<p><strong>ಗುವಾಹಟಿ</strong>: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಇಲ್ಲಿನ ಮಾರುಕಟ್ಟೆಯೊಂದರ ಸಮೀಪದಲ್ಲಿ ಉಂಟಾದ ಭಾರಿ ಶಬ್ದವು ಜನರಲ್ಲಿ ಭೀತಿ ಸೃಷ್ಟಿಸಿತು. ಇದರಿಂದಾಗಿ ಭದ್ರತಾ ವ್ಯವಸ್ಥೆಯ ಬಗ್ಗೆ ಗೊಂದಲಗಳು ಸೃಷ್ಟಿಯಾದವು.</p>.<p>ನುಸುಳುಕೋರರ ಗುಂಪಾಗಿರುವ ಉಲ್ಫಾ–ಐ, ಸಾಂಕೇತಿಕ ಪ್ರತಿಭಟನೆಯಾಗಿ ತಾನು ಕಚ್ಚಾ ಬಾಂಬ್ ಸ್ಫೋಟಿಸಿರುವುದಾಗಿ ಹೇಳಿದೆ. ಆದರೆ, ಸಂಘಟನೆ ಹೇಳಿದ್ದನ್ನು ಪೊಲೀಸರು ಒಪ್ಪಿಲ್ಲ. ಸ್ಫೋಟಕ್ಕೆ ಕಾರಣ ಏನು ಎಂಬುದರ ತನಿಖೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ನಗರದ ತರಕಾರಿ ಮಾರುಕಟ್ಟೆಯ ಸನಿಹದಲ್ಲಿ ಸಾರ್ವಜನಿಕರು ತ್ರಿವರ್ಣ ಧ್ವಜಾರೋಹಣಕ್ಕೆ ಸೇರಿದ್ದರು. ಬೆಳಿಗ್ಗೆ 7.45ರ ಸುಮಾರಿಗೆ ಉಂಟಾದ ಭಾರಿ ಸದ್ದು ಜನರಲ್ಲಿ ಆತಂಕ ಮೂಡಿಸಿತು. ಪೊಲೀಸರು ಸ್ಥಳಕ್ಕೆ ಧಾವಿಸಿದರಾದರೂ ಭಾರಿ ಸದ್ದಿಗೆ ಕಾರಣ ಏನು ಎಂಬುದು ಅವರಿಗೆ ಸ್ಪಷ್ಟವಾಗಲಿಲ್ಲ.</p>.<div dir="ltr"><span style="font-family:arial, sans-serif;font-size:large;">ಜನರು ಮುಂದಿನ ದಿನಗಳಲ್ಲಿ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಬಾರದು ಎಂಬ ಸಂದೇಶ ರವಾನಿಸಲು ಕಚ್ಚಾ ಬಾಂಬ್ ಸ್ಫೋಟಿಸಿರುವುದಾಗಿ ಉಲ್ಫಾ–ಐ ಹೇಳಿದೆ.</span> <div> </div> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಇಲ್ಲಿನ ಮಾರುಕಟ್ಟೆಯೊಂದರ ಸಮೀಪದಲ್ಲಿ ಉಂಟಾದ ಭಾರಿ ಶಬ್ದವು ಜನರಲ್ಲಿ ಭೀತಿ ಸೃಷ್ಟಿಸಿತು. ಇದರಿಂದಾಗಿ ಭದ್ರತಾ ವ್ಯವಸ್ಥೆಯ ಬಗ್ಗೆ ಗೊಂದಲಗಳು ಸೃಷ್ಟಿಯಾದವು.</p>.<p>ನುಸುಳುಕೋರರ ಗುಂಪಾಗಿರುವ ಉಲ್ಫಾ–ಐ, ಸಾಂಕೇತಿಕ ಪ್ರತಿಭಟನೆಯಾಗಿ ತಾನು ಕಚ್ಚಾ ಬಾಂಬ್ ಸ್ಫೋಟಿಸಿರುವುದಾಗಿ ಹೇಳಿದೆ. ಆದರೆ, ಸಂಘಟನೆ ಹೇಳಿದ್ದನ್ನು ಪೊಲೀಸರು ಒಪ್ಪಿಲ್ಲ. ಸ್ಫೋಟಕ್ಕೆ ಕಾರಣ ಏನು ಎಂಬುದರ ತನಿಖೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ನಗರದ ತರಕಾರಿ ಮಾರುಕಟ್ಟೆಯ ಸನಿಹದಲ್ಲಿ ಸಾರ್ವಜನಿಕರು ತ್ರಿವರ್ಣ ಧ್ವಜಾರೋಹಣಕ್ಕೆ ಸೇರಿದ್ದರು. ಬೆಳಿಗ್ಗೆ 7.45ರ ಸುಮಾರಿಗೆ ಉಂಟಾದ ಭಾರಿ ಸದ್ದು ಜನರಲ್ಲಿ ಆತಂಕ ಮೂಡಿಸಿತು. ಪೊಲೀಸರು ಸ್ಥಳಕ್ಕೆ ಧಾವಿಸಿದರಾದರೂ ಭಾರಿ ಸದ್ದಿಗೆ ಕಾರಣ ಏನು ಎಂಬುದು ಅವರಿಗೆ ಸ್ಪಷ್ಟವಾಗಲಿಲ್ಲ.</p>.<div dir="ltr"><span style="font-family:arial, sans-serif;font-size:large;">ಜನರು ಮುಂದಿನ ದಿನಗಳಲ್ಲಿ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಬಾರದು ಎಂಬ ಸಂದೇಶ ರವಾನಿಸಲು ಕಚ್ಚಾ ಬಾಂಬ್ ಸ್ಫೋಟಿಸಿರುವುದಾಗಿ ಉಲ್ಫಾ–ಐ ಹೇಳಿದೆ.</span> <div> </div> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>