<p><strong>ಗುರುಗ್ರಾಮ/ಚಂಡೀಗಢ (ಪಿಟಿಐ)</strong>: ಹರಿಯಾಣದ ನೂಹ್ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಪೊಲಿಸರು ಬಂಧಿಸಿದ್ದಾರೆ.</p>.<p>ಹಿಂಸಾಚಾರಕ್ಕೆ ಸಂಬಂಧಿಸಿ ದಾಖಲಾಗಿದ್ದ ಎಫ್ಐಆರ್ನಲ್ಲಿ ಫಿರೋಜ್ಪುರ ಜಿರ್ಕಾದ ಶಾಸಕರಾಗಿರುವ ಮಮ್ಮನ್ ಅವರ ಹೆಸರು ಇದ್ದು, ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಧಾರ್ಮಿಕತೆಯ ಆಧಾರದಲ್ಲಿ ಎರಡು ಗುಂಪುಗಳ ನಡುವೆ ದ್ವೇಷ ಭಾವನೆ ಉತ್ತೇಜಿಸಿರುವ ಆರೋಪ ಮಮ್ಮನ್ ಅವರ ಮೇಲಿದೆ ಎಂದು ಗಲಭೆಯ ಕುರಿತು ತನಿಖೆ ನಡೆಸುತ್ತಿರುವ ಪೊಲೀಸ್ ಉಪ ವರಿಷ್ಠಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<p>‘ಮಮ್ಮನ್ ಅವರನ್ನು ಬಂಧಿಸಿರುವುದಾಗಿ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ’ ಎಂದು ಕಾಂಗ್ರೆಸ್ ಶಾಸಕ ಅಫ್ತಾಬ್ ಅಹಮ್ಮದ್ ತಿಳಿಸಿದ್ದಾರೆ.</p>.<p>‘ಮಮ್ಮನ್ ಅವರ ಬಂಧನದ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>'ಸಾಮಾಜಿಕ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಸುದ್ದಿಗಳನ್ನು ಹರಡುವುದನ್ನು ತಡೆಯುವ ಸಲುವಾಗಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ವಿ.ಎಸ್.ಎನ್. ಪ್ರಸಾದ್ ಹೇಳಿದ್ದಾರೆ.</p>.<p>ಜುಲೈ 31 ರಂದು ನೂಹ್ನಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ಮೆರವಣಿಗೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಆರು ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಗ್ರಾಮ/ಚಂಡೀಗಢ (ಪಿಟಿಐ)</strong>: ಹರಿಯಾಣದ ನೂಹ್ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಪೊಲಿಸರು ಬಂಧಿಸಿದ್ದಾರೆ.</p>.<p>ಹಿಂಸಾಚಾರಕ್ಕೆ ಸಂಬಂಧಿಸಿ ದಾಖಲಾಗಿದ್ದ ಎಫ್ಐಆರ್ನಲ್ಲಿ ಫಿರೋಜ್ಪುರ ಜಿರ್ಕಾದ ಶಾಸಕರಾಗಿರುವ ಮಮ್ಮನ್ ಅವರ ಹೆಸರು ಇದ್ದು, ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಧಾರ್ಮಿಕತೆಯ ಆಧಾರದಲ್ಲಿ ಎರಡು ಗುಂಪುಗಳ ನಡುವೆ ದ್ವೇಷ ಭಾವನೆ ಉತ್ತೇಜಿಸಿರುವ ಆರೋಪ ಮಮ್ಮನ್ ಅವರ ಮೇಲಿದೆ ಎಂದು ಗಲಭೆಯ ಕುರಿತು ತನಿಖೆ ನಡೆಸುತ್ತಿರುವ ಪೊಲೀಸ್ ಉಪ ವರಿಷ್ಠಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<p>‘ಮಮ್ಮನ್ ಅವರನ್ನು ಬಂಧಿಸಿರುವುದಾಗಿ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ’ ಎಂದು ಕಾಂಗ್ರೆಸ್ ಶಾಸಕ ಅಫ್ತಾಬ್ ಅಹಮ್ಮದ್ ತಿಳಿಸಿದ್ದಾರೆ.</p>.<p>‘ಮಮ್ಮನ್ ಅವರ ಬಂಧನದ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>'ಸಾಮಾಜಿಕ ಮಾಧ್ಯಮಗಳಲ್ಲಿ ದಾರಿತಪ್ಪಿಸುವ ಸುದ್ದಿಗಳನ್ನು ಹರಡುವುದನ್ನು ತಡೆಯುವ ಸಲುವಾಗಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ವಿ.ಎಸ್.ಎನ್. ಪ್ರಸಾದ್ ಹೇಳಿದ್ದಾರೆ.</p>.<p>ಜುಲೈ 31 ರಂದು ನೂಹ್ನಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ಮೆರವಣಿಗೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಆರು ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>