<p><strong>ಹೈದರಾಬಾದ್</strong>: ಪಹಲ್ಗಾಮ್ ಉಗ್ರ ದಾಳಿಯ ನಂತರ ಕಾಶ್ಮೀರದಲ್ಲಿ ಜನರು ಸ್ವಯಂಪ್ರೇರಿತವಾಗಿ ಬೀದಿಗಿಳಿದು ಪ್ರತಿಭಟಿಸುತ್ತಿರುವುದನ್ನು ನೋಡಿದರೆ ಪಾಕಿಸ್ತಾನಕ್ಕೆ ಯಾವುದೇ ಬೆಂಬಲವಿಲ್ಲವೆಂಬುದನ್ನು ತೋರಿಸುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಶನಿವಾರ ಹೇಳಿದ್ದಾರೆ.</p>.<p>ಏಪ್ರಿಲ್ 22ರ ಭಯೋತ್ಪಾದಕ ದಾಳಿಯ ನಂತರ, ಪ್ರತಿ ಕಾಶ್ಮೀರಿ ಮನೆಯಲ್ಲೂ ಶೋಕಾಚರಣೆ ಇತ್ತು ಎಂದು ಒವೈಸಿ ಹೇಳಿದ್ದಾರೆ.</p>.<p>‘ವಾಸ್ತವವಾಗಿ, ಇದು ಸರ್ಕಾರಕ್ಕೆ, ಪ್ರಧಾನಿ ಮೋದಿಯವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಒಂದು ಐತಿಹಾಸಿಕ ಅವಕಾಶ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನೀವು ಖಂಡಿತವಾಗಿಯೂ ಪಾಕಿಸ್ತಾನವನ್ನು ಎದುರಿಸಬೇಕು. ಆದರೆ, ನೀವು ಕಾಶ್ಮೀರಿಗಳನ್ನು ದತ್ತು ತೆಗೆದುಕೊಳ್ಳಬೇಕು’ ಎಂದು ಒವೈಸಿ ಅವರು ‘ಪಿಟಿಐ ವಿಡಿಯೊ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಕಾಶ್ಮೀರಿಗಳನ್ನು ದತ್ತು ತೆಗೆದುಕೊಳ್ಳುವುದರ ಅರ್ಥವೇನೆಂದು ವಿವರಿಸಲು ಕೇಳಿದಾಗ, ‘ಅಲ್ಲಿ ಮಾನವ ಹಕ್ಕುಗಳ ಯಾವುದೇ ಉಲ್ಲಂಘನೆ ಇಲ್ಲ ಎಂಬುದನ್ನು ಸರ್ಕಾರ ಖಾತ್ರಿಪಡಿಸಿಕೊಳ್ಳಬೇಕು. ಕಾಶ್ಮೀರಿಗಳಿಗೆ ಅವರ ಹಕ್ಕುಗಳು ಸಿಗಬೇಕು. ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದೇಶದ ಇತರ ಭಾಗಗಳಲ್ಲಿ ದಾಳಿ ನಡೆಯಬಾರದು’ ಎಂದು ಹೇಳಿದರು.</p>.<p>‘ಇದೆಲ್ಲವೂ ಆಗಲೇಬೇಕು. ಈ ಅವಕಾಶವನ್ನು ನಾವು ಕಳೆದುಕೊಳ್ಳಬಾರದು. ಕಾಶ್ಮೀರಿಗಳನ್ನು ಅವರ ಹಣೆಬರಹಕ್ಕೆ ಬಿಡಬೇಡಿ. ಅವರನ್ನು ದತ್ತು ತೆಗೆದುಕೊಳ್ಳಿ’ ಎಂದು ಒವೈಸಿ ಹೇಳಿದರು.</p>.<p>‘ಪಾಕಿಸ್ತಾನವು ರಹಸ್ಯ ಕಾರ್ಯಸೂಚಿಯನ್ನು ಹೊಂದಿರುವ ದೇಶವೆನಿಸಿದೆ. ಅಲ್ಲಿನ ಐಎಸ್ಐ ಮತ್ತು ಸೇನೆಯ ಉದ್ದೇಶ ಭಾರತವನ್ನು ಅಸ್ಥಿರಗೊಳಿಸುವುದಾಗಿದೆ. ಹಾಗಾಗಿ, ನಾವು ಪಾಕಿಸ್ತಾನವನ್ನು ನಂಬಬಾರದು’ ಎಂದು ಅವರು ಹೇಳಿದರು.</p>.<div><blockquote>ಭಾರತದಲ್ಲಿ ಅಸ್ಥಿರತೆ ಮತ್ತು ಕೋಮು ವಿಭಜನೆಯನ್ನು ಹುಟ್ಟುಹಾಕುವುದು ಹಾಗೂ ನಮ್ಮ ದೇಶದ ಆರ್ಥಿಕ ಬೆಳವಣಿಗೆಯನ್ನು ತಡೆಯುವುದು ಪಾಕಿಸ್ತಾನದ ಅಲಿಖಿತ ಸಿದ್ಧಾಂತವಾಗಿದೆ.</blockquote><span class="attribution">–ಅಸಾದುದ್ದೀನ್ ಒವೈಸಿ, ಎಐಎಂಐಎಂ ನಾಯಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಪಹಲ್ಗಾಮ್ ಉಗ್ರ ದಾಳಿಯ ನಂತರ ಕಾಶ್ಮೀರದಲ್ಲಿ ಜನರು ಸ್ವಯಂಪ್ರೇರಿತವಾಗಿ ಬೀದಿಗಿಳಿದು ಪ್ರತಿಭಟಿಸುತ್ತಿರುವುದನ್ನು ನೋಡಿದರೆ ಪಾಕಿಸ್ತಾನಕ್ಕೆ ಯಾವುದೇ ಬೆಂಬಲವಿಲ್ಲವೆಂಬುದನ್ನು ತೋರಿಸುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಶನಿವಾರ ಹೇಳಿದ್ದಾರೆ.</p>.<p>ಏಪ್ರಿಲ್ 22ರ ಭಯೋತ್ಪಾದಕ ದಾಳಿಯ ನಂತರ, ಪ್ರತಿ ಕಾಶ್ಮೀರಿ ಮನೆಯಲ್ಲೂ ಶೋಕಾಚರಣೆ ಇತ್ತು ಎಂದು ಒವೈಸಿ ಹೇಳಿದ್ದಾರೆ.</p>.<p>‘ವಾಸ್ತವವಾಗಿ, ಇದು ಸರ್ಕಾರಕ್ಕೆ, ಪ್ರಧಾನಿ ಮೋದಿಯವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಒಂದು ಐತಿಹಾಸಿಕ ಅವಕಾಶ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನೀವು ಖಂಡಿತವಾಗಿಯೂ ಪಾಕಿಸ್ತಾನವನ್ನು ಎದುರಿಸಬೇಕು. ಆದರೆ, ನೀವು ಕಾಶ್ಮೀರಿಗಳನ್ನು ದತ್ತು ತೆಗೆದುಕೊಳ್ಳಬೇಕು’ ಎಂದು ಒವೈಸಿ ಅವರು ‘ಪಿಟಿಐ ವಿಡಿಯೊ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>ಕಾಶ್ಮೀರಿಗಳನ್ನು ದತ್ತು ತೆಗೆದುಕೊಳ್ಳುವುದರ ಅರ್ಥವೇನೆಂದು ವಿವರಿಸಲು ಕೇಳಿದಾಗ, ‘ಅಲ್ಲಿ ಮಾನವ ಹಕ್ಕುಗಳ ಯಾವುದೇ ಉಲ್ಲಂಘನೆ ಇಲ್ಲ ಎಂಬುದನ್ನು ಸರ್ಕಾರ ಖಾತ್ರಿಪಡಿಸಿಕೊಳ್ಳಬೇಕು. ಕಾಶ್ಮೀರಿಗಳಿಗೆ ಅವರ ಹಕ್ಕುಗಳು ಸಿಗಬೇಕು. ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದೇಶದ ಇತರ ಭಾಗಗಳಲ್ಲಿ ದಾಳಿ ನಡೆಯಬಾರದು’ ಎಂದು ಹೇಳಿದರು.</p>.<p>‘ಇದೆಲ್ಲವೂ ಆಗಲೇಬೇಕು. ಈ ಅವಕಾಶವನ್ನು ನಾವು ಕಳೆದುಕೊಳ್ಳಬಾರದು. ಕಾಶ್ಮೀರಿಗಳನ್ನು ಅವರ ಹಣೆಬರಹಕ್ಕೆ ಬಿಡಬೇಡಿ. ಅವರನ್ನು ದತ್ತು ತೆಗೆದುಕೊಳ್ಳಿ’ ಎಂದು ಒವೈಸಿ ಹೇಳಿದರು.</p>.<p>‘ಪಾಕಿಸ್ತಾನವು ರಹಸ್ಯ ಕಾರ್ಯಸೂಚಿಯನ್ನು ಹೊಂದಿರುವ ದೇಶವೆನಿಸಿದೆ. ಅಲ್ಲಿನ ಐಎಸ್ಐ ಮತ್ತು ಸೇನೆಯ ಉದ್ದೇಶ ಭಾರತವನ್ನು ಅಸ್ಥಿರಗೊಳಿಸುವುದಾಗಿದೆ. ಹಾಗಾಗಿ, ನಾವು ಪಾಕಿಸ್ತಾನವನ್ನು ನಂಬಬಾರದು’ ಎಂದು ಅವರು ಹೇಳಿದರು.</p>.<div><blockquote>ಭಾರತದಲ್ಲಿ ಅಸ್ಥಿರತೆ ಮತ್ತು ಕೋಮು ವಿಭಜನೆಯನ್ನು ಹುಟ್ಟುಹಾಕುವುದು ಹಾಗೂ ನಮ್ಮ ದೇಶದ ಆರ್ಥಿಕ ಬೆಳವಣಿಗೆಯನ್ನು ತಡೆಯುವುದು ಪಾಕಿಸ್ತಾನದ ಅಲಿಖಿತ ಸಿದ್ಧಾಂತವಾಗಿದೆ.</blockquote><span class="attribution">–ಅಸಾದುದ್ದೀನ್ ಒವೈಸಿ, ಎಐಎಂಐಎಂ ನಾಯಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>