<p class="bodytext"><strong>ನವದೆಹಲಿ</strong>: ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆಯನ್ನು ಬಿಜೆಪಿ ಮರೆಮಾಚಿದೆ ಎಂದು ಶನಿವಾರ ಆರೋಪಿಸಿರುವ ಕಾಂಗ್ರೆಸ್, ಈ ರಾಜ್ಯಗಳ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಹಾಗೂ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದೂ ಆಗ್ರಹಿಸಿದೆ.</p>.<p class="bodytext">‘ಈ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ’ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಆನ್ಲೈನ್ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.</p>.<p class="bodytext">‘ಮಧ್ಯಪ್ರದೇಶದಲ್ಲಿ ಮೇ ತಿಂಗಳಲ್ಲಿ 1.7 ಲಕ್ಷ ಸಾವು ಸಂಭವಿಸಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಸರ್ಕಾರದ ಅಂಕಿ–ಅಂಶಗಳಲ್ಲಿ ಕಡಿಮೆ ಸಾವಿನ ಸಂಖ್ಯೆ ವರದಿಯಾಗಿದೆ. ಎಂದಿಗೂ ನೋಡದ, ಕೇಳದ ಸತ್ಯ ನಮ್ಮ ಮುಂದಿದೆ. ಮೇ ತಿಂಗಳಲ್ಲಿ ವರದಿಯಾದ ಸಾವಿನ ಸಂಖ್ಯೆಯು 6 ತಿಂಗಳಲ್ಲಿ ವರದಿಯಾದ ಸಾವುಗಳಿಗೆ ಸಮಾನವಾಗಿದೆ. ಇದಕ್ಕೆ ಯಾರು ಜವಾಬ್ದಾರರು ಎಂದು ಪ್ರಧಾನಿ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಅವರು ಹೇಳಬೇಕು’ ಎಂದು ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಒತ್ತಾಯಿಸಿದರು.</p>.<p class="bodytext">‘ಗುಜರಾತ್ನಲ್ಲಿ ಏಪ್ರಿಲ್ 10ರಿಂದ ಮೇ 9ರ ಅವಧಿಯಲ್ಲಿ ಸಾವಿಗೀಡಾದವರ ಸಂಖ್ಯೆ 3,578 ಎಂದು ಸರ್ಕಾರಿ ಅಂಕಿ–ಅಂಶಗಳು ತಿಳಿಸಿವೆ. ಆದರೆ, ಇದೇ ಅವಧಿಯಲ್ಲಿ ಅಹಮದಾಬಾದ್ನ ಸರ್ಕಾರಿ ಆಸ್ಪತ್ರೆಯೊಂದರಲ್ಲೇ 3,416 ಮಂದಿ ಸಾವಿಗೀಡಾಗಿದ್ದಾರೆ. ಮಾರ್ಚ್ 1ರಿಂದ ಮೇ 10ರೊಳಗೆ ಗುಜರಾತ್ನ 33 ಜಿಲ್ಲೆಗಳ 8 ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 1.23ಲಕ್ಷ ಮರಣ ಪ್ರಮಾಣಪತ್ರಗಳನ್ನು ನೀಡಲಾಗಿದೆ.ಉತ್ತರ ಪ್ರದೇಶದಲ್ಲಿ ಜನವರಿಯಿಂದ ಮೇ ತಿಂಗಳ ಅವಧಿಯಲ್ಲಿ ಸಾವಿನ ಸಂಖ್ಯೆ 1.90 ಲಕ್ಷ ಆಗಿದೆ’ ಎಂದೂ ಪವನ್ ಖೇರಾ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಕೋವಿಡ್ನಿಂದ ಸಾವಿಗೀಡಾದವರ ಸಂಖ್ಯೆಯನ್ನು ಬಿಜೆಪಿ ಮರೆಮಾಚಿದೆ ಎಂದು ಶನಿವಾರ ಆರೋಪಿಸಿರುವ ಕಾಂಗ್ರೆಸ್, ಈ ರಾಜ್ಯಗಳ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಹಾಗೂ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದೂ ಆಗ್ರಹಿಸಿದೆ.</p>.<p class="bodytext">‘ಈ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ’ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಆನ್ಲೈನ್ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.</p>.<p class="bodytext">‘ಮಧ್ಯಪ್ರದೇಶದಲ್ಲಿ ಮೇ ತಿಂಗಳಲ್ಲಿ 1.7 ಲಕ್ಷ ಸಾವು ಸಂಭವಿಸಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಸರ್ಕಾರದ ಅಂಕಿ–ಅಂಶಗಳಲ್ಲಿ ಕಡಿಮೆ ಸಾವಿನ ಸಂಖ್ಯೆ ವರದಿಯಾಗಿದೆ. ಎಂದಿಗೂ ನೋಡದ, ಕೇಳದ ಸತ್ಯ ನಮ್ಮ ಮುಂದಿದೆ. ಮೇ ತಿಂಗಳಲ್ಲಿ ವರದಿಯಾದ ಸಾವಿನ ಸಂಖ್ಯೆಯು 6 ತಿಂಗಳಲ್ಲಿ ವರದಿಯಾದ ಸಾವುಗಳಿಗೆ ಸಮಾನವಾಗಿದೆ. ಇದಕ್ಕೆ ಯಾರು ಜವಾಬ್ದಾರರು ಎಂದು ಪ್ರಧಾನಿ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಅವರು ಹೇಳಬೇಕು’ ಎಂದು ಕಾಂಗ್ರೆಸ್ನ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಒತ್ತಾಯಿಸಿದರು.</p>.<p class="bodytext">‘ಗುಜರಾತ್ನಲ್ಲಿ ಏಪ್ರಿಲ್ 10ರಿಂದ ಮೇ 9ರ ಅವಧಿಯಲ್ಲಿ ಸಾವಿಗೀಡಾದವರ ಸಂಖ್ಯೆ 3,578 ಎಂದು ಸರ್ಕಾರಿ ಅಂಕಿ–ಅಂಶಗಳು ತಿಳಿಸಿವೆ. ಆದರೆ, ಇದೇ ಅವಧಿಯಲ್ಲಿ ಅಹಮದಾಬಾದ್ನ ಸರ್ಕಾರಿ ಆಸ್ಪತ್ರೆಯೊಂದರಲ್ಲೇ 3,416 ಮಂದಿ ಸಾವಿಗೀಡಾಗಿದ್ದಾರೆ. ಮಾರ್ಚ್ 1ರಿಂದ ಮೇ 10ರೊಳಗೆ ಗುಜರಾತ್ನ 33 ಜಿಲ್ಲೆಗಳ 8 ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 1.23ಲಕ್ಷ ಮರಣ ಪ್ರಮಾಣಪತ್ರಗಳನ್ನು ನೀಡಲಾಗಿದೆ.ಉತ್ತರ ಪ್ರದೇಶದಲ್ಲಿ ಜನವರಿಯಿಂದ ಮೇ ತಿಂಗಳ ಅವಧಿಯಲ್ಲಿ ಸಾವಿನ ಸಂಖ್ಯೆ 1.90 ಲಕ್ಷ ಆಗಿದೆ’ ಎಂದೂ ಪವನ್ ಖೇರಾ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>