<p class="title"><strong>ಅಹಮದಾಬಾದ್:</strong> ಗುಜರಾತ್ ಸರ್ಕಾರದಲ್ಲಿ ಪ್ರಮುಖ ಖಾತೆಯನ್ನು ಹೊಂದಿದ್ದ ಇಬ್ಬರು ಸಂಪುಟ ಸಚಿವರನ್ನು ಹಠಾತ್ ಪದಚ್ಯುತಗೊಳಿಸಲು ಕಾರಣವೇನೆಂದು ಸಾರ್ವಜನಿಕ ಹೇಳಿಕೆ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಭಾನುವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.</p>.<p class="title">ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶನಿವಾರ ಕಂದಾಯ ಸಚಿವ ರಾಜೇಂದ್ರ ತ್ರಿವೇದಿ ಹಾಗೂ ರಸ್ತೆ ಮತ್ತು ಕಟ್ಟಡ ಸಚಿವ ಪೂರ್ಣೇಶ್ ಮೋದಿ ಅವರನ್ನು ಸಚಿವಸ್ಥಾನದಿಂದ ಹಠಾತ್ ಕೆಳಗಿಳಿಸಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಗುಜರಾತ್ ಕಾಂಗ್ರೆಸ್ನ ಮುಖ್ಯ ವಕ್ತಾರ ಮನೀಷ್ ದೋಶಿ, ‘ತ್ರಿವೇದಿ ಮತ್ತು ಮೋದಿ ಇಬ್ಬರೂ ಸರ್ಕಾರದ ಹಿರಿಯ ಸಚಿವರು. ಹಾಗಿದ್ದೂ ಪ್ರಮುಖ ಖಾತೆಯಿಂದ ಅವರನ್ನು ಪದಚ್ಯುತಗೊಳಿಸುವ ಮುಖ್ಯಮಂತ್ರಿಗಳ ನಡೆಗೆ ಕಾರಣ ಏನೆಂದು ತಿಳಿದುಕೊಳ್ಳುವುದು ಗುಜರಾತ್ನ ಜನರ ಹಕ್ಕು’ ಎಂದು ತಿಳಿಸಿದ್ದಾರೆ.</p>.<p>‘ಪ್ರಮುಖ ಖಾತೆಗಳಿಂದ ಇಬ್ಬರು ಹಿರಿಯ ಸಚಿವರನ್ನು ತೆಗೆದುಹಾಕುವ ನಿರ್ಧಾರ ಬಿಜೆಪಿಯ ವೈಯಕ್ತಿಕ ವಿಷಯ ಅಲ್ಲ. ಇದು ಸಾರ್ವಜನಿಕರ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಇದಕ್ಕೆ ಕಾರಣ ಏನೆಂದು ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಇಂದ್ರನಿಲ್ ರಾಜ್ಗುರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಹಮದಾಬಾದ್:</strong> ಗುಜರಾತ್ ಸರ್ಕಾರದಲ್ಲಿ ಪ್ರಮುಖ ಖಾತೆಯನ್ನು ಹೊಂದಿದ್ದ ಇಬ್ಬರು ಸಂಪುಟ ಸಚಿವರನ್ನು ಹಠಾತ್ ಪದಚ್ಯುತಗೊಳಿಸಲು ಕಾರಣವೇನೆಂದು ಸಾರ್ವಜನಿಕ ಹೇಳಿಕೆ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಭಾನುವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.</p>.<p class="title">ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶನಿವಾರ ಕಂದಾಯ ಸಚಿವ ರಾಜೇಂದ್ರ ತ್ರಿವೇದಿ ಹಾಗೂ ರಸ್ತೆ ಮತ್ತು ಕಟ್ಟಡ ಸಚಿವ ಪೂರ್ಣೇಶ್ ಮೋದಿ ಅವರನ್ನು ಸಚಿವಸ್ಥಾನದಿಂದ ಹಠಾತ್ ಕೆಳಗಿಳಿಸಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಗುಜರಾತ್ ಕಾಂಗ್ರೆಸ್ನ ಮುಖ್ಯ ವಕ್ತಾರ ಮನೀಷ್ ದೋಶಿ, ‘ತ್ರಿವೇದಿ ಮತ್ತು ಮೋದಿ ಇಬ್ಬರೂ ಸರ್ಕಾರದ ಹಿರಿಯ ಸಚಿವರು. ಹಾಗಿದ್ದೂ ಪ್ರಮುಖ ಖಾತೆಯಿಂದ ಅವರನ್ನು ಪದಚ್ಯುತಗೊಳಿಸುವ ಮುಖ್ಯಮಂತ್ರಿಗಳ ನಡೆಗೆ ಕಾರಣ ಏನೆಂದು ತಿಳಿದುಕೊಳ್ಳುವುದು ಗುಜರಾತ್ನ ಜನರ ಹಕ್ಕು’ ಎಂದು ತಿಳಿಸಿದ್ದಾರೆ.</p>.<p>‘ಪ್ರಮುಖ ಖಾತೆಗಳಿಂದ ಇಬ್ಬರು ಹಿರಿಯ ಸಚಿವರನ್ನು ತೆಗೆದುಹಾಕುವ ನಿರ್ಧಾರ ಬಿಜೆಪಿಯ ವೈಯಕ್ತಿಕ ವಿಷಯ ಅಲ್ಲ. ಇದು ಸಾರ್ವಜನಿಕರ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಇದಕ್ಕೆ ಕಾರಣ ಏನೆಂದು ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಇಂದ್ರನಿಲ್ ರಾಜ್ಗುರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>