<p><strong>ಮಲಪ್ಪುರ</strong>: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಭದ್ರತಾ ಸಿಬ್ಬಂದಿ ಹಾಗೂ ಕಾರು ಚಾಲಕನ ಮೇಲೆ ಐದು ಮಂದಿಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಕೇರಳದ ವಂಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. </p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉಳಿದ ನಾಲ್ವರ ಗುರುತು ಪತ್ತೆಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು. </p>.<p>ಕಾಂಗ್ರೆಸ್ ನಾಯಕ ಎ.ಪಿ ಅನಿಲ್ಕುಮಾರ್ ಪರವಾಗಿ ಪ್ರಚಾರ ಮಾಡಲು ತರೂರ್ ಅವರು ಹೊರಟಿದ್ದ ವೇಳೆ ವಂಡೂರಿನ ಚೆಲ್ಲಿತೋಡ್ನಲ್ಲಿ ಘಟನೆ ನಡೆದಿದೆ. ತರೂರ್ ಅವರ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದರು. </p>.<p>ಎರಡು ವಾಹನಗಳಲ್ಲಿ ಬಂದ ಆರೋಪಿಗಳು ತರೂರ್ ಅವರ ವಾಹನವನ್ನು ಅಡ್ಡಗಟ್ಟಿದರು. ಆರೋಪಿಗಳನ್ನು ಸ್ಥಳದಿಂದ ದೂರ ಕಳುಹಿಸಲು ಮುಂದಾದ ಭದ್ರತಾ ಸಿಬ್ಬಂದಿ ಹಾಗೂ ಚಾಲಕನ ಮೇಲೆ ಹಲ್ಲೆ ಮಾಡಿದರು. </p>.<p>ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ತರೂರ್ ‘ಘಟನೆಯಲ್ಲಿ ನನಗೆ ಯಾವುದೇ ತೊಂದರೆಯಾಗಿಲ್ಲ. ನನ್ನ ಕ್ಷೇಮವನ್ನು ವಿಚಾರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ನಮ್ಮ ಸಿಬ್ಬಂದಿ ಮೇಲಿನ ದಾಳಿ ಕುರಿತು ಕಳವಳಗೊಂಡಿದ್ದೇನೆ. ಘಟನೆಯಿಂದ ನಮ್ಮ ಯಾವುದೇ ಕಾರ್ಯಕ್ರಮಗಳಿಗೂ ತೊಂದರೆಯಾಗಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲಪ್ಪುರ</strong>: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಭದ್ರತಾ ಸಿಬ್ಬಂದಿ ಹಾಗೂ ಕಾರು ಚಾಲಕನ ಮೇಲೆ ಐದು ಮಂದಿಯ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಕೇರಳದ ವಂಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. </p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಉಳಿದ ನಾಲ್ವರ ಗುರುತು ಪತ್ತೆಯಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು. </p>.<p>ಕಾಂಗ್ರೆಸ್ ನಾಯಕ ಎ.ಪಿ ಅನಿಲ್ಕುಮಾರ್ ಪರವಾಗಿ ಪ್ರಚಾರ ಮಾಡಲು ತರೂರ್ ಅವರು ಹೊರಟಿದ್ದ ವೇಳೆ ವಂಡೂರಿನ ಚೆಲ್ಲಿತೋಡ್ನಲ್ಲಿ ಘಟನೆ ನಡೆದಿದೆ. ತರೂರ್ ಅವರ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದರು. </p>.<p>ಎರಡು ವಾಹನಗಳಲ್ಲಿ ಬಂದ ಆರೋಪಿಗಳು ತರೂರ್ ಅವರ ವಾಹನವನ್ನು ಅಡ್ಡಗಟ್ಟಿದರು. ಆರೋಪಿಗಳನ್ನು ಸ್ಥಳದಿಂದ ದೂರ ಕಳುಹಿಸಲು ಮುಂದಾದ ಭದ್ರತಾ ಸಿಬ್ಬಂದಿ ಹಾಗೂ ಚಾಲಕನ ಮೇಲೆ ಹಲ್ಲೆ ಮಾಡಿದರು. </p>.<p>ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ತರೂರ್ ‘ಘಟನೆಯಲ್ಲಿ ನನಗೆ ಯಾವುದೇ ತೊಂದರೆಯಾಗಿಲ್ಲ. ನನ್ನ ಕ್ಷೇಮವನ್ನು ವಿಚಾರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ನಮ್ಮ ಸಿಬ್ಬಂದಿ ಮೇಲಿನ ದಾಳಿ ಕುರಿತು ಕಳವಳಗೊಂಡಿದ್ದೇನೆ. ಘಟನೆಯಿಂದ ನಮ್ಮ ಯಾವುದೇ ಕಾರ್ಯಕ್ರಮಗಳಿಗೂ ತೊಂದರೆಯಾಗಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>