ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಯಾ ಪ್ರಕರಣ: ಮರುತನಿಖೆಗೆ ಒಲವು

Last Updated 3 ಡಿಸೆಂಬರ್ 2019, 16:45 IST
ಅಕ್ಷರ ಗಾತ್ರ
ಮುಂಬೈ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಿಯಾಗಿದ್ದ ಸೊಹ್ರಾಬುದ್ದೀನ್‌ ಶೇಕ್ ಎನ್‌ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಅಸಹಜವಾಗಿ ಮೃತಪಟ್ಟಿದ್ದ ನ್ಯಾಯಾಧೀಶ ಬಿ.ಎಚ್‌.ಲೋಯಾ ಸಾವಿನ ಪ್ರಕರಣದ ಮರುತನಿಖೆ ನಡೆಸುವ ಬಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಒಲವು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಈ ಪ್ರಕರಣದಲ್ಲಿ ಆಳವಾದ ತನಿಖೆ ನಡೆಯಬೇಕಿದೆ ಎಂದು ಮಹಾರಾಷ್ಟ್ರದ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಅಂತಹದ್ದೊಂದು ಬೇಡಿಕೆ ಬಂದರೆ, ವಿಶೇಷ ತನಿಖಾ ತಂಡವನ್ನು ರಚಿಸಿ ಮರುತನಿಖೆಗೆ ಆದೇಶಿಸಬಹುದು’ ಎಂದು ಪವಾರ್ ಹೇಳಿದ್ದಾರೆ.
‘ಮಹಾರಾಷ್ಟ್ರದಲ್ಲಿ ಈಗ ಬಿಜೆಪಿಯೇತರ ಮಹಾ ವಿಕಾಸ ಆಘಾಡಿ ಸರ್ಕಾರವಿದೆ. ಲೋಯಾ ಸಾವಿನ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ಏಕೆ ರಚಿಸಬಾರದು’ ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT