<p class="title"><strong>ಭುವನೇಶ್ವರ</strong>: ಒಡಿಶಾದಲ್ಲಿ ಈಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆ ಹಿನ್ನೆಲೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷನಿರಂಜನ್ ಪಟ್ನಾಯಕ್ ಅವರನ್ನು ಪದಚ್ಯುತಿಗೊಳಿಬೇಕು ಎಂದು ಒಡಿಶಾದ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದಾರೆ.</p>.<p class="title">ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಒಂಬತ್ತು ಶಾಸಕರಿದ್ದು, ಈ ಪೈಕಿ ನಾಲ್ವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p class="title">ಪಕ್ಷ ಉಳಿಯಬೇಕಾಗಿದೆ. ಇದಕ್ಕಾಗಿ ಪರ್ಯಾಯ ನಾಯಕತ್ವ ಅಗತ್ಯ ಎಂದು ಶಾಸಕರಾದ ತಾರಾಪ್ರಸಾದ್ ಬಹಿನಿಪಟಿ, ಎಸ್.ಎಸ್.ಸಲುಜಾ, ಅಧಿಜಾರ್ ಪಾಣಿಗ್ರಾಹಿ, ಮೊಹಮ್ಮದ್ ಮೊಕಿಂ ಒತ್ತಾಯಿಸಿದ್ದಾರೆ.</p>.<p class="title">ನಿರಂಜನ್ ಪಟ್ನಾಯಕ್ ಅವರು ಚುನಾವಣೆ ನಡೆಯುವ ಹೊತ್ತಿನಲ್ಲಿಯೇ ಅನಾರೋಗ್ಯ ಪೀಡಿತರಾಗುತ್ತಾರೆ. ಹೀಗಾಗಿ, ಸದೃಢ ನಾಯಕತ್ವದ ಅಗತ್ಯವಿದೆ ಎಂದು ಶಾಸಕ ಬಹಿನಿಪಾಟಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಭುವನೇಶ್ವರ</strong>: ಒಡಿಶಾದಲ್ಲಿ ಈಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆ ಹಿನ್ನೆಲೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷನಿರಂಜನ್ ಪಟ್ನಾಯಕ್ ಅವರನ್ನು ಪದಚ್ಯುತಿಗೊಳಿಬೇಕು ಎಂದು ಒಡಿಶಾದ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದಾರೆ.</p>.<p class="title">ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಒಂಬತ್ತು ಶಾಸಕರಿದ್ದು, ಈ ಪೈಕಿ ನಾಲ್ವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಸಾಧನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p class="title">ಪಕ್ಷ ಉಳಿಯಬೇಕಾಗಿದೆ. ಇದಕ್ಕಾಗಿ ಪರ್ಯಾಯ ನಾಯಕತ್ವ ಅಗತ್ಯ ಎಂದು ಶಾಸಕರಾದ ತಾರಾಪ್ರಸಾದ್ ಬಹಿನಿಪಟಿ, ಎಸ್.ಎಸ್.ಸಲುಜಾ, ಅಧಿಜಾರ್ ಪಾಣಿಗ್ರಾಹಿ, ಮೊಹಮ್ಮದ್ ಮೊಕಿಂ ಒತ್ತಾಯಿಸಿದ್ದಾರೆ.</p>.<p class="title">ನಿರಂಜನ್ ಪಟ್ನಾಯಕ್ ಅವರು ಚುನಾವಣೆ ನಡೆಯುವ ಹೊತ್ತಿನಲ್ಲಿಯೇ ಅನಾರೋಗ್ಯ ಪೀಡಿತರಾಗುತ್ತಾರೆ. ಹೀಗಾಗಿ, ಸದೃಢ ನಾಯಕತ್ವದ ಅಗತ್ಯವಿದೆ ಎಂದು ಶಾಸಕ ಬಹಿನಿಪಾಟಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>