತಿಕಾ ತಿಳಿಸಿದ್ದಾರೆ.</p>.ಸೋಫಿಯಾ ಮಾವನ ಮನೆ ಮೇಲೆ ದಾಳಿ: ವದಂತಿ ಹೊರತು ಸತ್ಯವಲ್ಲ: ಪೊಲೀಸ್ ವರಿಷ್ಠಾಧಿಕಾರಿ.ಮಧ್ಯಪ್ರದೇಶ: ಸೋಫಿಯಾ ಬಗ್ಗೆ ಸಚಿವ ಶಾ ವಿವಾದಾತ್ಮಕ ಹೇಳಿಕೆ: ಎಫ್ಐಆರ್ ದಾಖಲು.<p>ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾಯ್ದೆ (152), ಸಮುದಾಯಗಳ ನಡುವೆ ಕೋಮು ಭಾವನೆ ಕೆರಳಿಸುವುದು (197 (1) (ಸಿ) ಮತ್ತು ಸಾರ್ವಜನಿಕರಲ್ಲಿ ಶಾಂತಿಗೆ ಭಂಗ (196 (1) (ಬಿ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. </p><p>ಸಚಿವ ಶಾ ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p><p><strong>ಸಚಿವ ಶಾ ಹೇಳಿದ್ದೇನು:</strong> ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ ‘ಆಪರೇಷನ್ ಸಿಂಧೂರ’ ಕುರಿತು ಪ್ರಸ್ತಾಪಿಸಿದ್ದರು. ಅಲ್ಲದೇ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂಬಂತಹ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.</p><p>ಶಾ ಹೇಳಿಕೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಬಳಿಕ ಎಚ್ಚೆತ್ತುಕೊಂಡ ಶಾ, ‘ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ, 10 ಬಾರಿ ಕ್ಷಮೆ ಯಾಚಿಸಲು ನಾನು ಸಿದ್ಧ. ಕರ್ನಲ್ ಖುರೇಷಿ ಅವರನ್ನು ನನ್ನ ಸಹೋದರಿಗಿಂತಲೂ ಹೆಚ್ಚು ಗೌರವಿಸುತ್ತೇನೆ’ ಎಂದು ಹೇಳಿದ್ದಾರೆ.</p>.ಸೋಫಿಯಾ ಖುರೇಷಿ ಕುರಿತ ಹೇಳಿಕೆ ವಿವಾದ: MP ಸಚಿವ ವಿಜಯ್ ಒಬ್ಬ ‘ಮೂರ್ಖ’ ಎಂದ ನಖ್ವಿ.ಕರ್ನಲ್ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಚಿವನ ವಿರುದ್ಧ FIRಗೆ HC ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ವಿರುದ್ಧ ಇಂದೋರ್ನಲ್ಲಿ ಎಫ್ಐಆರ್ ದಾಖಲಾಗಿದೆ.</p><p>ಬುಧವಾರ ಎಫ್ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸರಿಗೆ ಮಧ್ಯಪ್ರದೇಶ ಹೈಕೋರ್ಟ್ ಆದೇಶಿಸತ್ತು. ಈ ಹಿನ್ನೆಲೆಯಲ್ಲಿ ಇಂದೋರ್ನ ಮನ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹಿತಿಕಾ ತಿಳಿಸಿದ್ದಾರೆ.</p>.ಸೋಫಿಯಾ ಮಾವನ ಮನೆ ಮೇಲೆ ದಾಳಿ: ವದಂತಿ ಹೊರತು ಸತ್ಯವಲ್ಲ: ಪೊಲೀಸ್ ವರಿಷ್ಠಾಧಿಕಾರಿ.ಮಧ್ಯಪ್ರದೇಶ: ಸೋಫಿಯಾ ಬಗ್ಗೆ ಸಚಿವ ಶಾ ವಿವಾದಾತ್ಮಕ ಹೇಳಿಕೆ: ಎಫ್ಐಆರ್ ದಾಖಲು.<p>ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾಯ್ದೆ (152), ಸಮುದಾಯಗಳ ನಡುವೆ ಕೋಮು ಭಾವನೆ ಕೆರಳಿಸುವುದು (197 (1) (ಸಿ) ಮತ್ತು ಸಾರ್ವಜನಿಕರಲ್ಲಿ ಶಾಂತಿಗೆ ಭಂಗ (196 (1) (ಬಿ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. </p><p>ಸಚಿವ ಶಾ ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p><p><strong>ಸಚಿವ ಶಾ ಹೇಳಿದ್ದೇನು:</strong> ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ ‘ಆಪರೇಷನ್ ಸಿಂಧೂರ’ ಕುರಿತು ಪ್ರಸ್ತಾಪಿಸಿದ್ದರು. ಅಲ್ಲದೇ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂಬಂತಹ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.</p><p>ಶಾ ಹೇಳಿಕೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಬಳಿಕ ಎಚ್ಚೆತ್ತುಕೊಂಡ ಶಾ, ‘ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ, 10 ಬಾರಿ ಕ್ಷಮೆ ಯಾಚಿಸಲು ನಾನು ಸಿದ್ಧ. ಕರ್ನಲ್ ಖುರೇಷಿ ಅವರನ್ನು ನನ್ನ ಸಹೋದರಿಗಿಂತಲೂ ಹೆಚ್ಚು ಗೌರವಿಸುತ್ತೇನೆ’ ಎಂದು ಹೇಳಿದ್ದಾರೆ.</p>.ಸೋಫಿಯಾ ಖುರೇಷಿ ಕುರಿತ ಹೇಳಿಕೆ ವಿವಾದ: MP ಸಚಿವ ವಿಜಯ್ ಒಬ್ಬ ‘ಮೂರ್ಖ’ ಎಂದ ನಖ್ವಿ.ಕರ್ನಲ್ ಸೋಫಿಯಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಚಿವನ ವಿರುದ್ಧ FIRಗೆ HC ಆದೇಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>