<p><strong>ನವದೆಹಲಿ</strong>: ಕಾಂಗ್ರೆಸ್ನ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನ ಜನವರಿ 3ರಿಂದ ಆರಂಭವಾಗಲಿದ್ದು, ಜನವರಿ 26ರಂದು ಮಧ್ಯಪ್ರದೇಶದ ಮಾಹೊವ್ನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಕೊನೆಗೊಳ್ಳಲಿದೆ.</p><p>ಈ ವೇಳೆ ಪ್ರತಿ ಬ್ಲಾಕ್, ಜಿಲ್ಲೆ ಮತ್ತು ರಾಜ್ಯಗಳಲ್ಲಿ ರ್ಯಾಲಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.</p><p>2024ರ ಡಿಸೆಂಬರ್ 27ರಂದು ಈ ಅಭಿಯಾನವನ್ನು ಬೆಳಗಾವಿಯಿಂದ ಪ್ರಾರಂಭಿಸಬೇಕಾಗಿತ್ತು. ಡಿಸೆಂಬರ್ 26ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನ ಮತ್ತು ಅವರ ಗೌರವಾರ್ಥ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದರಿಂದ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿತ್ತು.</p><p>ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಕೊನೆಯ ಸಭೆಯಲ್ಲಿ ಅಭಿಯಾನ ಆಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.</p><p>ಸಂವಿಧಾನ ರಕ್ಷಿಸುವ ಮತ್ತು ಭಾರತ ಸ್ವಾತಂತ್ರ್ಯ ಹೋರಾಟದ ಆದರ್ಶಗಳನ್ನು ಉಳಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಸಿಡಬ್ಲ್ಯೂಸಿ ತನ್ನ ನಿರ್ಣಯದಲ್ಲಿ ತಿಳಿಸಿದೆ.</p><p>ಉಳಿದಂತೆ, 2025 ಜನವರಿ 26 ರಿಂದ 2026 ಜನವರಿ 26ರ ನಡುವೆ ‘ಸಂವಿಧಾನ ಬಚಾವೊ ರಾಷ್ಟ್ರೀಯ ಪಾದಯಾತ್ರೆ‘ ಆಯೋಜಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಪಾದಯಾತ್ರೆಯು ಹಳ್ಳಿಯಿಂದ ಹಳ್ಳಿಗೆ, ನಗರದಿಂದ ನಗರಕ್ಕೆ ರಿಲೇ ರೂಪದಲ್ಲಿ ನಡೆಯಲಿದೆ ಎಂದು ತಿಳಿಸಿದೆ. </p><p>ಏಪ್ರಿಲ್ 2025ರ ಮೊದಲಾರ್ಧದಲ್ಲಿ ಎಐಸಿಸಿ ಅಧಿವೇಶನವು ಗುಜರಾತ್ನಲ್ಲಿ ನಡೆಯಲಿದೆ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಂಗ್ರೆಸ್ನ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಅಭಿಯಾನ ಜನವರಿ 3ರಿಂದ ಆರಂಭವಾಗಲಿದ್ದು, ಜನವರಿ 26ರಂದು ಮಧ್ಯಪ್ರದೇಶದ ಮಾಹೊವ್ನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಕೊನೆಗೊಳ್ಳಲಿದೆ.</p><p>ಈ ವೇಳೆ ಪ್ರತಿ ಬ್ಲಾಕ್, ಜಿಲ್ಲೆ ಮತ್ತು ರಾಜ್ಯಗಳಲ್ಲಿ ರ್ಯಾಲಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.</p><p>2024ರ ಡಿಸೆಂಬರ್ 27ರಂದು ಈ ಅಭಿಯಾನವನ್ನು ಬೆಳಗಾವಿಯಿಂದ ಪ್ರಾರಂಭಿಸಬೇಕಾಗಿತ್ತು. ಡಿಸೆಂಬರ್ 26ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನ ಮತ್ತು ಅವರ ಗೌರವಾರ್ಥ 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದ್ದರಿಂದ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿತ್ತು.</p><p>ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಕೊನೆಯ ಸಭೆಯಲ್ಲಿ ಅಭಿಯಾನ ಆಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.</p><p>ಸಂವಿಧಾನ ರಕ್ಷಿಸುವ ಮತ್ತು ಭಾರತ ಸ್ವಾತಂತ್ರ್ಯ ಹೋರಾಟದ ಆದರ್ಶಗಳನ್ನು ಉಳಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಸಿಡಬ್ಲ್ಯೂಸಿ ತನ್ನ ನಿರ್ಣಯದಲ್ಲಿ ತಿಳಿಸಿದೆ.</p><p>ಉಳಿದಂತೆ, 2025 ಜನವರಿ 26 ರಿಂದ 2026 ಜನವರಿ 26ರ ನಡುವೆ ‘ಸಂವಿಧಾನ ಬಚಾವೊ ರಾಷ್ಟ್ರೀಯ ಪಾದಯಾತ್ರೆ‘ ಆಯೋಜಿಸುವ ನಿರ್ಧಾರಕ್ಕೆ ಬರಲಾಗಿದೆ. ಈ ಪಾದಯಾತ್ರೆಯು ಹಳ್ಳಿಯಿಂದ ಹಳ್ಳಿಗೆ, ನಗರದಿಂದ ನಗರಕ್ಕೆ ರಿಲೇ ರೂಪದಲ್ಲಿ ನಡೆಯಲಿದೆ ಎಂದು ತಿಳಿಸಿದೆ. </p><p>ಏಪ್ರಿಲ್ 2025ರ ಮೊದಲಾರ್ಧದಲ್ಲಿ ಎಐಸಿಸಿ ಅಧಿವೇಶನವು ಗುಜರಾತ್ನಲ್ಲಿ ನಡೆಯಲಿದೆ ಎಂದೂ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>