<p><strong>ನವದೆಹಲಿ</strong>: ‘ವಯನಾಡು ಭೂಕುಸಿತದ ಪ್ರಮಾಣವನ್ನು ನೇರವಾಗಿ ನೋಡಿದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.</p><p>ಪ್ರಧಾನಿ ಅವರ ವಯನಾಡ್ ಭೇಟಿ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್ಗೆ ಭೇಟಿ ನೀಡುತ್ತಿರುವುದಕ್ಕೆ ಧನ್ಯವಾದಗಳು. ಇದೊಂದು ಉತ್ತಮ ನಿರ್ಧಾರ’ ಎಂದಿದ್ದಾರೆ.</p><p>‘ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ ನೀವು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತೀರಿ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.</p><p>ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದಿಳಿಯುವ ಮೋದಿ ಅವರು ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಯನಾಡ್ ಭೂಕುಸಿತ ದುರಂತದಲ್ಲಿ 266ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಯನಾಡು ಭೂಕುಸಿತದ ಪ್ರಮಾಣವನ್ನು ನೇರವಾಗಿ ನೋಡಿದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.</p><p>ಪ್ರಧಾನಿ ಅವರ ವಯನಾಡ್ ಭೇಟಿ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್ಗೆ ಭೇಟಿ ನೀಡುತ್ತಿರುವುದಕ್ಕೆ ಧನ್ಯವಾದಗಳು. ಇದೊಂದು ಉತ್ತಮ ನಿರ್ಧಾರ’ ಎಂದಿದ್ದಾರೆ.</p><p>‘ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ ನೀವು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತೀರಿ ಎಂಬ ವಿಶ್ವಾಸ ನನಗಿದೆ’ ಎಂದು ಹೇಳಿದರು.</p><p>ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದಿಳಿಯುವ ಮೋದಿ ಅವರು ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಪುನರ್ವಸತಿ ಕಾರ್ಯಗಳ ಬಗ್ಗೆ ರಕ್ಷಣಾ ಪಡೆಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಯನಾಡ್ ಭೂಕುಸಿತ ದುರಂತದಲ್ಲಿ 266ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>