ಪಿಎಂಜಿಎಸ್ವೈ ಯೋಜನೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಡಿಎಂಕೆ ಸಂಸದೆ ಕನಿಮೋಳಿ ನೇತೃತ್ವದ ಸ್ಥಾಯಿ ಸಮಿತಿ ಗುರುವಾರ ಲೋಕಸಭೆಯಲ್ಲಿ ತನ್ನ ವರದಿ ಮಂಡಿಸಿತು. ಭಾರತದ ಮಹತ್ವಾಕಾಂಕ್ಷಿ ಯೋಜನೆ ಪಿಎಂಜಿಎಸ್ವೈ ಅಡಿ ದೇಶದಲ್ಲಿ ನಿರ್ಮಾಣವಾಗಿರುವ ರಸ್ತೆಗಳ ಕಾಮಗಾರಿ ಗುಣಮಟ್ಟದಲ್ಲಿ ರಾಜಿಯಾಗಿದೆ. ಇದು ಒಪ್ಪತಕ್ಕದ್ದಲ್ಲ ಎಂದು ಸಮಿತಿ ಹೇಳಿತು.