ನವದೆಹಲಿ: ನಿರ್ದಿಷ್ಟ ದಾಳಿಯ ಬಗ್ಗೆ ಪದೇ ಪದೇ ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಈ ದೇಶ ಮತ್ತು ಸೇನೆಯನ್ನು ಅಪಮಾನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.
ನಮೋ ಆ್ಯಪ್ನಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವನ್ನು ವಿರೋಧಿಸಬೇಕು ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನಿರ್ದಿಷ್ಟ ದಾಳಿಯನ್ನು ಪ್ರಶ್ನಿಸುತ್ತಿದೆ ಎಂದರು.