‘ಕಾಂಗ್ರೆಸ್ ಪಕ್ಷವು ಉಧಂಪುರ, ಜಮ್ಮು ಮತ್ತು ಲಡಾಖ್ ಕ್ಷೇತ್ರಗಳಲ್ಲಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಅನಂತನಾಗ್, ಶ್ರೀನಗರ ಮತ್ತು ಬಾರಾಮಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ’ ಎಂದು ಎನ್ಸಿ ಮುಖಂಡ ಒಮರ್ ಅಬ್ದುಲ್ಲಾ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್ ಸೀಟು ಹಂಚಿಕೆ ಸಮಿತಿ ಸದಸ್ಯ ಸಲ್ಮಾನ್ ಖುರ್ಷಿದ್ ಹಾಜರಿದ್ದರು.