<p><strong>ಅಹಮದಾಬಾದ್:</strong> ಅಯೋಧ್ಯೆಯ ರಾಮಮಂದಿರದಲ್ಲಿನ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಉತ್ತರ ಗುಜರಾತ್ನ ಮೆಹಸಾಣ ಜಿಲ್ಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶೋಭಾ ಯಾತ್ರೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಖೇರಾಲು ನಗರದ ಬೇಲಿಮ್ ವಾಸ್ನ ಹತಾಡಿಯಾ ಪ್ರದೇಶದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಲ್ಲು ತೂರಾಟದಲ್ಲಿ ತೊಡಗಿದ್ದ ಎರಡೂ ಸಮುದಾಯಗಳ ಗುಂಪನ್ನು ಚದುರಿಸಲು ಕನಿಷ್ಠ ಮೂರು ಸುತ್ತು ಅಶ್ರುವಾಯು ಶೆಲ್ಗಳನ್ನು ಸಿಡಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಬ್ಬರದ ಸಂಗೀತ ಹಾಕಿಕೊಂಡು, ಪಟಾಕಿ ಸಿಡಿಸಿದ್ದಕ್ಕೆ ಸ್ಥಳೀಯರು ಕಲ್ಲು ತೂರಿದ್ದಾರೆ ಎಂದು ಹೇಳಲಾಗಿದೆ. ಬೇಲಿಮ್ ವಾಸ್ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಪ್ರದೇಶವಾಗಿದೆ.</p>.<p>ಮನೆಯ ಚಾವಣಿಯಿಂದ ಕಲ್ಲುಗಳನ್ನು ಎಸೆಯುತ್ತಿರುವ ದೃಶ್ಯಗಳ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಅಯೋಧ್ಯೆಯ ರಾಮಮಂದಿರದಲ್ಲಿನ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಉತ್ತರ ಗುಜರಾತ್ನ ಮೆಹಸಾಣ ಜಿಲ್ಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶೋಭಾ ಯಾತ್ರೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಖೇರಾಲು ನಗರದ ಬೇಲಿಮ್ ವಾಸ್ನ ಹತಾಡಿಯಾ ಪ್ರದೇಶದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಲ್ಲು ತೂರಾಟದಲ್ಲಿ ತೊಡಗಿದ್ದ ಎರಡೂ ಸಮುದಾಯಗಳ ಗುಂಪನ್ನು ಚದುರಿಸಲು ಕನಿಷ್ಠ ಮೂರು ಸುತ್ತು ಅಶ್ರುವಾಯು ಶೆಲ್ಗಳನ್ನು ಸಿಡಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಬ್ಬರದ ಸಂಗೀತ ಹಾಕಿಕೊಂಡು, ಪಟಾಕಿ ಸಿಡಿಸಿದ್ದಕ್ಕೆ ಸ್ಥಳೀಯರು ಕಲ್ಲು ತೂರಿದ್ದಾರೆ ಎಂದು ಹೇಳಲಾಗಿದೆ. ಬೇಲಿಮ್ ವಾಸ್ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಪ್ರದೇಶವಾಗಿದೆ.</p>.<p>ಮನೆಯ ಚಾವಣಿಯಿಂದ ಕಲ್ಲುಗಳನ್ನು ಎಸೆಯುತ್ತಿರುವ ದೃಶ್ಯಗಳ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>