ಅಯೋಧ್ಯೆಯಲ್ಲಿ ರಾಮಮಂದಿರವನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಿರ್ಮಿಸಲಾಗುತ್ತಿದೆ. ಹೀಗಾಗಿ ವಾಸ್ತವಿಕ ಸ್ಥಿತಿಯನ್ನು ಆಧರಿಸಿ ಈ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ತನ್ನ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ ಎಂದು ಪ್ರತಿಪಾದಿಸಿದರು. ಸಮಾಜವಾದಿ ಪಕ್ಷ ಮತ್ತು ಆಮ್ ಅದ್ಮಿ ಪಕ್ಷವು, ವಾರದ ಹಿಂದಷ್ಟೇ ಟ್ರಸ್ಟ್ ವಿರುದ್ಧ ಆರೋಪ ಮಾಡಿದ್ದು, ಭೂಮಿಗೆ ಅತ್ಯಧಿಕ ದರವನ್ನು ನೀಡಲಾಗಿದೆ ಎಂದು ಆರೋಪಿಸಿದ್ದವು. ಅದರ ಹಿಂದೆಯೇ ಕಾಂಗ್ರೆಸ್ ಪಕ್ಷವೂ ಆರೋಪ ಮಾಡಿದೆ.