ಬೆಂಬಲಿಗರೊಬ್ಬರ ಮನೆಯಲ್ಲಿ ಬುಧವಾರ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲಿಂದ ತೆರಳುತ್ತಿದ್ದಾಗ ಅವರ ಮೇಲೆ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಗುಂಡು ಆಜಾದ್ ಹೊಟ್ಟೆಯನ್ನು ತಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸದ್ಯಕ್ಕೆ ಸ್ಥಿರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಿಮನ್ಯು ಮಂಗಳಿಕ್ ಹೇಳಿದ್ದಾರೆ.