<p class="title"><strong>ಅಹಮದಾಬಾದ್ </strong>(ಪಿಟಿಐ): ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸಬೇಕು ಎಂಬ ಬೇಡಿಕೆಯೇ ಗುಜರಾತ್ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಮುಖ ವಿಷಯವಾಗುವ ಸೂಚನೆಗಳಿವೆ.</p>.<p class="title">ಅಧಿಕಾರಕ್ಕೆ ಬಂದರೆ ಒಪಿಎಸ್ ಅನ್ನು ಮರುಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಈಗಾಗಲೇ ಭರವಸೆ ನೀಡಿವೆ. ಈ ಮೂಲಕ ಸರ್ಕಾರಿ ನೌಕರರ ಮತಗಳನ್ನು ಸೆಳೆಯುವ ವಿಶ್ವಾಸವನ್ನು ಹೊಂದಿವೆ.</p>.<p class="title">ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಗುಜರಾತ್ನ ಬಿಜೆಪಿ ಸರ್ಕಾರ ಏಪ್ರಿಲ್ 1, 2005ರ ನಂತರ ಸೇವೆಗೆ ಸೇರುವ ನೌಕರರಿಗೆ ಅನ್ವಯಿಸುವಂತೆ ಎನ್ಪಿಎಸ್ ಜಾರಿಗೊಳಿಸಿದೆ.</p>.<p class="title">ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಜಾರಿಗೆ ಸರ್ಕಾರಿ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳು ನಡೆದಿವೆ. ಏಪ್ರಿಲ್ 2005ಕ್ಕೂ ಮೊದಲು ಸೇರಿರುವ ನೌಕರರಿಗೆ ಎನ್ಪಿಎಸ್ ಅನ್ವಯಿಸದು ಎಂದು ಸರ್ಕಾರ ಸ್ಪಷ್ಟನೆ ನೀಡಿತ್ತು. </p>.<p class="title">ಬಿಜೆಪಿಗೆ ಬಂಡಾಯ ಭೀತಿ:</p>.<p class="title">ಗುಜರಾತ್ನಲ್ಲಿ ಆಡಳಿತರೂಢ ಬಿಜೆಪಿಗೆ ಬಂಡಾಯದ ಭೀತಿ ಎದುರಾಗಿದ್ದು, ಪಕ್ಷದ ಐವರು ನಾಯಕರು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ. ಇವರಲ್ಲಿ ಒಬ್ಬ ಹಾಲಿ ಶಾಸಕರೂ ಸೇರಿದ್ದಾರೆ.</p>.<p>ಈ ಐವರಿಗೆ ಪಕ್ಷ ಟಿಕೆಟ್ ನಿರಾಕರಿಸಿತ್ತು. ಬೆಂಬಲಿಗರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದುಹೆಚ್ಚಿನನವರು ತಿಳಿಸಿದ್ದಾರೆ. ಮಾಜಿ ಶಾಸಕ, ಬುಡಕಟ್ಟು ಜನಾಂಗದ ಮುಖಂಡ ಹರ್ಷದ್ ವಾಸವ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.</p>.<p><strong>ಚುನಾವಣೆಗೆ ಸ್ಪರ್ಧಿಸುವುದಿಲ್ಲ; ಪ್ರಶಾಂತ್ ಭೂಷಣ್</strong></p>.<p>ಬೆಟ್ಟಿಯಾ (ಪಿಟಿಐ): ಬಿಹಾರ ಚುನಾವಣೆಯಲ್ಲಿ ‘ಉತ್ತಮ ಪರ್ಯಾಯ’ ರೂಪಿಸುವ ಸಂಕಲ್ಪ ತೊಟ್ಟಿರುವ ರಾಜಕೀಯ ಕಾರ್ಯತಂತ್ರರಾದ ಪ್ರಶಾಂತ್ ಭೂಷಣ್, ಸ್ವತಃ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಏಕೆ ಚುನಾವಣೆಗೆ ಸ್ಪರ್ಧಿಸಲಿ. ನನಗೆ ಅಂತಹ ಆಕಾಂಕ್ಷೆ ಇಲ್ಲ ಎಂದು ಅವರು ಈ ಕುರಿತ ಪುನರಾವರ್ತಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ಪ್ರಸ್ತುತ ಪ್ರಶಾಂತ್ ಕಿಶೋರ್ ಅವರು ರಾಜ್ಯದಲ್ಲಿ 3,500 ಕಿ.ಮೀ. ಅಂತರದ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಪ್ರತಿಕ್ರಿಯೆ ಆಧರಿಸಿ ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಹಮದಾಬಾದ್ </strong>(ಪಿಟಿಐ): ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸಬೇಕು ಎಂಬ ಬೇಡಿಕೆಯೇ ಗುಜರಾತ್ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಮುಖ ವಿಷಯವಾಗುವ ಸೂಚನೆಗಳಿವೆ.</p>.<p class="title">ಅಧಿಕಾರಕ್ಕೆ ಬಂದರೆ ಒಪಿಎಸ್ ಅನ್ನು ಮರುಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಈಗಾಗಲೇ ಭರವಸೆ ನೀಡಿವೆ. ಈ ಮೂಲಕ ಸರ್ಕಾರಿ ನೌಕರರ ಮತಗಳನ್ನು ಸೆಳೆಯುವ ವಿಶ್ವಾಸವನ್ನು ಹೊಂದಿವೆ.</p>.<p class="title">ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಗುಜರಾತ್ನ ಬಿಜೆಪಿ ಸರ್ಕಾರ ಏಪ್ರಿಲ್ 1, 2005ರ ನಂತರ ಸೇವೆಗೆ ಸೇರುವ ನೌಕರರಿಗೆ ಅನ್ವಯಿಸುವಂತೆ ಎನ್ಪಿಎಸ್ ಜಾರಿಗೊಳಿಸಿದೆ.</p>.<p class="title">ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಜಾರಿಗೆ ಸರ್ಕಾರಿ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳು ನಡೆದಿವೆ. ಏಪ್ರಿಲ್ 2005ಕ್ಕೂ ಮೊದಲು ಸೇರಿರುವ ನೌಕರರಿಗೆ ಎನ್ಪಿಎಸ್ ಅನ್ವಯಿಸದು ಎಂದು ಸರ್ಕಾರ ಸ್ಪಷ್ಟನೆ ನೀಡಿತ್ತು. </p>.<p class="title">ಬಿಜೆಪಿಗೆ ಬಂಡಾಯ ಭೀತಿ:</p>.<p class="title">ಗುಜರಾತ್ನಲ್ಲಿ ಆಡಳಿತರೂಢ ಬಿಜೆಪಿಗೆ ಬಂಡಾಯದ ಭೀತಿ ಎದುರಾಗಿದ್ದು, ಪಕ್ಷದ ಐವರು ನಾಯಕರು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ. ಇವರಲ್ಲಿ ಒಬ್ಬ ಹಾಲಿ ಶಾಸಕರೂ ಸೇರಿದ್ದಾರೆ.</p>.<p>ಈ ಐವರಿಗೆ ಪಕ್ಷ ಟಿಕೆಟ್ ನಿರಾಕರಿಸಿತ್ತು. ಬೆಂಬಲಿಗರ ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದುಹೆಚ್ಚಿನನವರು ತಿಳಿಸಿದ್ದಾರೆ. ಮಾಜಿ ಶಾಸಕ, ಬುಡಕಟ್ಟು ಜನಾಂಗದ ಮುಖಂಡ ಹರ್ಷದ್ ವಾಸವ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.</p>.<p><strong>ಚುನಾವಣೆಗೆ ಸ್ಪರ್ಧಿಸುವುದಿಲ್ಲ; ಪ್ರಶಾಂತ್ ಭೂಷಣ್</strong></p>.<p>ಬೆಟ್ಟಿಯಾ (ಪಿಟಿಐ): ಬಿಹಾರ ಚುನಾವಣೆಯಲ್ಲಿ ‘ಉತ್ತಮ ಪರ್ಯಾಯ’ ರೂಪಿಸುವ ಸಂಕಲ್ಪ ತೊಟ್ಟಿರುವ ರಾಜಕೀಯ ಕಾರ್ಯತಂತ್ರರಾದ ಪ್ರಶಾಂತ್ ಭೂಷಣ್, ಸ್ವತಃ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಗಳನ್ನು ತಳ್ಳಿಹಾಕಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಏಕೆ ಚುನಾವಣೆಗೆ ಸ್ಪರ್ಧಿಸಲಿ. ನನಗೆ ಅಂತಹ ಆಕಾಂಕ್ಷೆ ಇಲ್ಲ ಎಂದು ಅವರು ಈ ಕುರಿತ ಪುನರಾವರ್ತಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.</p>.<p>ಪ್ರಸ್ತುತ ಪ್ರಶಾಂತ್ ಕಿಶೋರ್ ಅವರು ರಾಜ್ಯದಲ್ಲಿ 3,500 ಕಿ.ಮೀ. ಅಂತರದ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಪ್ರತಿಕ್ರಿಯೆ ಆಧರಿಸಿ ಕಾರ್ಯತಂತ್ರ ರೂಪಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>