<p><strong>ನವದೆಹಲಿ:</strong> ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ವಿರುದ್ಧದ ‘ಉದ್ಯೋಗಕ್ಕಾಗಿ ಹಣ’ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆ ತೆಗೆದುಕೊಂಡಿದೆ.</p>.<p>ಪ್ರಕರಣದಲ್ಲಿ 2000 ಮಂದಿಯನ್ನು ಆರೋಪಿಗಳನ್ನಾಗಿ ಮಾಡುವ ಮೂಲಕ ತಮಿಳುನಾಡು ಸರ್ಕಾರವು ನ್ಯಾಯಾಂಗ ವ್ಯವಸ್ಥೆಗೆ ವಂಚನೆ ಎಸಗಿದೆ ಎಂದು ನ್ಯಾಯಾಲಯ ಚಾಟಿ ಬೀಸಿದೆ. </p>.<p>ಸೆಂಥಿಲ್ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ 2 ಪ್ರಕರಣಗಳು ದಾಖಲಾಗಿವೆ. ವಂಚನೆಗೀಡಾದ 2000 ಜನರನ್ನೂ ಲಂಚ ನೀಡಿದ್ದಾರೆ ಎಂಬ ಕಾರಣಕ್ಕೆ ಈ ಪ್ರಕರಣಗಳಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ. </p>.<p>ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸರ್ಕಾರವನ್ನು ತರಾಟೆ ತೆಗೆದುಕೊಂಡು, ‘ವಿಚಾರಣೆ ಅಂತ್ಯವೇ ಆಗದಂತೆ ಮಾಡಲು ಈ ರೀತಿ 2000 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದೀರಾ’ ಎಂದು ಪ್ರಶ್ನಿಸಿದೆ.</p>.<p>ಜತೆಗೆ ಬಾಲಾಜಿ ಅವರನ್ನು ಕುರಿತ ಎಲ್ಲಾ ಬಾಕಿ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮಿಳುನಾಡು ಮಾಜಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ವಿರುದ್ಧದ ‘ಉದ್ಯೋಗಕ್ಕಾಗಿ ಹಣ’ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆ ತೆಗೆದುಕೊಂಡಿದೆ.</p>.<p>ಪ್ರಕರಣದಲ್ಲಿ 2000 ಮಂದಿಯನ್ನು ಆರೋಪಿಗಳನ್ನಾಗಿ ಮಾಡುವ ಮೂಲಕ ತಮಿಳುನಾಡು ಸರ್ಕಾರವು ನ್ಯಾಯಾಂಗ ವ್ಯವಸ್ಥೆಗೆ ವಂಚನೆ ಎಸಗಿದೆ ಎಂದು ನ್ಯಾಯಾಲಯ ಚಾಟಿ ಬೀಸಿದೆ. </p>.<p>ಸೆಂಥಿಲ್ ಬಾಲಾಜಿ ಅವರು ಸಾರಿಗೆ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ 2 ಪ್ರಕರಣಗಳು ದಾಖಲಾಗಿವೆ. ವಂಚನೆಗೀಡಾದ 2000 ಜನರನ್ನೂ ಲಂಚ ನೀಡಿದ್ದಾರೆ ಎಂಬ ಕಾರಣಕ್ಕೆ ಈ ಪ್ರಕರಣಗಳಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ. </p>.<p>ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸರ್ಕಾರವನ್ನು ತರಾಟೆ ತೆಗೆದುಕೊಂಡು, ‘ವಿಚಾರಣೆ ಅಂತ್ಯವೇ ಆಗದಂತೆ ಮಾಡಲು ಈ ರೀತಿ 2000 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದ್ದೀರಾ’ ಎಂದು ಪ್ರಶ್ನಿಸಿದೆ.</p>.<p>ಜತೆಗೆ ಬಾಲಾಜಿ ಅವರನ್ನು ಕುರಿತ ಎಲ್ಲಾ ಬಾಕಿ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>