2022ರಲ್ಲಿ ನಿವೃತ್ತ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಕಳೆದ ವರ್ಷ ಡಿಸೆಂಬರ್ 28ರಂದು ನ್ಯಾಯಾಲಯ ತೆರವುಗೊಳಿಸಿತ್ತು.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಕತಾರ್ನ ನ್ಯಾಯಾಲಯದಿಂದ ಮರಣ ದಂಡನೆಗೆ ಒಳಪಟ್ಟಿದ್ದ ಎಂಟು ಮಂದಿ ನಿವೃತ್ತ ನೌಕರರು ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಈ ವೇಳೆ ರಾಷ್ಟ್ರದ ಸಂತೋಷ ಹಾಗೂ ಹರ್ಷದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾಗಿಯಾಗಿದೆ ಎಂದು ತಿಳಿಸಿದ್ದಾರೆ.