<p class="title"><strong>ನವದೆಹಲಿ</strong>: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯು ಮುಕ್ತವಾಗಿದ್ದು, ಇದರಲ್ಲಿ ಗೋಪ್ಯವಾಗಿ ಇಡುವಂತಹದು ಏನೂ ಇಲ್ಲ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ, ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ಹೇಳಿದರು.</p>.<p class="title">ರಾಜ್ಯ ಘಟಕಗಳಿಗೆ ಅಧ್ಯಕ್ಷರ ನೇಮಕ ಮತ್ತು ಎಐಸಿಸಿಗೆ ಆಹ್ವಾನಿತರನ್ನು ನೇಮಿಸುವುದನ್ನು ಅಧ್ಯಕ್ಷರ ವಿವೇಚನೆಗೆ ಬಿಡುವ ಕುರಿತು ಪ್ರದೇಶ ಕಾಂಗ್ರೆಸ್ ಸಮಿತಿಗಳು ನಿರ್ಣಯ ಕೈಗೊಳ್ಳಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಅಥವಾ ರಾಜ್ಯಗಳಿಂದ ಎಐಸಿಸಿಗೆ 10 ಮಂದಿ ಆಹ್ವಾನಿತರನ್ನು ಆಯ್ಕೆ ಮಾಡಲು ಬಯಸುವವರು ಮತದಾರರ ಕುರಿತ ಮಾಹಿತಿಗೆ ಪ್ರಾಧಿಕಾರ ಪ್ರಕಟಿಸಿರುವ ಪಟ್ಟಿಯನ್ನು ಗಮನಿಸಬಹುದಾಗಿದೆ’ ಎಂದು ತಿಳಿಸಿದರು.</p>.<p>9000ಕ್ಕೂ ಅಧಿಕ ಮತದಾರರಿಗೆ ಕ್ಯೂಆರ್ ಕೋಡ್ ಒಳಗೊಂಡ ಗುರುತಿನ ಚೀಟಿಯನ್ನು ಈಗಾಗಲೇ ನೀಡಲಾಗಿದೆ. ಎಲ್ಲ ಮತದಾರರ ಪಟ್ಟಿಯನ್ನು ಎಐಸಿಸಿ ಮುಖ್ಯ ಕಚೇರಿಯಲ್ಲಿಯೂ ಸೆ.20ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.</p>.<p>‘ಚುನಾವಣೆ ಸಿದ್ಧತೆ ಕುರಿತು ರಾಜ್ಯಗಳಲ್ಲಿನ ಪಕ್ಷದ ಚುನಾವಣಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಪರಿಸ್ಥಿತಿ ಅವಲೋಕಿಸಲಾಗಿದೆ’ ಎಂದರು.</p>.<p>ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯ 23 ಸದಸ್ಯರ ಪೈಕಿ 12 ಜನರು ಚುನಾಯಿತರಾದರೆ, 11 ಮಂದಿ ನಾಮನಿರ್ದೇಶನಗೊಳ್ಳುತ್ತಾರೆ. 12ಕ್ಕೂ ಹೆಚ್ಚು ಮಂದಿ ಸ್ಪರ್ಧೆಯಲ್ಲಿದ್ದರೆ ಚುನಾವಣೆ ನಡೆಯಬೇಕಾಗುತ್ತದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತಂತೆ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಬೀಳಲಿದೆ. ಆ ವೇಳೆಗೆ ಎಲ್ಲ ಪ್ರದೇಶ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಆಯ್ಕೆ ಪೂರ್ಣಗೊಳ್ಳಲಿದೆ. ಅಗತ್ಯಬಿದ್ದರೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯು ಮುಕ್ತವಾಗಿದ್ದು, ಇದರಲ್ಲಿ ಗೋಪ್ಯವಾಗಿ ಇಡುವಂತಹದು ಏನೂ ಇಲ್ಲ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ, ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ಹೇಳಿದರು.</p>.<p class="title">ರಾಜ್ಯ ಘಟಕಗಳಿಗೆ ಅಧ್ಯಕ್ಷರ ನೇಮಕ ಮತ್ತು ಎಐಸಿಸಿಗೆ ಆಹ್ವಾನಿತರನ್ನು ನೇಮಿಸುವುದನ್ನು ಅಧ್ಯಕ್ಷರ ವಿವೇಚನೆಗೆ ಬಿಡುವ ಕುರಿತು ಪ್ರದೇಶ ಕಾಂಗ್ರೆಸ್ ಸಮಿತಿಗಳು ನಿರ್ಣಯ ಕೈಗೊಳ್ಳಲಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಅಥವಾ ರಾಜ್ಯಗಳಿಂದ ಎಐಸಿಸಿಗೆ 10 ಮಂದಿ ಆಹ್ವಾನಿತರನ್ನು ಆಯ್ಕೆ ಮಾಡಲು ಬಯಸುವವರು ಮತದಾರರ ಕುರಿತ ಮಾಹಿತಿಗೆ ಪ್ರಾಧಿಕಾರ ಪ್ರಕಟಿಸಿರುವ ಪಟ್ಟಿಯನ್ನು ಗಮನಿಸಬಹುದಾಗಿದೆ’ ಎಂದು ತಿಳಿಸಿದರು.</p>.<p>9000ಕ್ಕೂ ಅಧಿಕ ಮತದಾರರಿಗೆ ಕ್ಯೂಆರ್ ಕೋಡ್ ಒಳಗೊಂಡ ಗುರುತಿನ ಚೀಟಿಯನ್ನು ಈಗಾಗಲೇ ನೀಡಲಾಗಿದೆ. ಎಲ್ಲ ಮತದಾರರ ಪಟ್ಟಿಯನ್ನು ಎಐಸಿಸಿ ಮುಖ್ಯ ಕಚೇರಿಯಲ್ಲಿಯೂ ಸೆ.20ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.</p>.<p>‘ಚುನಾವಣೆ ಸಿದ್ಧತೆ ಕುರಿತು ರಾಜ್ಯಗಳಲ್ಲಿನ ಪಕ್ಷದ ಚುನಾವಣಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಪರಿಸ್ಥಿತಿ ಅವಲೋಕಿಸಲಾಗಿದೆ’ ಎಂದರು.</p>.<p>ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯ 23 ಸದಸ್ಯರ ಪೈಕಿ 12 ಜನರು ಚುನಾಯಿತರಾದರೆ, 11 ಮಂದಿ ನಾಮನಿರ್ದೇಶನಗೊಳ್ಳುತ್ತಾರೆ. 12ಕ್ಕೂ ಹೆಚ್ಚು ಮಂದಿ ಸ್ಪರ್ಧೆಯಲ್ಲಿದ್ದರೆ ಚುನಾವಣೆ ನಡೆಯಬೇಕಾಗುತ್ತದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತಂತೆ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಬೀಳಲಿದೆ. ಆ ವೇಳೆಗೆ ಎಲ್ಲ ಪ್ರದೇಶ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಆಯ್ಕೆ ಪೂರ್ಣಗೊಳ್ಳಲಿದೆ. ಅಗತ್ಯಬಿದ್ದರೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>