<p><strong>ಮಲಪ್ಪುರಂ (ಕೇರಳ):</strong> ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಗನ್ಮ್ಯಾನ್ ಮತ್ತು ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ತರೂರ್ ಅವರ ಗನ್ಮ್ಯಾನ್ ರತೀಶ್ ಕೆ.ಪಿ. ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಶುಕ್ರವಾರ ಸಂಜೆ 7.30ರ ಸುಮಾರಿಗೆ ವಂಡೂರಿನ ತಿರುವಾಲಿ ಸಮೀಪದ ಚೆಲ್ಲಿತ್ತೋಡ್ನಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕ ಎ.ಪಿ. ಅನಿಲ್ ಕುಮಾರ್ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ತರೂರ್ ಅವರು ತೆರಳುತ್ತಿದ್ದಾಗ ಗಲಾಟೆ ನಡೆದಿದೆ.</p><p>‘ಚೆಲ್ಲಿತ್ತೋಡ್ ಸೇತುವೆ ಬಳಿ ರಸ್ತೆ ಕಿರಿದಾಗಿದ್ದು, ವೇಗವಾಗಿ ಚಲಿಸುವಂತೆ ಮುಂದಿದ್ದ ವಾಹನಕ್ಕೆ ಹೇಳಿದ್ದೆ. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಐದು ಜನರ ಗುಂಪು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ರತೀಶ್ ದೂರಿನಲ್ಲಿ ತಿಳಿಸಿದ್ದಾರೆ.</p><p>ಶುಕ್ರವಾರ ತಡರಾತ್ರಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲಪ್ಪುರಂ (ಕೇರಳ):</strong> ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಗನ್ಮ್ಯಾನ್ ಮತ್ತು ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ತರೂರ್ ಅವರ ಗನ್ಮ್ಯಾನ್ ರತೀಶ್ ಕೆ.ಪಿ. ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಶುಕ್ರವಾರ ಸಂಜೆ 7.30ರ ಸುಮಾರಿಗೆ ವಂಡೂರಿನ ತಿರುವಾಲಿ ಸಮೀಪದ ಚೆಲ್ಲಿತ್ತೋಡ್ನಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ನಾಯಕ ಎ.ಪಿ. ಅನಿಲ್ ಕುಮಾರ್ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ತರೂರ್ ಅವರು ತೆರಳುತ್ತಿದ್ದಾಗ ಗಲಾಟೆ ನಡೆದಿದೆ.</p><p>‘ಚೆಲ್ಲಿತ್ತೋಡ್ ಸೇತುವೆ ಬಳಿ ರಸ್ತೆ ಕಿರಿದಾಗಿದ್ದು, ವೇಗವಾಗಿ ಚಲಿಸುವಂತೆ ಮುಂದಿದ್ದ ವಾಹನಕ್ಕೆ ಹೇಳಿದ್ದೆ. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಐದು ಜನರ ಗುಂಪು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ರತೀಶ್ ದೂರಿನಲ್ಲಿ ತಿಳಿಸಿದ್ದಾರೆ.</p><p>ಶುಕ್ರವಾರ ತಡರಾತ್ರಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>