<p><strong>ಹೈದರಾಬಾದ್:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ (ಕೆಟಿಆರ್) ವಿರುದ್ಧ ಪ್ರಕರಣ ದಾಖಲಾಗಿದೆ</p><p>ತೆಲಂಗಾಣದ ಹನುಮಕೊಂಡ ಜಿಲ್ಲೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಬುಧವಾರ ವಾರಂಗಲ್ನಲ್ಲಿ ನಡೆದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕೆಟಿಆರ್, ರಾಹುಲ್ ಗಾಂಧಿ ಮತ್ತು ರೇವಂತ್ ರೆಡ್ಡಿ ಅವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದರು.</p><p>ಸ್ಥಳೀಯ ಕಾಂಗ್ರೆಸ್ ನಾಯಕರು ಕೆಟಿಆರ್ ಹೇಳಿಕೆಗಳು ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಿವೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p><p>ದೂರಿನ ಅನ್ವಯ ಪೊಲೀಸರು ಕೆಟಿಆರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ತೆಲಂಗಾಣದ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್ಎಸ್ ನಡುವೆ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಈ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ (ಕೆಟಿಆರ್) ವಿರುದ್ಧ ಪ್ರಕರಣ ದಾಖಲಾಗಿದೆ</p><p>ತೆಲಂಗಾಣದ ಹನುಮಕೊಂಡ ಜಿಲ್ಲೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p><p>ಬುಧವಾರ ವಾರಂಗಲ್ನಲ್ಲಿ ನಡೆದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಕೆಟಿಆರ್, ರಾಹುಲ್ ಗಾಂಧಿ ಮತ್ತು ರೇವಂತ್ ರೆಡ್ಡಿ ಅವರ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ದೂರು ನೀಡಿದ್ದರು.</p><p>ಸ್ಥಳೀಯ ಕಾಂಗ್ರೆಸ್ ನಾಯಕರು ಕೆಟಿಆರ್ ಹೇಳಿಕೆಗಳು ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಿವೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p><p>ದೂರಿನ ಅನ್ವಯ ಪೊಲೀಸರು ಕೆಟಿಆರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ತೆಲಂಗಾಣದ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್ಎಸ್ ನಡುವೆ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಈ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>