<p><strong>ನವದೆಹಲಿ:</strong> ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರನ್ನು ‘ಅವಮಾನಿಸಿದ’ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷವು, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನವನ್ನು ಆರಂಭಿಸಿದೆ.</p>.<p>‘ಈ ಅಭಿಯಾನದಲ್ಲಿ ಪಕ್ಷದ ನಾಯರು ಪ್ರತಿ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ, ಬಿಜೆಪಿ–ಆರ್ಎಸ್ಎಸ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಹೇಗೆ ಅವಮಾನಿಸುತ್ತಿವೆ ಎಂದು ಜನರಿಗೆ ತಿಳಿಸಲಿದ್ದಾರೆ’ ಎಂದು ಪಕ್ಷದ ನಾಯಕ ಪವನ್ ಖೇರಾ ತಿಳಿಸಿದರು.</p>.<p>‘ಜನವರಿ 3ರಂದು ಅಭಿಯಾನ ಆರಂಭಿಸಿದ್ದೇವೆ. ಜನವರಿ 26ರಂದು ಅಂಬೇಡ್ಕರ್ ಜನ್ಮಸ್ಥಳ ಮಧ್ಯಪ್ರದೇಶದ ಮಹೂನಲ್ಲಿ ಬೃಹತ್ ರ್ಯಾಲಿ ಆಯೋಜಿಸಿ ಅಭಿಯಾನವನ್ನು ಸಮಾಪ್ತಿಗೊಳಿಸುತ್ತೇವೆ’ ಎಂದರು.</p>.<p>‘ಅಂಬೇಡ್ಕರ್ ಅವರು ಬಿತ್ತಿರುವ ಮೌಲ್ಯಗಳ ರಕ್ಷಣೆಗಾಗಿ ಇದೇ ಜನವರಿ 26ರಿಂದ ಮುಂದಿನ ವರ್ಷ ಜನವರಿ 26ರವರೆಗೆ ‘ಸಂವಿಧಾನ ಬಚಾವೊ ರಾಷ್ಟ್ರೀಯ ಪಾದಯಾತ್ರೆ’ಯನ್ನು ಹಮ್ಮಿಕೊಂಡಿದ್ದೇವೆ. ಈ ಮೂಲಕ ಏಕತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ದೇಶದ ಪ್ರತಿ ಗ್ರಾಮ ಮತ್ತು ನಗರಗಳಿಗೂ ತಲುಪಿಸುತ್ತೇವೆ’ ಎಂದು ಹೇಳಿದರು.</p>.<div><blockquote>ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸುವುದು ಅಥವಾ ಅವರ ವಿರುದ್ಧ ಪಿತೂರಿ ನಡೆಸುವುದು ದೇಶದ ಶೇ90ರಷ್ಟು ಜನರ ಹಕ್ಕುಗಳನ್ನು ಉಲ್ಲಂಘಿಸಿದಂತೆ... ಅವರ ಮೇಲೆ ದಾಳಿ ನಡೆಸಿದಂತೆ. </blockquote><span class="attribution">ಪವನ್ ಖೇರಾ ಕಾಂಗ್ರೆಸ್ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರನ್ನು ‘ಅವಮಾನಿಸಿದ’ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷವು, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನವನ್ನು ಆರಂಭಿಸಿದೆ.</p>.<p>‘ಈ ಅಭಿಯಾನದಲ್ಲಿ ಪಕ್ಷದ ನಾಯರು ಪ್ರತಿ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ, ಬಿಜೆಪಿ–ಆರ್ಎಸ್ಎಸ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಹೇಗೆ ಅವಮಾನಿಸುತ್ತಿವೆ ಎಂದು ಜನರಿಗೆ ತಿಳಿಸಲಿದ್ದಾರೆ’ ಎಂದು ಪಕ್ಷದ ನಾಯಕ ಪವನ್ ಖೇರಾ ತಿಳಿಸಿದರು.</p>.<p>‘ಜನವರಿ 3ರಂದು ಅಭಿಯಾನ ಆರಂಭಿಸಿದ್ದೇವೆ. ಜನವರಿ 26ರಂದು ಅಂಬೇಡ್ಕರ್ ಜನ್ಮಸ್ಥಳ ಮಧ್ಯಪ್ರದೇಶದ ಮಹೂನಲ್ಲಿ ಬೃಹತ್ ರ್ಯಾಲಿ ಆಯೋಜಿಸಿ ಅಭಿಯಾನವನ್ನು ಸಮಾಪ್ತಿಗೊಳಿಸುತ್ತೇವೆ’ ಎಂದರು.</p>.<p>‘ಅಂಬೇಡ್ಕರ್ ಅವರು ಬಿತ್ತಿರುವ ಮೌಲ್ಯಗಳ ರಕ್ಷಣೆಗಾಗಿ ಇದೇ ಜನವರಿ 26ರಿಂದ ಮುಂದಿನ ವರ್ಷ ಜನವರಿ 26ರವರೆಗೆ ‘ಸಂವಿಧಾನ ಬಚಾವೊ ರಾಷ್ಟ್ರೀಯ ಪಾದಯಾತ್ರೆ’ಯನ್ನು ಹಮ್ಮಿಕೊಂಡಿದ್ದೇವೆ. ಈ ಮೂಲಕ ಏಕತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ದೇಶದ ಪ್ರತಿ ಗ್ರಾಮ ಮತ್ತು ನಗರಗಳಿಗೂ ತಲುಪಿಸುತ್ತೇವೆ’ ಎಂದು ಹೇಳಿದರು.</p>.<div><blockquote>ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸುವುದು ಅಥವಾ ಅವರ ವಿರುದ್ಧ ಪಿತೂರಿ ನಡೆಸುವುದು ದೇಶದ ಶೇ90ರಷ್ಟು ಜನರ ಹಕ್ಕುಗಳನ್ನು ಉಲ್ಲಂಘಿಸಿದಂತೆ... ಅವರ ಮೇಲೆ ದಾಳಿ ನಡೆಸಿದಂತೆ. </blockquote><span class="attribution">ಪವನ್ ಖೇರಾ ಕಾಂಗ್ರೆಸ್ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>