<p><strong>ಹೈದರಾಬಾದ್:</strong> ಇಲ್ಲಿನ ಬಾಡಿಗೆ ತಾಯ್ತನ ಮತ್ತು ಅಂಡಾಣು ಮಾರಾಟ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ನಡೆಯುತ್ತಿದ್ದ ಕೃತಕ ಗರ್ಭಧಾರಣೆಯ (ಐವಿಎಫ್) ಬೃಹತ್ ಜಾಲವನ್ನು ಭೇದಿಸಿದ್ದಾರೆ. </p><p>ಏಳು ಮಹಿಳೆಯರು ಸೇರಿಕೊಂಡು ನಗರದ ಕೆಲವು ಕೃತಕ ಗರ್ಭಧಾರಣೆ ಕೇಂದ್ರಗಳ ಸಹಕಾರದಲ್ಲಿ ಈ ಕೇಂದ್ರ ನಡೆಸುತ್ತಿದ್ದರು. ಇತ್ತೀಚೆಗೆ ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೃಷ್ಟಿ ಐವಿಎಫ್ ಕ್ಲಿನಿಕ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ, ಈ ಅಕ್ರಮ ಜಾಲ ಬಹಿರಂಗಗೊಂಡಿದೆ. </p><p>ಈ ಪ್ರಕರಣದ ಪ್ರಮುಖ ಆರೋಪಿ ಎನ್. ಲಕ್ಷ್ಮಿ ರೆಡ್ಡಿ, ಈ ಹಿಂದೆ ಅಂಡಾಣು ದಾನಿಯಾಗಿ ಹಾಗೂ ಬಾಡಿಗೆ ತಾಯಿಯಾಗಿ ಕಾರ್ಯನಿರ್ವಹಿಸಿದ್ದರು. ಆ ಅನುಭವ ಇಟ್ಟುಕೊಂಡು ಅಕ್ರಮವಾಗಿ ಹಣ ಗಳಿಸಲು ಮಧ್ಯವರ್ತಿಗಳ ಮೂಲಕ ಐವಿಎಫ್ ಕೇಂದ್ರಗಳೊಂದಿಗೆ ಸಂಪರ್ಕ ಸಾಧಿಸಿ ವ್ಯವಹಾರ ನಡೆಸುತ್ತಿದ್ದರು. ಇದಕ್ಕಾಗಿ ಬಾಡಿಗೆ ತಾಯಂದಿರನ್ನು ಮತ್ತು ಅಂಡಾಣು ದಾನಿಗಳನ್ನು ನೇಮಿಸಿಕೊಂಡು, ಅವರನ್ನು ಐವಿಎಫ್ ಕೇಂದ್ರಗಳಿಗೆ ಪೂರೈಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಇಲ್ಲಿನ ಬಾಡಿಗೆ ತಾಯ್ತನ ಮತ್ತು ಅಂಡಾಣು ಮಾರಾಟ ಕೇಂದ್ರವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ನಡೆಯುತ್ತಿದ್ದ ಕೃತಕ ಗರ್ಭಧಾರಣೆಯ (ಐವಿಎಫ್) ಬೃಹತ್ ಜಾಲವನ್ನು ಭೇದಿಸಿದ್ದಾರೆ. </p><p>ಏಳು ಮಹಿಳೆಯರು ಸೇರಿಕೊಂಡು ನಗರದ ಕೆಲವು ಕೃತಕ ಗರ್ಭಧಾರಣೆ ಕೇಂದ್ರಗಳ ಸಹಕಾರದಲ್ಲಿ ಈ ಕೇಂದ್ರ ನಡೆಸುತ್ತಿದ್ದರು. ಇತ್ತೀಚೆಗೆ ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೃಷ್ಟಿ ಐವಿಎಫ್ ಕ್ಲಿನಿಕ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ, ಈ ಅಕ್ರಮ ಜಾಲ ಬಹಿರಂಗಗೊಂಡಿದೆ. </p><p>ಈ ಪ್ರಕರಣದ ಪ್ರಮುಖ ಆರೋಪಿ ಎನ್. ಲಕ್ಷ್ಮಿ ರೆಡ್ಡಿ, ಈ ಹಿಂದೆ ಅಂಡಾಣು ದಾನಿಯಾಗಿ ಹಾಗೂ ಬಾಡಿಗೆ ತಾಯಿಯಾಗಿ ಕಾರ್ಯನಿರ್ವಹಿಸಿದ್ದರು. ಆ ಅನುಭವ ಇಟ್ಟುಕೊಂಡು ಅಕ್ರಮವಾಗಿ ಹಣ ಗಳಿಸಲು ಮಧ್ಯವರ್ತಿಗಳ ಮೂಲಕ ಐವಿಎಫ್ ಕೇಂದ್ರಗಳೊಂದಿಗೆ ಸಂಪರ್ಕ ಸಾಧಿಸಿ ವ್ಯವಹಾರ ನಡೆಸುತ್ತಿದ್ದರು. ಇದಕ್ಕಾಗಿ ಬಾಡಿಗೆ ತಾಯಂದಿರನ್ನು ಮತ್ತು ಅಂಡಾಣು ದಾನಿಗಳನ್ನು ನೇಮಿಸಿಕೊಂಡು, ಅವರನ್ನು ಐವಿಎಫ್ ಕೇಂದ್ರಗಳಿಗೆ ಪೂರೈಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>