<p><strong>ನವದೆಹಲಿ:</strong> ಸೋಮವಾರ ಅಂತರರಾಷ್ಟ್ರೀಯ ಶೂಟರ್ ಒಬ್ಬರುಮಾಡಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ಈ ಮೂಲಕ ಸತ್ಯ ಹೊರಬರಲು ತನಿಖೆ ನಡೆಸಬೇಕೆಂದೂ ಪಕ್ಷ ಒತ್ತಾಯಿಸಿದೆ.</p>.<p>ಸ್ಮೃತಿ ಇರಾನಿ ವಿರುದ್ಧದ ಆರೋಪಗಳು ಅತ್ಯಂತ ಗಂಭೀರವಾದುದ್ದಾಗಿವೆ. ಹಾಗಾಗಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಾದರೆ ಪ್ರಧಾನಮಂತ್ರಿ ನರೇಂದ್ರಮೋದಿ, ಪ್ರಕರಣ ಕುರಿತಂತೆ ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಬೇಕು ಎಂದು ಕಾಂಗ್ರೆಸ್ನ ಪ್ರಧಾನ ವಕ್ತಾರ ರಂದೀಪ್ ಸುರ್ಜೇವಾಲಾ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಕೇಂದ್ರ ಮಹಿಳಾ ಆಯೋಗದ ಸದಸ್ಯೆಯಾಗಿ ನೇಮಕ ಮಾಡಲು ಕೇಂದ್ರ ಜವಳಿ ಖಾತೆ ಸಚಿವರ ಜೊತೆ ಮತ್ತಿಬ್ಬರು ನನ್ನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಂತರರಾಷ್ಟ್ರೀಯ ಶೂಟರ್ ಖ್ಯಾತಿಯ ವರ್ತಿಕಾ ಸಿಂಗ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.</p>.<p>ಉತ್ತರ ಪ್ರದೇಶದ ಸುಲ್ತಾನಪುರದ ಜನಪ್ರತಿನಿಧಿಗಳ ನ್ಯಾಯಾಲಯವು ಜನವರಿ 2 ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ, ಬಳಿಕ, ಪ್ರಕರಣವು ತನ್ನ ವ್ಯಾಪ್ತಿಗೆ ಒಳಪಡುತ್ತದೆಯೇ ಎಂದು ಕೋರ್ಟ್ ನಿರ್ಧರಿಸುತ್ತದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.</p>.<p>ಅವರನ್ನು ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದ್ದು, ಈ ಬಗ್ಗೆರಾಷ್ಟ್ರೀಯ ಮಹಿಳಾ ಆಯೋಗದ ಉಲ್ಲೇಖವಾಗಿದೆ ಎಂದು ಇರಾನಿಗೆ ಹತ್ತಿರದ ಜನರು ಆಕೆಗೆ ನಕಲಿ ಪತ್ರವೊಂದನ್ನು ನೀಡಿರುವುದಾಗಿ ಶೂಟರ್ ಆರೋಪಿಸಿದ್ದಾರೆ.</p>.<p>ಸ್ಕೃತಿ ಇರಾನಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಒಂದೊಮ್ಮೆ ಯುಪಿಎ ಸರ್ಕಾರವಿದ್ದಾಗ ನಮ್ಮ ಸಚಿವರ ಮೇಲೆ ಇಂತಹ ಆರೋಪ ಕೇಳಿಬಂದಿದ್ದರೆ ಇರಾನಿ, ಕಾಂಗ್ರೆಸ್ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದರು ಎಂದು ಸುರ್ಜೇವಾಲಾ ಹೇಳಿದ್ದಾರೆ.</p>.<p>"ಸ್ಮೃತಿ ಇರಾನಿ ರಾಜೀನಾಮೆ ಕೊಟ್ಟು ಸ್ವತಂತ್ರ ತನಿಖೆ ಎದುರಿಸಬೇಕು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಕೆಯ ರಾಜೀನಾಮೆ ಕೇಳಬೇಕು. ಒಬ್ಬ ಅಂತರರಾಷ್ಟ್ರೀಯ ಶೂಟರ್ ಆರೋಪ ಮಾಡಿದರೂ ಈ ಕುರಿತಂತೆ ಮೋದಿ ಯಾಕೆ ಸ್ವತಂತ್ರ ತನಿಖೆಗೆ ಆದೇಶಿಸಿಲ್ಲ," ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸೋಮವಾರ ಅಂತರರಾಷ್ಟ್ರೀಯ ಶೂಟರ್ ಒಬ್ಬರುಮಾಡಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ಈ ಮೂಲಕ ಸತ್ಯ ಹೊರಬರಲು ತನಿಖೆ ನಡೆಸಬೇಕೆಂದೂ ಪಕ್ಷ ಒತ್ತಾಯಿಸಿದೆ.</p>.<p>ಸ್ಮೃತಿ ಇರಾನಿ ವಿರುದ್ಧದ ಆರೋಪಗಳು ಅತ್ಯಂತ ಗಂಭೀರವಾದುದ್ದಾಗಿವೆ. ಹಾಗಾಗಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಾದರೆ ಪ್ರಧಾನಮಂತ್ರಿ ನರೇಂದ್ರಮೋದಿ, ಪ್ರಕರಣ ಕುರಿತಂತೆ ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಬೇಕು ಎಂದು ಕಾಂಗ್ರೆಸ್ನ ಪ್ರಧಾನ ವಕ್ತಾರ ರಂದೀಪ್ ಸುರ್ಜೇವಾಲಾ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.</p>.<p>ಕೇಂದ್ರ ಮಹಿಳಾ ಆಯೋಗದ ಸದಸ್ಯೆಯಾಗಿ ನೇಮಕ ಮಾಡಲು ಕೇಂದ್ರ ಜವಳಿ ಖಾತೆ ಸಚಿವರ ಜೊತೆ ಮತ್ತಿಬ್ಬರು ನನ್ನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಂತರರಾಷ್ಟ್ರೀಯ ಶೂಟರ್ ಖ್ಯಾತಿಯ ವರ್ತಿಕಾ ಸಿಂಗ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.</p>.<p>ಉತ್ತರ ಪ್ರದೇಶದ ಸುಲ್ತಾನಪುರದ ಜನಪ್ರತಿನಿಧಿಗಳ ನ್ಯಾಯಾಲಯವು ಜನವರಿ 2 ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ, ಬಳಿಕ, ಪ್ರಕರಣವು ತನ್ನ ವ್ಯಾಪ್ತಿಗೆ ಒಳಪಡುತ್ತದೆಯೇ ಎಂದು ಕೋರ್ಟ್ ನಿರ್ಧರಿಸುತ್ತದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.</p>.<p>ಅವರನ್ನು ಕೇಂದ್ರ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿದ್ದು, ಈ ಬಗ್ಗೆರಾಷ್ಟ್ರೀಯ ಮಹಿಳಾ ಆಯೋಗದ ಉಲ್ಲೇಖವಾಗಿದೆ ಎಂದು ಇರಾನಿಗೆ ಹತ್ತಿರದ ಜನರು ಆಕೆಗೆ ನಕಲಿ ಪತ್ರವೊಂದನ್ನು ನೀಡಿರುವುದಾಗಿ ಶೂಟರ್ ಆರೋಪಿಸಿದ್ದಾರೆ.</p>.<p>ಸ್ಕೃತಿ ಇರಾನಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಒಂದೊಮ್ಮೆ ಯುಪಿಎ ಸರ್ಕಾರವಿದ್ದಾಗ ನಮ್ಮ ಸಚಿವರ ಮೇಲೆ ಇಂತಹ ಆರೋಪ ಕೇಳಿಬಂದಿದ್ದರೆ ಇರಾನಿ, ಕಾಂಗ್ರೆಸ್ ಕಚೇರಿ ಮುಂದೆ ಧರಣಿ ನಡೆಸುತ್ತಿದ್ದರು ಎಂದು ಸುರ್ಜೇವಾಲಾ ಹೇಳಿದ್ದಾರೆ.</p>.<p>"ಸ್ಮೃತಿ ಇರಾನಿ ರಾಜೀನಾಮೆ ಕೊಟ್ಟು ಸ್ವತಂತ್ರ ತನಿಖೆ ಎದುರಿಸಬೇಕು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಕೆಯ ರಾಜೀನಾಮೆ ಕೇಳಬೇಕು. ಒಬ್ಬ ಅಂತರರಾಷ್ಟ್ರೀಯ ಶೂಟರ್ ಆರೋಪ ಮಾಡಿದರೂ ಈ ಕುರಿತಂತೆ ಮೋದಿ ಯಾಕೆ ಸ್ವತಂತ್ರ ತನಿಖೆಗೆ ಆದೇಶಿಸಿಲ್ಲ," ಎಂದು ಸುರ್ಜೇವಾಲಾ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>