<p><strong>ಹೈದರಾಬಾದ್:</strong> ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಬಿಆರ್ಎಸ್ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದು, ಕೋಮುಗಲಭೆಗೆ ಪ್ರಚೋದಿಸುತ್ತಿವೆ ಎಂದು ತೆಲಂಗಾಣ ಸಚಿವ ಹಾಗೂ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ಆರೋಪಿಸಿದ್ದಾರೆ.</p><p>ಜುಬ್ಲಿ ಹಿಲ್ ಉಪ ಚುನಾವಣೆಯಲ್ಲಿ ತಮ್ಮ ಭವಿಷ್ಯ ನಿರ್ಧಾರವಾಗಲಿದೆ ಎನ್ನುವ ಭಯದಲ್ಲಿ ಬಾಯಿಗೆ ಬಂದಂತೆ ವಿರೋಧ ಪಕ್ಷಗಳು ಮಾತನಾಡುತ್ತಿದ್ದಾರೆ. ಅವರಿಗೆ ಕೋಮು ವಿಷಯಗಳನ್ನು ಬಿಟ್ಟರೆ, ಮಾತನಾಡಲು ಬೇರೆ ಯಾವುದೇ ವಿಷಯಗಳಿಲ್ಲ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ನವೀನ್ ಯಾದವ್ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ. </p><p>ನಿಜಾಮರ ಕಾಲದಿಂದಲೂ ಹೈದರಾಬಾದ್ನಲ್ಲಿ ಹಿಂದೂ ಹಾಗೂ ಮುಸ್ಲಿಂರು ಸಹಬಾಳ್ವೆಯಿಂದ ಇದ್ದಾರೆ ಎಂದು ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಹೇಳಿದ್ದರು. </p><p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್, ಮುಸ್ಲಿಂ ಟೋಪಿ ಹಾಕಿಕೊಳ್ಳುವ ರೇವಂತ ರೆಡ್ಡಿ ಅವರು ಸಾಧ್ಯವಾದರೆ ಅಜರುದ್ದೀನ್ ಅವರಿಗೆ ತಿಲಕವಿಡುವಂತೆ ಮಾಡಲಿ ಎಂದಿದ್ದರು. </p><p>ನವೆಂಬರ್ 11 ರಂದು ಜುಬ್ಲಿ ಹಿಲ್ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಬಿಆರ್ಎಸ್ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದು, ಕೋಮುಗಲಭೆಗೆ ಪ್ರಚೋದಿಸುತ್ತಿವೆ ಎಂದು ತೆಲಂಗಾಣ ಸಚಿವ ಹಾಗೂ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ಆರೋಪಿಸಿದ್ದಾರೆ.</p><p>ಜುಬ್ಲಿ ಹಿಲ್ ಉಪ ಚುನಾವಣೆಯಲ್ಲಿ ತಮ್ಮ ಭವಿಷ್ಯ ನಿರ್ಧಾರವಾಗಲಿದೆ ಎನ್ನುವ ಭಯದಲ್ಲಿ ಬಾಯಿಗೆ ಬಂದಂತೆ ವಿರೋಧ ಪಕ್ಷಗಳು ಮಾತನಾಡುತ್ತಿದ್ದಾರೆ. ಅವರಿಗೆ ಕೋಮು ವಿಷಯಗಳನ್ನು ಬಿಟ್ಟರೆ, ಮಾತನಾಡಲು ಬೇರೆ ಯಾವುದೇ ವಿಷಯಗಳಿಲ್ಲ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ನ ನವೀನ್ ಯಾದವ್ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ. </p><p>ನಿಜಾಮರ ಕಾಲದಿಂದಲೂ ಹೈದರಾಬಾದ್ನಲ್ಲಿ ಹಿಂದೂ ಹಾಗೂ ಮುಸ್ಲಿಂರು ಸಹಬಾಳ್ವೆಯಿಂದ ಇದ್ದಾರೆ ಎಂದು ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಹೇಳಿದ್ದರು. </p><p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್, ಮುಸ್ಲಿಂ ಟೋಪಿ ಹಾಕಿಕೊಳ್ಳುವ ರೇವಂತ ರೆಡ್ಡಿ ಅವರು ಸಾಧ್ಯವಾದರೆ ಅಜರುದ್ದೀನ್ ಅವರಿಗೆ ತಿಲಕವಿಡುವಂತೆ ಮಾಡಲಿ ಎಂದಿದ್ದರು. </p><p>ನವೆಂಬರ್ 11 ರಂದು ಜುಬ್ಲಿ ಹಿಲ್ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>